AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Evin prison fire ಇರಾನ್‌ನ ಎವಿನ್ ಜೈಲಿನಲ್ಲಿ ಅಗ್ನಿ ದುರಂತ; ನಾಲ್ವರು ಕೈದಿಗಳು ಸಜೀವ ದಹನ, 61 ಕೈದಿಗಳಿಗೆ ಗಾಯ

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಟೆಹ್ರಾನ್‌ನ ಸೈಟ್‌ನಲ್ಲಿ ಬೆಂಕಿ ಮತ್ತು ಹೊಗೆ ಕಾಣುತ್ತಿದ್ದು ಗುಂಡು ಮತ್ತು ಸ್ಫೋಟದ ಸದ್ದು ಕೇಳುತ್ತಿದೆ

Evin prison fire ಇರಾನ್‌ನ ಎವಿನ್ ಜೈಲಿನಲ್ಲಿ ಅಗ್ನಿ ದುರಂತ; ನಾಲ್ವರು ಕೈದಿಗಳು ಸಜೀವ ದಹನ, 61 ಕೈದಿಗಳಿಗೆ ಗಾಯ
ಎವಿನ್ ಜೈಲಿನಲ್ಲಿ ಅಗ್ನಿ ದುರಂತImage Credit source: Twitter
TV9 Web
| Edited By: |

Updated on:Oct 16, 2022 | 9:35 PM

Share

ಇರಾನ್‌ನ (Iran) ಕುಖ್ಯಾತ ಎವಿನ್ ಜೈಲಿನಲ್ಲಿ (Evin prison) ಸಂಭವಿಸಿದ ಅಗ್ನಿ ದುರಂತದಲ್ಲಿ (Fire) ನಾಲ್ವರು ಕೈದಿಗಳು ಸಾವಿಗೀಡಾಗಿದ್ದು 61 ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್ ರಾಜ್ಯ ಸುದ್ದಿ ಸಂಸ್ಥೆ ತಿಳಿಸಿದೆ. ಜೈಲಿನೊಳಗಿನ ಮೂಲಗಳ ಪ್ರಕಾರ ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಬಿಬಿಸಿ ವರದಿ ಮಾಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಟೆಹ್ರಾನ್‌ನ ಸೈಟ್‌ನಲ್ಲಿ ಬೆಂಕಿ ಮತ್ತು ಹೊಗೆ ಕಾಣುತ್ತಿದ್ದು ಗುಂಡು ಮತ್ತು ಸ್ಫೋಟದ ಸದ್ದು ಕೇಳುತ್ತಿದೆ. ವಾರಗಳಿಂದ ಇರಾನ್ ನಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ನಡೆಯುತ್ತಿವೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಇರಾನ್‌ನ ಮಿಜಾನ್ ಸುದ್ದಿ ಸಂಸ್ಥೆ ತಿಳಿಸಿದೆ.

ಕಾರಾಗೃಹದಲ್ಲಿನ ಪರಿಸ್ಥಿತಿಯು ಇತ್ತೀಚಿನ ಪ್ರತಿಭಟನೆಗೆ ಸಂಬಂಧ ಹೊಂದಿದೆಯೇ ಎಂಬುದು ಇನ್ನೂ ತಿಳಿದಿಲ್ಲ ಎಂದು ಬಿಬಿಸಿ ಪರ್ಷಿಯನ್ ಹೇಳಿದೆ.  ಆದರೆ ಇದಾಗುವ ಸಾಧ್ಯತೆ ಇದೆ, ನೂರಾರು ಪ್ರತಿಭಟನಾಕಾರರನ್ನು ಎವಿನ್‌ಗೆ ಕಳುಹಿಸಲಾಗಿದೆ ಎಂದು ಬಿಬಿಸಿ ಪರ್ಷಿಯನ್ ವರದಿಗಾರ  ರಾಣಾ  ರಹಿಂಪೋರ್ ಹೇಳಿದ್ದಾರೆ

ಕಳೆದ ತಿಂಗಳು 22 ವರ್ಷದ ಕುರ್ದಿಶ್ ಇರಾನಿನ ಮಹ್ಸಾ ಅಮಿನಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ನಂತರ ಆ ಪ್ರತಿಭಟನೆಗಳು ಆರಂಭವಾದವು. ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಆಕೆಯ ಕುಟುಂಬವು  ಆಕೆಗೆ ನೈತಿಕ ಪೊಲೀಸರು ಥಳಿಸಿದ್ದಾರೆ ಎಂದು ಹೇಳಿದರು.

ಎವಿನ್ ಜೈಲಿನಲ್ಲಿನ ಘಟನೆಗಳು ನಡೆಯುತ್ತಿರುವ ಪ್ರತಿಭಟನೆಗಳೊಂದಿಗೆ ಸಂಬಂಧ ಹೊಂದಿಲ್ಲ ಎಂದು ರಾಜ್ಯ ಮಾಧ್ಯಮವು ಹೇಳಿದೆ. ಜೈಲಿನ ಒಳಗಿನಿಂದ ಮಾತನಾಡಿದ ಟೆಹ್ರಾನ್‌ನ ಗವರ್ನರ್, ಸಣ್ಣ ಅಪರಾಧಿಗಳನ್ನು ಹೊಂದಿರುವ ಜೈಲಿನ ವಿಭಾಗದಲ್ಲಿ ಗಲಭೆ ನಡೆದಿದೆ ಎಂದು ರಾಜ್ಯ ಟಿವಿಗೆ ತಿಳಿಸಿದರು.

ಜೈಲಿನ ಹೊಲಿಗೆ ಕಾರ್ಯಾಗಾರದಲ್ಲಿ ಬೆಂಕಿ ಕಾಣಿಸಿಕೊಂಡಾಗ ಗಾಯಗೊಂಡವರಿಗೆ ಉಸಿರಾಟದ ತೊಂದರೆ ಉಂಟಾಗಿದೆ ಎಂದು ಇರಾನ್‌ನ ಮಿಜಾನ್ ನ್ಯೂಸ್ ಹೇಳಿದೆ.

ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಪತ್ರಕರ್ತರು ಅಧಿಕಾರಿಗಳು “ಉದ್ದೇಶಪೂರ್ವಕವಾಗಿ ಜೈಲಿಗೆ ಬೆಂಕಿ ಹಚ್ಚಿದ್ದಾರೆ” ಎಂದು ಆರೋಪಿಸಿದ್ದಾರೆ. ಇರಾನ್‌ನ ದಿವಂಗತ ಮಾಜಿ ಅಧ್ಯಕ್ಷ ಅಕ್ಬರ್ ಹಶೆಮಿ ರಫ್ಸಂಜಾನಿ ಅವರ ಪುತ್ರ ಮೆಹದಿ ಹಶೆಮಿ ರಫ್ಸಂಜಾನಿ ಅವರಿಗೆ  ತಾತ್ಕಾಲಿಕ ಬಿಡುಗಡೆ” ನೀಡಿದ ನಂತರ ಈ ದುರಂತ ನಡೆದಿದೆ.

Published On - 7:18 pm, Sun, 16 October 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?