AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶ: ಫೇಸ್​​ಬುಕ್​​ ಪೋಸ್ಟ್​​ನಲ್ಲಿ ಇಸ್ಲಾಂ ಧರ್ಮದ ಅವಹೇಳನ ಆರೋಪ, ಹಿಂದೂಗಳ ಮನೆ, ದೇವಾಲಯ ಮೇಲೆ ದಾಳಿ

ಆಕಾಶ್ ಸಾಹಾ ಎಂಬ ಯುವಕ ಫೇಸ್​​ಬುಕ್​​ನಲ್ಲಿ ಪೋಸ್ಟೊಂದು ಹಾಕಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಮರು ದಾಳಿ ನಡೆಸಿದ್ದಾರೆ.

ಬಾಂಗ್ಲಾದೇಶ: ಫೇಸ್​​ಬುಕ್​​ ಪೋಸ್ಟ್​​ನಲ್ಲಿ ಇಸ್ಲಾಂ ಧರ್ಮದ ಅವಹೇಳನ ಆರೋಪ, ಹಿಂದೂಗಳ ಮನೆ, ದೇವಾಲಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಹಿಂದೂ ಮನೆ ಮೇಲೆ ದಾಳಿ
TV9 Web
| Edited By: |

Updated on: Jul 17, 2022 | 2:45 PM

Share

ಫೇಸ್​​ಬುಕ್ (Facebook)​​ ಪೋಸ್ಟ್​​ನಲ್ಲಿ ಇಸ್ಲಾಂ ಧರ್ಮವನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪದ ಮೇಲೆ ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಲವಾರು ಮನೆ , ಅಂಗಡಿ ಮತ್ತು ಹಿಂದೂ (Hindu) ದೇಗುಲಗಳ ಮೇಲೆ ದಾಳಿ ನಡೆಸಿ ಬೆಂಕಿ ಹಚ್ಚಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ವರದಿಗಳ ಪ್ರಕಾರ ಶುಕ್ರವಾರ ಸಂಜೆ ದಿಗೋಲಿಯಾ ಗ್ರಾಮದಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ್ದು ಜನರ ಗುಂಪನ್ನು ಚದುರಿಸಲು ಪೊಲೀಸರು ಎಚ್ಚರಿಕೆ ಗುಂಡು ಹಾರಿಸಿದ್ದಾರೆ. ಇಲ್ಲಿ ಹೆಚ್ಚುವರಿ ಕಾನೂನು ಪಾಲಕರನ್ನು ನಿಯೋಜಿಸಲಾಗಿದ್ದು , ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ. ಆಕಾಶ್ ಸಾಹಾ ಎಂಬ ಯುವಕ ಫೇಸ್​​ಬುಕ್​​ನಲ್ಲಿ ಪೋಸ್ಟೊಂದು ಹಾಕಿದ್ದು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಮರು ದಾಳಿ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕಾಶ್ ಸಾಹಾ ಮತ್ತು ಅವರ ಅಪ್ಪ ಅಶೋಕ್ ಸಾಹಾ ಅವರನ್ನು ಬಂಧಿಸಿದ್ದಾರೆ. ಆಕಾಶ್ ಸಾಹಾ ಅವರು ಹಜರತ್ ಮುಹಮ್ಮದ್ ಅವರನ್ನು ಅವಹೇಳನ ಮಾಡಿ ಜುಲೈ 14ರಂದು ಫೇಸ್​​ಬುಕ್ ಪೋಸ್ಟೊಂದನ್ನು ಹಾಕಿದ್ದರು. ಇದರಿಂದ ಕುಪಿತಗೊಂಡ ಜನರ ಗುಂಪೊಂದು ಅಂದು ಮಧ್ಯಾಹ್ನ ಸಾಹಾ ಮನೆ ಮುಂದೆ ಪ್ರತಿಭಟನೆ ನಡೆಸಿ ಅವರ ಮನೆಯ ಕೋಣೆಯೊಂದಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಜೂನ್ 18ರಂದು ನಾರೈಲಿಯಲ್ಲಿ ನೂಪುರ್ ಶರ್ಮಾ ಅವರ ಫೋಟೊ ಹಾಕಿ ಬೆಂಬಲಿಸಿದ ವಿದ್ಯಾರ್ಥಿಯೊಬ್ಬರಿಗೆ ಕಾಲೇಜು ಪ್ರಾಂಶುಪಾಲರು ಬೆಂಬಲ ನೀಡಿದ್ದಾರೆ ಎಂಬ ಆರೋಪದಲ್ಲಿ ಅಲ್ಲಿನ ಸ್ಥಳೀಯರು ಪ್ರಾಂಶುಪಾಲರಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿದ್ದ ಘಟನೆ ವರದಿಯಾಗಿದೆ. ಸುದ್ದಿವಾಹಿನಿಯೊಂದರ ಚರ್ಚೆ ವೇಳೆ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿದ ಆಕ್ಷೇಪಾರ್ಹ ಹೇಳಿಕೆಗೆ ಜಗತ್ತಿನಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಮುಸ್ಲಿಂ ಪ್ರಾಬಲ್ಯವಿರುವ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾದ ಹಿಂದೂಗಳ ಮೇಲೆ ದಾಳಿ ಹೆಚ್ಚುತ್ತಿದ್ದು ಹೆಚ್ಚಿನವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ಫೇಕ್ ಪೋಸ್ಟ್ ಅಥವಾ ವದಂತಿಗಳಿಗೆ ಸಂಬಂಧಪಟ್ಟದ್ದಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!