Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಜ್ ಯಾತ್ರೆ ಈ ಬಾರಿ ಹೇಗೆ? ಎಷ್ಟು ಮಂದಿಗೆ ಅವಕಾಶ? ನಿಯಮಗಳು ಕಠಿಣ..

ರಿಯಾದ್: ಕಿಲ್ಲರ್ ಕೊರೊನಾ ವೈರಸ್ ವಿರುದ್ಧ ಇಡೀ ವಿಶ್ವ ತನ್ನ ಯುದ್ಧವನ್ನು ಮುಂದುವರಿಸಿದೆ. ಜೊತೆಗೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದಲ್ಲಿ ನಡೆಯುವ ಹಜ್ ಯಾತ್ರೆಗೆ ವಿವಿಧ ರಾಷ್ಟ್ರಗಳಿಂದ ಬಂದ 1000 ಯಾತ್ರಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತೆ ಎಂದು ಸೌದಿ ಅರೇಬಿಯಾ ಪ್ರಕಟಿಸಿದೆ. ಕಳೆದ ಬಾರಿ 25 ಲಕ್ಷ ಮಂದಿ, ಈ ಬಾರಿ ಸಾವಿರ ಮಂದಿಯಷ್ಟೇ! ಆಧುನಿಕ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೌದಿ ಅರೇಬಿಯಾ ಹೊರಗಿನ ಯಾತ್ರಿಕರನ್ನು ಹೊರಗಿಡುವ ನಿರ್ಧಾರ ತೆಗೆದುಕೊಂಡಿರುವುದು. ಈ ನಿರ್ಧಾರದಿಂದ ವಿಶ್ವಾದ್ಯಂತ ನೆಲೆಸಿರುವ […]

ಹಜ್ ಯಾತ್ರೆ ಈ ಬಾರಿ ಹೇಗೆ? ಎಷ್ಟು ಮಂದಿಗೆ ಅವಕಾಶ? ನಿಯಮಗಳು ಕಠಿಣ..
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Jul 21, 2020 | 10:18 AM

ರಿಯಾದ್: ಕಿಲ್ಲರ್ ಕೊರೊನಾ ವೈರಸ್ ವಿರುದ್ಧ ಇಡೀ ವಿಶ್ವ ತನ್ನ ಯುದ್ಧವನ್ನು ಮುಂದುವರಿಸಿದೆ. ಜೊತೆಗೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾದಲ್ಲಿ ನಡೆಯುವ ಹಜ್ ಯಾತ್ರೆಗೆ ವಿವಿಧ ರಾಷ್ಟ್ರಗಳಿಂದ ಬಂದ 1000 ಯಾತ್ರಿಗಳಿಗೆ ಮಾತ್ರ ಅವಕಾಶ ನೀಡಲಾಗುತ್ತೆ ಎಂದು ಸೌದಿ ಅರೇಬಿಯಾ ಪ್ರಕಟಿಸಿದೆ.

ಕಳೆದ ಬಾರಿ 25 ಲಕ್ಷ ಮಂದಿ, ಈ ಬಾರಿ ಸಾವಿರ ಮಂದಿಯಷ್ಟೇ! ಆಧುನಿಕ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸೌದಿ ಅರೇಬಿಯಾ ಹೊರಗಿನ ಯಾತ್ರಿಕರನ್ನು ಹೊರಗಿಡುವ ನಿರ್ಧಾರ ತೆಗೆದುಕೊಂಡಿರುವುದು. ಈ ನಿರ್ಧಾರದಿಂದ ವಿಶ್ವಾದ್ಯಂತ ನೆಲೆಸಿರುವ ಮುಸ್ಲಿಮರಲ್ಲಿ ನಿರಾಶೆಯನ್ನು ಹುಟ್ಟುಹಾಕಿದೆ. ಆರೋಗ್ಯದ ಅಪಾಯಗಳಿಂದಾಗಿ ಇದು ಅಗತ್ಯವೆಂದು ಹಲವರು ಒಪ್ಪಿಕೊಂಡಿದ್ದಾರೆ ಎಂದು ಬ್ಯಾಂಕಾಕ್ ಪೋಸ್ಟ್ ವರದಿ ಮಾಡಿದೆ. ಕಳೆದ ವರ್ಷ ಐದು ದಿನಗಳ ಆಚರಣೆಯಲ್ಲಿ ಕಡಿಮೆಯೆಂದ್ರೂ 2.5 ಮಿಲಿಯನ್ ಜನರು ಭಾಗಿಯಾಗಿದ್ರು.

ಅಲ್ಲದೆ, ಜುಲೈ 31 ರಿಂದ ಪ್ರಾರಂಭವಾಗಲಿರುವ ಈ ವರ್ಷದ ಹಜ್‌ಗೆ ಆಯ್ಕೆ ಪ್ರಕ್ರಿಯೆ ಏನೆಂಬುದನ್ನು ಸೌದಿ ಅರೇಬಿಯಾ ಇನ್ನು ಪ್ರಕಟಿಸಿಲ್ಲ. ಈ ಬಾರಿ ಯಾತ್ರಿಕರ ಸಂಖ್ಯೆ ಸುಮಾರು 1,000 ಆಗಿರಬಹುದು ಅಥವಾ ಅದಕ್ಕಿಂತ ಕಡಿಮೆ ಆಗಿರಬಹುದು ಎಂದು ಹಜ್ ಸಚಿವ ಮೊಹಮ್ಮದ್ ಬೆಂಟನ್ ತಿಳಿಸಿದ್ದಾರೆ.

ನಿಯಮಗಳು ಕಠಿಣ.. ಈ ಬಾರಿ ತೀರ್ಥಯಾತ್ರೆಗೆ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮಾತ್ರ ಸೀಮಿತವಾಗಿರುತ್ತದೆ ಮತ್ತು ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಅವಕಾಶವಿರುವುದಿಲ್ಲ. ಇದಲ್ಲದೆ, ಪವಿತ್ರ ನಗರವಾದ ಮೆಕ್ಕಾಗೆ ಬರುವ ಮೊದಲು ಯಾತ್ರಿಕರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಮತ್ತು ಆಚರಣೆಯ ನಂತರ ಮನೆಯಲ್ಲಿ ಕ್ಯಾರೆಂಟೈನ್ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ