AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan act against Terrorists: ದಕ್ಷಿಣ ವಜಿರಿಸ್ತಾನದ ಉಗ್ರತಾಣವೊಂದರ ಮೇಲೆ ಭದ್ರತಾ ದಳ ದಾಳಿ, 11 ಭಯೋತ್ಪಾದಕರ ಹತ್ಯೆ

ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಸ್ಥಳೀಯ ನಾಯಕ ಹಫೀಜ್ ಉಲ್ಲಾಹ್ ಸೇರಿದಂತೆ 11 ಉಗ್ರರನ್ನು ಭದ್ರತಾ ದಳಗಳು ಕೊಂದಿವೆ. ಅವರಲ್ಲಿ ಇಬ್ಬರು ಆತ್ಮಹತ್ಯೆ ಬಾಂಬರ್ ಗಳು ಕೂಡ ಸೇರಿದ್ದಾರೆ.

Pakistan act against Terrorists: ದಕ್ಷಿಣ ವಜಿರಿಸ್ತಾನದ ಉಗ್ರತಾಣವೊಂದರ ಮೇಲೆ ಭದ್ರತಾ ದಳ ದಾಳಿ, 11 ಭಯೋತ್ಪಾದಕರ ಹತ್ಯೆ
ಪಾಕಿಸ್ತಾನದ ಭದ್ರತಾ ಪಡೆಗಳಿಂದ ಉಗ್ರರ ವಿರುದ್ಧ ಕಾರ್ಯಾಚರಣೆ
TV9 Web
| Edited By: |

Updated on: Jan 06, 2023 | 12:39 PM

Share

ಪಾಕಿಸ್ತಾನ ತಾನೇ ಆಶ್ರಯ ನೀಡಿದ ಭಯೋತ್ಪಾದಕರ (Terrorists) ವಿರುದ್ಧ ಕಾರ್ಯಾಚರಣೆ ಆರಂಭಿಸಿರುವುದು ಗಮನಾರ್ಹ ಸಂಗತಿ. ದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ಕೃತ್ಯಗಳನ್ನು ಮಟ್ಟಹಾಕುವುದಕ್ಕಾಗಿ ಗುಪ್ತಚರ ವಿಭಾಗ ನೀಡಿದ ಮಾಹಿತಿಯೊಂದನ್ನು ಆಧರಿಸಿ ಪಾಕಿಸ್ತಾನದದ ಭದ್ರತಾ ದಳಗಳು (security forces) ದಕ್ಷಿಣ ವಜಿರಿಸ್ತಾನಲ್ಲಿದ್ದ (South Waziristan) ಉಗ್ರರ ನೆಲೆಯೊಂದರ ಮೇಲೆ ದಾಳಿ ನಡೆಸಿ 11 ಭಯೋತ್ಪಾದಕರನ್ನು ಕೊಂದಿವೆ. ‘ಗುಪ್ತಚರ ವಿಭಾಗದ ಮಾಹಿತಿ ಆಧರಿಸಿ ವಜಿರಿಸ್ತಾನದ ಸಾಮಾನ್ಯ ಪ್ರದೇಶವೊಂದರ ಮೇಲೆ ನಮ್ಮ ಸಿಬ್ಬಂದಿ ದಳಗಳು ಆಕ್ರಮಣ ನಡೆಸಿ ಉನ್ನತ ಮಟ್ಟದ ಭಯೋತ್ಪಾದಕ ಚಟುವಟಿಕೆ ತಾಣವೊಂದನ್ನು ಧ್ವಂಸಗೊಳಿಸಿವೆ,’ ಎಂದು ಪಾಕಿಸ್ತಾನದ ಮಿಲಿಟರಿ ಮಾಧ್ಯಮವಾಗಿರುವ ಸಾರ್ವಜನಿಕ ಆಂತರಿಕ ಸೇವೆಗಳ ಸಂಸ್ಥೆಯ (ಐ ಎಸ್ ಪಿ ಅರ್) ಹೇಳಿಕೆಯನ್ನು ಆಧರಿಸಿ ಜಿಯೋ ನ್ಯೂಸ್ ವರದಿ ಮಾಡಿದೆ.

ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ಸ್ಥಳೀಯ ನಾಯಕ ಹಫೀಜ್ ಉಲ್ಲಾಹ್ ಸೇರಿದಂತೆ 11 ಉಗ್ರರನ್ನು ಭದ್ರತಾ ದಳಗಳು ಕೊಂದಿವೆ. ಅವರಲ್ಲಿ ಇಬ್ಬರು ಆತ್ಮಹತ್ಯೆ ಬಾಂಬರ್ ಗಳು ಕೂಡ ಸೇರಿದ್ದಾರೆ. ದಾಳಿ ನಡೆಸಿದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಬರಾಮತ್ತು ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಯೋಗಿ ಸರ್ಕಾರಕ್ಕೆ ಬಿಗ್ ರಿಲೀಫ್: OBC ಮೀಸಲಾತಿ ನೀಡದೆ ಸ್ಥಳೀಯ ಚುನಾವಣೆ ನಡೆಸಿ, ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

‘ಹತ್ಯೆಯಾಗಿರುವ ಉಗ್ರರು ಭಯೋತ್ಪದಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು ಮತ್ತು ದಕ್ಷಿಣ ವಜಿರಿಸ್ತಾನದ ಪೊಲೀಸ್ ಮತ್ತು ಭದ್ರತಾ ದಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದರು,’ ಎಂದು ಐ ಎಸ್ ಪಿ ಆರ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಪಾಕಿಸ್ತಾನದ ನಿಷೇಧಿತ ಭಯೋತ್ಪಾದಕರ ಗುಂಪು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ ಕಳೆದ ವರ್ಷದ ನವೆಂಬರ್ ನಲ್ಲಿ ಕದನವಿರಾಮವನ್ನು ಉಲ್ಲಂಘಿಸಿದ ಬಳಿಕ ದೇಶದಲ್ಲಿ ಭಯೋತ್ಪಾದಕ ಕೃತ್ಯಗಳು ಹೆಚ್ಚಿವೆ.

ತಾಲಿಬಾನ್ ಆಡಳಿತದ ಅಪಘಾನಿಸ್ತಾನವು ಪಾಕಿಸ್ತಾನದ ವಿರುದ್ಧ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ತನ್ನ ದೇಶದಲ್ಲಿ ಸ್ಥಳಾವಕಾಶ ಮಾಡಿಕೊಟ್ಟಿದೆ ಎಂದು ಇಸ್ಲಾಮಾಬಾದ್ ಆರೋಪಿಸಿದ ಬಳಿಕ ಎರಡು ರಾಷ್ಟ್ರಗಳ ನಡುವಿನ ಸಂಬಂಧಗಳು ಹಳಸಿವೆ.

ಇದನ್ನೂ ಓದಿ: ಸೆನ್ಸೇಷನಲ್ ಕ್ರೈಮ್ ಕತೆಗಳು: ಕೊಲೆಯಾದ ಮಹಿಳೆಯೇ ಪ್ರೇತಾತ್ಮವಾಗಿ ಹಂತಕನನ್ನು ಹಿಡಿದುಕೊಟ್ಟ ನಂಬಲಸದಳ ಕತೆಯಿದು!

ಡಾನ್ ನಲ್ಲಿ ಪ್ರಕಟವಾಗಿರುವ ವರದಿಯೊಂದರ ಪ್ರಕಾರ ದಕ್ಷಿಣ ವಜಿರಿಸ್ತಾನಲ್ಲಿ ಭಯೋತ್ಪಾದಕರು; ಭದ್ರತಾ ದಳ ಹಾಗೂ ಅಮಾಯಕ ನಾಗರಿಕರನ್ನು ಗುರಿಯಾಗಿಸಿಕೊಂಡು ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿದ್ದರು ಎಂದು ಐ ಎಸ್ ಪಿ ಆರ್ ವರದಿ ಮಾಡಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?