AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disease X ಬರುತಿದೆ ಎಚ್ಚರವಿರಲಿ.. ಎಬೊಲಾದಷ್ಟೇ ಮಾರಣಾಂತಿಕ, ಪ್ರಸರಣದಲ್ಲಿ ಕೊರೊನಾಕ್ಕಿಂತಲೂ ವೇಗ

ಡಿಸೀಸ್​ ಎಕ್ಸ್​ನ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಡೇಲಿ ಮೇಲ್​ ಮಾಧ್ಯಮ ವರದಿ ಮಾಡಿದೆ. ವ್ಯಕ್ತಿಯೋರ್ವನಿಗೆ ಜ್ವರ ಮತ್ತು ರಕ್ತಸ್ರಾವ ಆಗುತ್ತಿತ್ತು. ಇದು ಎಬೋಲಾ ಲಕ್ಷಣವೇ ಆಗಿದ್ದರಿಂದ ಎಬೋಲಾ ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ವರದಿ ನೆಗೆಟಿವ್​ ಬಂದಿದೆ.

Disease X ಬರುತಿದೆ ಎಚ್ಚರವಿರಲಿ.. ಎಬೊಲಾದಷ್ಟೇ ಮಾರಣಾಂತಿಕ, ಪ್ರಸರಣದಲ್ಲಿ ಕೊರೊನಾಕ್ಕಿಂತಲೂ ವೇಗ
ಎಬೊಲಾ ಪತ್ತೆ ಹಚ್ಚಿದ್ದ ವೈದ್ಯ..
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 04, 2021 | 4:38 PM

Share

ನವದೆಹಲಿ: ಕೊರೊನಾ ವೈರಸ್​ನಿಂದ ಜಗತ್ತು ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಹಲವು ಲಸಿಕೆಗಳು ಹೊರಬರುತ್ತಿದ್ದು, ತುರ್ತು ಬಳಕೆಗೆ ಆಯಾ ದೇಶಗಳ ಔಷಧ ನಿಯಂತ್ರಣಾ ಪ್ರಾಧಿಕಾರಗಳಿಂದ ಅನುಮೋದನೆಯನ್ನೂ ಪಡೆಯುತ್ತಿವೆ. ಈ ಮಧ್ಯೆ ಕೊರೊನಾ ರೂಪಾಂತರಿ ವೈರಸ್​ ಕೂಡ ಲಗ್ಗೆಯಿಟ್ಟಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಆದರೆ ಇಷ್ಟಕ್ಕೇ ಮುಗಿಯುವ ಲಕ್ಷಣಗಳು ಕಾಣಿಸುತ್ತಿಲ್ಲ. ಭವಿಷ್ಯದಲ್ಲಿ ಇನ್ನೂ ಮಾರಕ ವೈರಸ್​ಗಳು ಮನುಕುಲಕ್ಕೆ ಕಂಟಕವಾಗಲಿರುವ ಬಗ್ಗೆ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಅದರಲ್ಲೂ Disease X (ಡಿಸೀಸ್​ ಎಕ್ಸ್​) ಎಂಬ ಮಾರಣಾಂತಿಕ ವೈರಸ್ ಶೀಘ್ರದಲ್ಲೇ ಜಗತ್ತಿಗೆ ದಾಂಗುಡಿ ಇಡಲಿದ್ದು, ಇದು ಕೊರೊನಾಕ್ಕಿಂತಲೂ ವೇಗವಾಗಿ ಪ್ರಸರಣವಾಗಲಿದೆ. ಎಬೊಲಾದಷ್ಟೇ ಮಾರಣಾಂತಿಕವಾದ ವೈರಸ್​ ಎಂದು ವಿಜ್ಞಾನಿ, ವೈದ್ಯ ಪ್ರೊಫೆಸರ್ ಜೀನ್-ಜಾಕ್ವೆಸ್ ಮುಯೆಂಬೆ ಟಾಮ್‌ಫಮ್ ತಿಳಿಸಿದ್ದಾರೆ.

ಈ ಜೀನ್​ ಜಾಕ್ವೆಸ್ ಬೇರೆ ಯಾರೂ ಅಲ್ಲ, 1976ರಲ್ಲಿ ಎಬೊಲಾ ವೈರಸ್ ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವೈದ್ಯ. ಮುಂಬರುವ ದಿನಗಳಲ್ಲಿ ಮನುಕುಲ ಡಿಸೀಸ್ ಎಕ್ಸ್​ ನಂತಹ ಹಲವು ಅಪಾಯಕಾರಿ ವೈರಸ್​ಗಳನ್ನು ಎದುರಿಸಬೇಕಾಗುತ್ತದೆ. ಸದ್ಯ Disease X ಎಂಬುದು ಒಂದು ಕಾಲ್ಪನಿಕ ರೋಗವಾಗಿರಬಹುದು. ಆದರೆ ಒಮ್ಮೆ ಇದು ಕಾಣಿಸಿಕೊಂಡರೆ ಜಗತ್ತಿಗೇ ಮಾರಕವಾಗಲಿದೆ. ಆಫ್ರಿಕಾದ ಉಷ್ಣವಲಯದ ಮಳೆಕಾಡುಗಳಿಂದ ಹೊಸ ಮತ್ತು ಮಾರಣಾಂತಿಕ ವೈರಸ್​ಗಳು ಉಗಮಗೊಳ್ಳುತ್ತಿವೆ ಎಂದು ಜಾಕ್ವೆಸ್ ಹೇಳಿದ್ದಾರೆ.

ಮೊದಲ ಪ್ರಕರಣ ಡಿಸೀಸ್​ ಎಕ್ಸ್​ನ ಮೊದಲ ಪ್ರಕರಣ ಪತ್ತೆಯಾಗಿದೆ ಎಂದು ಡೇಲಿ ಮೇಲ್​ ಮಾಧ್ಯಮ ವರದಿ ಮಾಡಿದೆ. ವ್ಯಕ್ತಿಯೋರ್ವನಿಗೆ ಜ್ವರ ಮತ್ತು ರಕ್ತಸ್ರಾವ ಆಗುತ್ತಿತ್ತು. ಇದು ಎಬೋಲಾ ಲಕ್ಷಣವೇ ಆಗಿದ್ದರಿಂದ ಎಬೋಲಾ ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ ವರದಿ ನೆಗೆಟಿವ್​ ಬಂದಿದೆ. ಹೀಗಾಗಿ ಇದನ್ನು ಡಿಸೀಸ್​ ಎಕ್ಸ್ ಎಂದು ಗುರುತಿಸಿರುವ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಕೊವಿಡ್​-19 ಸಾಂಕ್ರಾಮಿಕ ರೋಗಕ್ಕಿಂತಲೂ ಭೀಕರ, ಅಪಾಯಕಾರಿ ಎಂದು ಹೇಳಿದ್ದಾರೆ.

ಕೊರೊನಾ ಲಸಿಕೆಯೊಂದಿಗೆ ರಾಜಕೀಯ ಬೆರಕೆ.. ಒಬ್ಬೊಬ್ಬರದ್ದೂ ಒಂದೊಂದು ರಾಗ: ಆರೋಗ್ಯ ಸಚಿವರು ಹೇಳಿದ್ದೇನು?

Follow Us
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!