AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಜರ್ಲೆಂಡ್​​ನಲ್ಲಿ ಭಾರೀ ಹಿಮಪಾತ; 80 ಪ್ರಯಾಣಿಕರಿದ್ದ ರೈಲು ಹಳಿ ತಪ್ಪಿ ಹಲವರಿಗೆ ಗಾಯ

ಸ್ವಿಜರ್ಲೆಂಡ್​​ನಲ್ಲಿ 80 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲು ಭಾರೀ ಹಿಮಪಾತದಿಂದ ಹಳಿತಪ್ಪಿದೆ. ಇದರಿಂದ ಸಾವುನೋವು ಸಂಭವಿಸಿದೆ. ಸ್ವಿಸ್ ಆಲ್ಪ್ಸ್‌ನಲ್ಲಿ ಈ ಹಿಮಪಾತ ಉಂಟಾಗಿದೆ. ರೈಲು ಹಳಿತಪ್ಪಿದ ನಂತರ ಹಲವಾರು ಜನರು ಗಾಯಗೊಂಡಿದ್ದಾರೆ. ವಾಲೈಸ್ ಕ್ಯಾಂಟನ್‌ನಲ್ಲಿರುವ ಗೊಪ್ಪೆನ್‌ಸ್ಟೈನ್ ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ಹಿಮಪಾತ ಸಂಭವಿಸಿದ ನಂತರ ಸುಮಾರು 80 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ರೈಲು ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಹಳಿತಪ್ಪಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ವಿಜರ್ಲೆಂಡ್​​ನಲ್ಲಿ ಭಾರೀ ಹಿಮಪಾತ; 80 ಪ್ರಯಾಣಿಕರಿದ್ದ ರೈಲು ಹಳಿ ತಪ್ಪಿ ಹಲವರಿಗೆ ಗಾಯ
Swiss AvalancheImage Credit source: x
ಸುಷ್ಮಾ ಚಕ್ರೆ
|

Updated on: Feb 16, 2026 | 6:24 PM

Share

ನವದೆಹಲಿ, ಫೆಬ್ರವರಿ 16: ಸ್ವಿಸ್ ಆಲ್ಪ್ಸ್‌ನಲ್ಲಿ ಹಿಮಪಾತ (Avalanche) ಅಪ್ಪಳಿಸಿದ ನಂತರ ದಕ್ಷಿಣ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಇಂದು ಮುಂಜಾನೆ ರೈಲು ಹಳಿತಪ್ಪಿತು. ಈ ರೈಲಿನಲ್ಲಿ 80 ಜನರು ಪ್ರಯಾಣಿಸುತ್ತಿದ್ದರು. ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. “ಹಿಮಪಾತದಿಂದಾಗಿ ಗೋಪೆನ್‌ಸ್ಟೈನ್ ಮತ್ತು ಬ್ರಿಗ್ ನಡುವೆ ರೈಲು ಸಂಚಾರಕ್ಕೆ ಅಡಚಣೆಯಾಗಿದೆ” ಎಂದು ಫೆಡರಲ್ ರೈಲು ಆಪರೇಟರ್ CFF ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಸ್ಥಳೀಯ ಸುದ್ದಿಗಳ ಪ್ರಕಾರ, ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದರಿಂದ ಸ್ಥಳೀಯ ಸಮಯ ಸಂಜೆ 4 ಗಂಟೆಯವರೆಗೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಸ್ಟಾಕ್‌ಗ್ರಾಬೆನ್ ಪ್ರದೇಶದಲ್ಲಿ ಹಲವಾರು ಬೋಗಿಗಳು ಹಳಿತಪ್ಪಿದಾಗ ಸ್ಥಳೀಯ ಸಮಯ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ರೈಲು ನಿರ್ವಾಹಕ ಬರ್ನ್-ಲೋಟ್ಸ್‌ಬರ್ಗ್-ಸಿಂಪ್ಲಾನ್ (BLS) ಪ್ರಕಾರ, ಈ ರೈಲು ಬೆಳಿಗ್ಗೆ 6.12ಕ್ಕೆ ಸ್ಪೀಜ್‌ನಿಂದ ಹೊರಟು ಬ್ರಿಗ್ ಕಡೆಗೆ ಪ್ರಯಾಣಿಸುತ್ತಿದ್ದಾಗ ಹಿಮಪಾತ ಸಂಭವಿಸಿದೆ. ಹೀಗಾಗಿ, ರೈಲು ಹಳಿ ತಪ್ಪಿದೆ.

ಇದನ್ನೂ ಓದಿ: ಹಿಮಪಾತದ ನಡುವೆ ಸಿಲುಕಿದ್ದ ಕಾರನ್ನು ತಳ್ಳಿದ ಕೇಂದ್ರ ಸಚಿವ ಕಿರಣ್ ರಿಜಿಜು

ಮಧ್ಯಾಹ್ನದ ವೇಳೆಗೆ 30 ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ. ತುರ್ತು ತಂಡಗಳು ಹಳಿಯಲ್ಲಿದ್ದವರನ್ನು ತಲುಪಲು ಕೆಲಸ ಮಾಡುತ್ತಿದ್ದರಿಂದ ಆಂಬ್ಯುಲೆನ್ಸ್ ಮತ್ತು ರಕ್ಷಣಾ ಹೆಲಿಕಾಪ್ಟರ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಫ್ರುಟಿಜೆನ್-ಬ್ರಿಗ್ ಮಾರ್ಗದಲ್ಲಿ ಸೇವೆಗಳನ್ನು ಮಂಗಳವಾರದವರೆಗೆ ಸ್ಥಗಿತಗೊಳಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ರಣಜಿ ಟ್ರೋಫಿ ಸೆಮಿಫೈನಲ್‌; ಸ್ಮರಣೀಯ ಶತಕ ಸಿಡಿಸಿದ ಸ್ಮರಣ್
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಭಾರತದ ವಿರುದ್ಧ ಸೋಲು; ಪಾಕಿಸ್ತಾನದಲ್ಲಿ ಟಿವಿಗಳು ಪುಡಿಪುಡಿ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಅಪಘಾತಕ್ಕೆ 2 ವರ್ಷದ ಮಗು ಬಲಿ: ರಸ್ತೆ ದುಃಸ್ಥಿತಿ ಖಂಡಿಸಿ ಪ್ರತಿಭಟನೆ
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ಪಿಣರಾಯಿ ವಿಜಯನ್ ಅವರೇ ಮತ್ತೆ ಕೇರಳದ ಸಿಎಂ ಆಗಲಿದ್ದಾರೆ: ಮಣಿಶಂಕರ್ ಅಯ್ಯರ್
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ನಾಪತ್ತೆಯಾದ ಮಹಿಳೆ ಪರಪುರುಷನ ಮನೆಯಲ್ಲಿ ಪತ್ತೆ: ಇಲ್ಲಿದೆ Exclusive ದೃಶ್ಯ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು
ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!
ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ಹೀಗ್ಯಾಕಂದ್ರು ಸಚಿವ ಮಹದೇವಪ್ಪ!
ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ