Sign In

By signing in or creating an account, you agree with Associated Broadcasting Company's Terms & Conditions and Privacy Policy.

Evin prison fire ಇರಾನ್‌ನ ಎವಿನ್ ಜೈಲಿನಲ್ಲಿ ಅಗ್ನಿ ದುರಂತ; ನಾಲ್ವರು ಕೈದಿಗಳು ಸಜೀವ ದಹನ, 61 ಕೈದಿಗಳಿಗೆ ಗಾಯ

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಟೆಹ್ರಾನ್‌ನ ಸೈಟ್‌ನಲ್ಲಿ ಬೆಂಕಿ ಮತ್ತು ಹೊಗೆ ಕಾಣುತ್ತಿದ್ದು ಗುಂಡು ಮತ್ತು ಸ್ಫೋಟದ ಸದ್ದು ಕೇಳುತ್ತಿದೆ

Evin prison fire ಇರಾನ್‌ನ ಎವಿನ್ ಜೈಲಿನಲ್ಲಿ ಅಗ್ನಿ ದುರಂತ; ನಾಲ್ವರು ಕೈದಿಗಳು ಸಜೀವ ದಹನ, 61 ಕೈದಿಗಳಿಗೆ ಗಾಯ
ಎವಿನ್ ಜೈಲಿನಲ್ಲಿ ಅಗ್ನಿ ದುರಂತImage Credit source: Twitter
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 16, 2022 | 9:35 PM

ಇರಾನ್‌ನ (Iran) ಕುಖ್ಯಾತ ಎವಿನ್ ಜೈಲಿನಲ್ಲಿ (Evin prison) ಸಂಭವಿಸಿದ ಅಗ್ನಿ ದುರಂತದಲ್ಲಿ (Fire) ನಾಲ್ವರು ಕೈದಿಗಳು ಸಾವಿಗೀಡಾಗಿದ್ದು 61 ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್ ರಾಜ್ಯ ಸುದ್ದಿ ಸಂಸ್ಥೆ ತಿಳಿಸಿದೆ. ಜೈಲಿನೊಳಗಿನ ಮೂಲಗಳ ಪ್ರಕಾರ ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಬಿಬಿಸಿ ವರದಿ ಮಾಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಟೆಹ್ರಾನ್‌ನ ಸೈಟ್‌ನಲ್ಲಿ ಬೆಂಕಿ ಮತ್ತು ಹೊಗೆ ಕಾಣುತ್ತಿದ್ದು ಗುಂಡು ಮತ್ತು ಸ್ಫೋಟದ ಸದ್ದು ಕೇಳುತ್ತಿದೆ. ವಾರಗಳಿಂದ ಇರಾನ್ ನಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ನಡೆಯುತ್ತಿವೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಇರಾನ್‌ನ ಮಿಜಾನ್ ಸುದ್ದಿ ಸಂಸ್ಥೆ ತಿಳಿಸಿದೆ.

ಕಾರಾಗೃಹದಲ್ಲಿನ ಪರಿಸ್ಥಿತಿಯು ಇತ್ತೀಚಿನ ಪ್ರತಿಭಟನೆಗೆ ಸಂಬಂಧ ಹೊಂದಿದೆಯೇ ಎಂಬುದು ಇನ್ನೂ ತಿಳಿದಿಲ್ಲ ಎಂದು ಬಿಬಿಸಿ ಪರ್ಷಿಯನ್ ಹೇಳಿದೆ.  ಆದರೆ ಇದಾಗುವ ಸಾಧ್ಯತೆ ಇದೆ, ನೂರಾರು ಪ್ರತಿಭಟನಾಕಾರರನ್ನು ಎವಿನ್‌ಗೆ ಕಳುಹಿಸಲಾಗಿದೆ ಎಂದು ಬಿಬಿಸಿ ಪರ್ಷಿಯನ್ ವರದಿಗಾರ  ರಾಣಾ  ರಹಿಂಪೋರ್ ಹೇಳಿದ್ದಾರೆ

ಕಳೆದ ತಿಂಗಳು 22 ವರ್ಷದ ಕುರ್ದಿಶ್ ಇರಾನಿನ ಮಹ್ಸಾ ಅಮಿನಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ನಂತರ ಆ ಪ್ರತಿಭಟನೆಗಳು ಆರಂಭವಾದವು. ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಆಕೆಯ ಕುಟುಂಬವು  ಆಕೆಗೆ ನೈತಿಕ ಪೊಲೀಸರು ಥಳಿಸಿದ್ದಾರೆ ಎಂದು ಹೇಳಿದರು.

ಎವಿನ್ ಜೈಲಿನಲ್ಲಿನ ಘಟನೆಗಳು ನಡೆಯುತ್ತಿರುವ ಪ್ರತಿಭಟನೆಗಳೊಂದಿಗೆ ಸಂಬಂಧ ಹೊಂದಿಲ್ಲ ಎಂದು ರಾಜ್ಯ ಮಾಧ್ಯಮವು ಹೇಳಿದೆ. ಜೈಲಿನ ಒಳಗಿನಿಂದ ಮಾತನಾಡಿದ ಟೆಹ್ರಾನ್‌ನ ಗವರ್ನರ್, ಸಣ್ಣ ಅಪರಾಧಿಗಳನ್ನು ಹೊಂದಿರುವ ಜೈಲಿನ ವಿಭಾಗದಲ್ಲಿ ಗಲಭೆ ನಡೆದಿದೆ ಎಂದು ರಾಜ್ಯ ಟಿವಿಗೆ ತಿಳಿಸಿದರು.

ಜೈಲಿನ ಹೊಲಿಗೆ ಕಾರ್ಯಾಗಾರದಲ್ಲಿ ಬೆಂಕಿ ಕಾಣಿಸಿಕೊಂಡಾಗ ಗಾಯಗೊಂಡವರಿಗೆ ಉಸಿರಾಟದ ತೊಂದರೆ ಉಂಟಾಗಿದೆ ಎಂದು ಇರಾನ್‌ನ ಮಿಜಾನ್ ನ್ಯೂಸ್ ಹೇಳಿದೆ.

ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪತ್ರಕರ್ತರು ಅಧಿಕಾರಿಗಳು “ಉದ್ದೇಶಪೂರ್ವಕವಾಗಿ ಜೈಲಿಗೆ ಬೆಂಕಿ ಹಚ್ಚಿದ್ದಾರೆ” ಎಂದು ಆರೋಪಿಸಿದ್ದಾರೆ. ಇರಾನ್‌ನ ದಿವಂಗತ ಮಾಜಿ ಅಧ್ಯಕ್ಷ ಅಕ್ಬರ್ ಹಶೆಮಿ ರಫ್ಸಂಜಾನಿ ಅವರ ಪುತ್ರ ಮೆಹದಿ ಹಶೆಮಿ ರಫ್ಸಂಜಾನಿ ಅವರಿಗೆ  ತಾತ್ಕಾಲಿಕ ಬಿಡುಗಡೆ” ನೀಡಿದ ನಂತರ ಈ ದುರಂತ ನಡೆದಿದೆ.

Published On - 7:18 pm, Sun, 16 October 22

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್