AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ, ಪುಟಿನ್ ಸ್ನೇಹ; ಪ್ರೇಕ್ಷಕನಾಗಿ ನಿಂತು ನೋಡುತ್ತಿರುವ ಪಾಕ್ ಪ್ರಧಾನಿ; ಫೋಟೋ ವೈರಲ್

Pak PM Shehbaz Sharif watches as Modi and Putin passes by: ಎಸ್​ಸಿಒ ಶೃಂಗಸಭೆಯಲ್ಲಿ ಭಾರತ, ಚೀನಾ, ರಷ್ಯಾ ದೇಶಗಳು ಪರಸ್ಪರ ಕೈ ಹಿಡಿದು ಶಕ್ತಿ ಪ್ರದರ್ಶನ ತೋರಿವೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಭಾರತದ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಮೊದಲಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪುಟಿನ್ ಮತ್ತು ಮೋದಿ ಅವರ ಮಧ್ಯೆ ಎಂದಿನಂತೆ ಆಪ್ತತೆ ಕಂಡಿತು. ಅವರಿಬ್ಬರು ಮಾತನಾಡುತ್ತಾ ಹಾದು ಹೋಗುವುದನ್ನು ಪಾಕ್ ಪ್ರಧಾನಿ ನೋಡುತ್ತಿರುವ ದೃಶ್ಯ ಕಾಣಿಸಿತು.

ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 01, 2025 | 12:52 PM

Share

ಟಿಯಾಂಜಿನ್, ಸೆಪ್ಟೆಂಬರ್ 1: ಚೀನಾದ ಟಿಯಾಂಜಿನ್​ನಲ್ಲಿ ನಡೆಯುತ್ತಿರುವ ಎಸ್​ಸಿಒ ಶೃಂಗಸಭೆಯು (SCO summt) ಹಲವು ಕುತೂಹಲಕಾರಿ ಘಟನೆಗಳಿಗೆ ಸಾಕ್ಷಿಯಾಗಿವೆ. ಭಾರತ, ಚೀನಾ, ರಷ್ಯಾ ಈ ತ್ರಿಶಕ್ತಿಗಳ ಸಮಾಗಮಕ್ಕೆ ಈ ಸಭೆ ವೇದಿಕೆಯಾಗಿದೆ. ಹಲವು ವರ್ಷಗಳ ಬಳಿಕ ನರೇಂದ್ರ ಮೋದಿ (Narendra Modi) ಅವರು ಚೀನಾಗೆ ಭೇಟಿ ನೀಡಿದ್ದಾರೆ. ಅಮೆರಿಕದ ಟ್ಯಾರಿಫ್ ನೀತಿಗೆ ಪ್ರತಿರೋಧ ತೋರುತ್ತಿರುವ ಭಾರತವನ್ನು ತನ್ನೆಡೆ ಸೆಳೆಯಲು ಚೀನಾ ಮಾಡುತ್ತಿರುವ ಪ್ರಯತ್ನ ಸ್ಪಷ್ಟವಾಗಿದೆ. ಇದೇ ವೇಳೆ, ಎಸ್​ಸಿಒ ಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಆಪ್ತತೆ ಬಹಳ ಸ್ಪಷ್ಟವಾಗಿ ಗೋಚರವಾಯಿತು.

ವ್ಲಾದಿಮಿರ್ ಪುಟಿನ್ ಮತ್ತು ನರೇಂದ್ರ ಮೋದಿ ಮಾತನಾಡುತ್ತಾ ಹೋಗುವುದನ್ನು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ನಿಂತು ನೋಡುತ್ತಿದ್ದ ದೃಶ್ಯವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಂಚಿಕೆ ಆಗುತ್ತಿದೆ. ಭಾರತ, ಚೀನಾ, ರಷ್ಯಾ ಮುಖ್ಯಸ್ಥರು ಒಂದೆಡೆ ಗುಂಪುಗೂಡಿ ಹರಟೆ ಹೊಡೆಯುತ್ತಿರುವ ದೃಶ್ಯವೂ ವೈರಲ್ ಆಗುತ್ತಿದೆ.

ಇದನ್ನೂ ಓದಿ: ಎಸ್​ಸಿಒ ಸಮಿಟ್​ನಲ್ಲಿ ಭಯೋತ್ಪಾದನೆ ವಿರುದ್ಧ ವ್ಯಕ್ತವಾದ ಖಂಡನೆ; ಭಾರತದ ನಿಲುವಿಗೆ ಬೆಂಬಲ, ಪಾಕಿಸ್ತಾನಕ್ಕೆ ಪರೋಕ್ಷ ಮುಖಭಂಗ

ಪ್ರಧಾನಿ ನರೇಂದ್ರ ಮೋದಿ ಅವರು ತಾವು ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದ ಸಂದರ್ಭದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಧ್ಯಕ್ಷ ಪುಟಿನ್ ಅವರನ್ನು ಭೇಟಿ ಮಾಡುವುದು ಖುಷಿ ನೀಡುತ್ತದೆ ಎಂದು ಮೋದಿ ಹೇಳಿದ್ದಾರೆ.

ನರೇಂದ್ರ ಮೋದಿ ಅವರ ಎಕ್ಸ್ ಪೋಸ್ಟ್

ಈ ಶಂಗಸಭೆಯ ಜೊತೆ ಜೊತೆಯಲ್ಲೇ ಭಾರತವು ಚೀನಾದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದೆ. ನರೇಂದ್ರ ಮೋದಿ ಮತ್ತು ಷಿ ಜಿನ್​ಪಿಂಗ್ ಮಧ್ಯೆ ಮಾತುಕತೆ ನಡೆಯಿತು. ಇವತ್ತು ಎಸ್​ಸಿಒ ಸಮಿಟ್ ಬಳಿಕ ನರೇಂದ್ರ ಮೋದಿ ಮತ್ತು ಪುಟಿನ್ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ. ಸಭೆ ಬಳಿಕ ಈ ಮಾತುಕತೆಗೆ ಇಬ್ಬರೂ ಒಂದೇ ಕಾರಿನಲ್ಲಿ ಒಟ್ಟಿಗೆ ತೆರಳಿದರು.

ಇದನ್ನೂ ಓದಿ: ದ್ವಿಪಕ್ಷೀಯ ಮಾತುಕತೆಯಲ್ಲಿ ಭಾರತದಿಂದ ಭಯೋತ್ಪಾದನೆ ವಿಚಾರ; ಚೀನಾದಿಂದಲೂ ಬೆಂಬಲ

ಈ ಎಸ್​ಸಿಒ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿದರು. ಪಹಲ್ಗಾಂ ಉಗ್ರ ದಾಳಿ ಘಟನೆಯನ್ನು ಉಲ್ಲೇಖಿಸಿ, ಭಯೋತ್ಪಾದನೆ ವಿಚಾರದಲ್ಲಿ ವಿವಿಧ ರಾಷ್ಟ್ರಗಳ ದ್ವಂದ್ವ ನಿಲುವನ್ನು ಪ್ರಶ್ನಿಸಿದರು. ಈ ಸಮಿಟ್​ನಲ್ಲಿ ಭಾರತದ ಅಭಿಪ್ರಾಯಕ್ಕೆ ಸದಸ್ಯ ರಾಷ್ಟ್ರಗಳು ಬೆಂಬಲ ನೀಡಿವೆ. ಟಿಯಾಂಜಿನ್ ಡಿಕ್ಲರೇಶನ್​ನಲ್ಲಿ ಪಹಲ್ಗಾಂ ದಾಳಿ ಘಟನೆಯನ್ನು ಖಂಡಿಸಲಾಗಿದೆ. ಈ ದಾಳಿಗೆ ಬೆಂಬಲ ನೀಡಿದವರಿಗೆ ಶಾಸ್ತಿಯಾಗಬೇಕೆಂದು ಆಗ್ರಹಿಸಲಾಗಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Mon, 1 September 25

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!