AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ದೇಶದಲ್ಲಿ ಬೆಳಗ್ಗೆ 5.30ಕ್ಕೆ ಶಾಲೆಗಳು ಆರಂಭವಾಗುತ್ತೆ, ಮಕ್ಕಳು 4 ಗಂಟೆಗೆ ಎದ್ದು ಕಣ್ಣುಜ್ಜುತ್ತಲೇ ಶಾಲೆಗೆ ಬರ್ತಾರೆ

ಸಾಮಾನ್ಯವಾಗಿ ಎಲ್ಲಾ ದೇಶಗಳಲ್ಲಿ ಶಾಲೆಗಳು ಬೆಳಗ್ಗೆ 8-9 ಗಂಟೆಯ ಅವಧಿಯಲ್ಲಿ ಆರಂಭವಾಗುತ್ತವೆ. ಆದರೆ ಇಂಡೋನೇಷ್ಯಾದ ಈ ಪ್ರದೇಶದ ಶಾಲೆಯಲ್ಲಿ ಬೆಳಗ್ಗೆ  5.30ಕ್ಕೆ ತರಗತಿಗಳು ಆರಂಭವಾಗುತ್ತವೆ.

ಈ ದೇಶದಲ್ಲಿ ಬೆಳಗ್ಗೆ 5.30ಕ್ಕೆ ಶಾಲೆಗಳು ಆರಂಭವಾಗುತ್ತೆ, ಮಕ್ಕಳು 4 ಗಂಟೆಗೆ ಎದ್ದು ಕಣ್ಣುಜ್ಜುತ್ತಲೇ ಶಾಲೆಗೆ ಬರ್ತಾರೆ
ವಿದ್ಯಾರ್ಥಿಗಳುImage Credit source: NDTV
ನಯನಾ ರಾಜೀವ್
|

Updated on:Mar 15, 2023 | 12:32 PM

Share

ಸಾಮಾನ್ಯವಾಗಿ ಎಲ್ಲಾ ದೇಶಗಳಲ್ಲಿ ಶಾಲೆಗಳು ಬೆಳಗ್ಗೆ 8-9 ಗಂಟೆಯ ಅವಧಿಯಲ್ಲಿ ಆರಂಭವಾಗುತ್ತವೆ. ಆದರೆ ಇಂಡೋನೇಷ್ಯಾದ ಈ ಪ್ರದೇಶದ ಶಾಲೆಯಲ್ಲಿ ಬೆಳಗ್ಗೆ  5.30ಕ್ಕೆ ತರಗತಿಗಳು ಆರಂಭವಾಗುತ್ತವೆ. ಮಕ್ಕಳು 4 ಗಂಟೆಗೆ ಎದ್ದು ತಯಾರಾಗಿ ಕಣ್ಣುಜ್ಜುತ್ತಲೇ ಶಾಲೆಗೆ ಹೋಗುತ್ತಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಆ ಕತ್ತಲಲ್ಲಿ ಮಕ್ಕಳು ರಸ್ತೆಯಲ್ಲಿ ಆಟೋ, ಟ್ಯಾಕ್ಸಿ, ಶಾಲಾ ಬಸ್​ಗಳಿಗಾಗಿ ಕಾಯುತ್ತಾ ನಿಂತಿರುತ್ತಾರೆ. ಈ ಕುರಿತು ಪೋಷಕರಿಂದ ಆಕ್ಷೇಪವೂ ಕೇಳಿಬಂದಿದೆ.

ಶಿಕ್ಷಕರು ಹೇಳುವುದೇನು? ಮಕ್ಕಳು ಬೆಳಗ್ಗೆ ಬೇಗ ಏಳುವುದಿಲ್ಲ, ಮಕ್ಕಳಲ್ಲಿ ಸೋಮಾರಿತನ ಹೆಚ್ಚಾಗಿರುವುದರಿಂದ ಓದಿನ ಮೇಲೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಮಕ್ಕಳು ಬೇಗ ಎದ್ದರೆ ತುಂಬಾ ಲವಲವಿಕೆಯಿಂದಿರುತ್ತಾರೆ, ಹಾಗಾಗಿ ಈ ನಿಯಮ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ.

ಪೋಷಕರ ವಾದವೇನು? ಮಕ್ಕಳನ್ನು ಅಷ್ಟು ಬೆಳಗ್ಗೆ ಏಳಿಸಲು ಸಾಧ್ಯವಿಲ್ಲ, ಎದ್ದರೂ ನಿದ್ದೆ ಮಂಪರಿನಲ್ಲಿಯೇ ಇರುತ್ತಾರೆ, ವಾಹನಗಳ ವ್ಯವಸ್ಥೆಯೂ ಕಷ್ಟ, ಮಧ್ಯಾಹ್ನ ಮನೆಗೆ ಬಂದ ತಕ್ಷಣ ಮಲಗಿಬಿಡುತ್ತಾರೆ, ಯಾವುದೇ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ, ಮಕ್ಕಳಿಗೆ ಮೊದಲು ಸರಿಯಾದ ನಿದ್ರೆ ಬೇಕು ಎಂದಿದ್ದಾರೆ.

ಸಾಮಾನ್ಯವಾಗಿ ಇಂಡೋನೇಷ್ಯಾದಲ್ಲಿ ಬೆಳಗ್ಗೆ 7-8 ಗಂಟೆಗೆ ಶಾಲೆಗಳು ತೆರೆಯುತ್ತವೆ. ಮಕ್ಕಳಿಗೆ ರಾತ್ರಿ ಇಂದ ಬೆಳಗ್ಗೆ ವರೆಗೆ ಕನಿಷ್ಠ 8 ತಾಸಾದರೂ ನಿದ್ರೆ ಬೇಕು, ಇಲ್ಲವಾದರೆ ಆರೋಗ್ಯ ಹಾಳಾಗುತ್ತದೆ. ಇಂಡೋನೇಷ್ಯಾದ ಕುಪಂಗ್​ನಲ್ಲಿ ಈ ನಿಯಮ ಜಾರಿಯಲ್ಲಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:32 pm, Wed, 15 March 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್