AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ: ಫೇಸ್​​ಬುಕ್​​ ಪೋಸ್ಟ್​​ನಲ್ಲಿ ಇಸ್ಲಾಂ ಧರ್ಮದ ಅವಹೇಳನ ಆರೋಪ, ಹಿಂದೂಗಳ ಮನೆ, ದೇವಾಲಯ ಮೇಲೆ ದಾಳಿ

ಆಕಾಶ್ ಸಾಹಾ ಎಂಬ ಯುವಕ ಫೇಸ್​​ಬುಕ್​​ನಲ್ಲಿ ಪೋಸ್ಟೊಂದು ಹಾಕಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಮರು ದಾಳಿ ನಡೆಸಿದ್ದಾರೆ.

ಬಾಂಗ್ಲಾದೇಶ: ಫೇಸ್​​ಬುಕ್​​ ಪೋಸ್ಟ್​​ನಲ್ಲಿ ಇಸ್ಲಾಂ ಧರ್ಮದ ಅವಹೇಳನ ಆರೋಪ, ಹಿಂದೂಗಳ ಮನೆ, ದೇವಾಲಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಹಿಂದೂ ಮನೆ ಮೇಲೆ ದಾಳಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 17, 2022 | 2:45 PM

Share

ಫೇಸ್​​ಬುಕ್ (Facebook)​​ ಪೋಸ್ಟ್​​ನಲ್ಲಿ ಇಸ್ಲಾಂ ಧರ್ಮವನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪದ ಮೇಲೆ ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಲವಾರು ಮನೆ , ಅಂಗಡಿ ಮತ್ತು ಹಿಂದೂ (Hindu) ದೇಗುಲಗಳ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ವರದಿಗಳ ಪ್ರಕಾರ ಶುಕ್ರವಾರ ಸಂಜೆ ದಿಗೋಲಿಯಾ ಗ್ರಾಮದಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ್ದು ಜನರ ಗುಂಪನ್ನು ಚದುರಿಸಲು ಪೊಲೀಸರು ಎಚ್ಚರಿಕೆ ಗುಂಡು ಹಾರಿಸಿದ್ದಾರೆ. ಇಲ್ಲಿ ಹೆಚ್ಚುವರಿ ಕಾನೂನು ಪಾಲಕರನ್ನು ನಿಯೋಜಿಸಲಾಗಿದ್ದು , ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ. ಆಕಾಶ್ ಸಾಹಾ ಎಂಬ ಯುವಕ ಫೇಸ್​​ಬುಕ್​​ನಲ್ಲಿ ಪೋಸ್ಟೊಂದು ಹಾಕಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಮರು ದಾಳಿ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕಾಶ್ ಸಾಹಾ ಮತ್ತು ಅವರ ಅಪ್ಪ ಅಶೋಕ್ ಸಾಹಾ ಅವರನ್ನು ಬಂಧಿಸಿದ್ದಾರೆ. ಆಕಾಶ್ ಸಾಹಾ ಅವರು ಹಜರತ್ ಮುಹಮ್ಮದ್ ಅವರನ್ನು ಅವಹೇಳನ ಮಾಡಿ ಜುಲೈ 14ರಂದು ಫೇಸ್​​ಬುಕ್ ಪೋಸ್ಟೊಂದನ್ನು ಹಾಕಿದ್ದರು. ಇದರಿಂದ ಕುಪಿತಗೊಂಡ ಜನರ ಗುಂಪೊಂದು ಅಂದು ಮಧ್ಯಾಹ್ನ ಸಾಹಾ ಮನೆ ಮುಂದೆ ಪ್ರತಿಭಟನೆ ನಡೆಸಿ ಅವರ ಮನೆಯ ಕೋಣೆಯೊಂದಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಜೂನ್ 18ರಂದು ನಾರೈಲಿಯಲ್ಲಿ ನೂಪುರ್ ಶರ್ಮಾ ಅವರ ಫೋಟೊ ಹಾಕಿ ಬೆಂಬಲಿಸಿದ ವಿದ್ಯಾರ್ಥಿಯೊಬ್ಬರಿಗೆ ಕಾಲೇಜು ಪ್ರಾಂಶುಪಾಲರು ಬೆಂಬಲ ನೀಡಿದ್ದಾರೆ ಎಂಬ ಆರೋಪದಲ್ಲಿ ಅಲ್ಲಿನ ಸ್ಥಳೀಯರು ಪ್ರಾಂಶುಪಾಲರಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದ್ದ ಘಟನೆ ವರದಿಯಾಗಿದೆ. ಸುದ್ದಿವಾಹಿನಿಯೊಂದರ ಚರ್ಚೆ ವೇಳೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿದ ಆಕ್ಷೇಪಾರ್ಹ ಹೇಳಿಕೆಗೆ ಜಗತ್ತಿನಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಮುಸ್ಲಿಂ ಪ್ರಾಬಲ್ಯವಿರುವ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳ ಮೇಲೆ ದಾಳಿ ಹೆಚ್ಚುತ್ತಿದ್ದು ಹೆಚ್ಚಿನವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ಫೇಕ್ ಪೋಸ್ಟ್ ಅಥವಾ ವದಂತಿಗಳಿಗೆ ಸಂಬಂಧಪಟ್ಟದ್ದಾಗಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ