AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಿಶ್ವಾಸ ನಿರ್ಣಯಕ್ಕೆ ಮುನ್ನ ತಮ್ಮ ಪಕ್ಷದಿಂದ ಬಂಡಾಯ ಎದುರಿಸುತ್ತಿದ್ದಾರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್

ದೇಶ, ಆರ್ಥಿಕತೆ ಮತ್ತು ವಿದೇಶಾಂಗ ನೀತಿಯನ್ನು ತಪ್ಪಾಗಿ ನಿರ್ವಹಿಸುತ್ತಿದ್ದಾರೆ ಎಂದು ಪ್ರತಿಪಕ್ಷವು ಖಾನ್ ಅವರನ್ನು ದೂಷಿಸುತ್ತದೆ. ಅಂದಹಾಗೆ ಪಾಕಿಸ್ತಾನದ ಯಾವೊಬ್ಬ ಪ್ರಧಾನಿಯೂ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸಿಲ್ಲ.

ಅವಿಶ್ವಾಸ ನಿರ್ಣಯಕ್ಕೆ ಮುನ್ನ ತಮ್ಮ ಪಕ್ಷದಿಂದ ಬಂಡಾಯ ಎದುರಿಸುತ್ತಿದ್ದಾರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್
ಇಮ್ರಾನ್ ಖಾನ್
TV9 Web
| Edited By: |

Updated on:Mar 18, 2022 | 4:57 PM

Share

ಲಾಹೋರ್: ಪಾಕಿಸ್ತಾನದ (Pakistan) ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರ ಆಡಳಿತ ಪಕ್ಷದ ಹಲವಾರು ಶಾಸಕರು ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ (no-confidence vote) ಮುಂಚಿತವಾಗಿ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾರೆ. ಹಾಗಾಗಿ ಇಮ್ರಾನ್ ಖಾನ್ ಅಧಿಕಾರದಲ್ಲಿ ಉಳಿಯಬಹುದೇ ಎಂಬ ಬಗ್ಗೆ ಹೆಚ್ಚು ಅನಿಶ್ಚಿತತೆ ಉಂಟಾಗಿದೆ. ಖಾನ್ ತನ್ನ ಸಮ್ಮಿಶ್ರ ಪಾಲುದಾರರನ್ನು ಕಳೆದುಕೊಳ್ಳುವ ಅಪಾಯದಲ್ಲಿದೆ ಎಂದು ಪ್ರಮುಖ ಮಿತ್ರ ಪಕ್ಷವೊಂದು ಹೇಳಿದ ಒಂದು ದಿನದ ನಂತರ ಗುರುವಾರ ಈ ಬೆಳವಣಿಗೆ ಸಂಭವಿಸಿದೆ. ಸರ್ಕಾರದಲ್ಲಿ ಅವರ ಪಾಲುದಾರರು ತಮ್ಮ ವಿರೋಧಿಗಳ ಕಡೆಗೆ ವಾಲುತ್ತಿದ್ದಾರೆ ಎಂದು ಅದು ಹೇಳಿತ್ತು.  ದೇಶ, ಆರ್ಥಿಕತೆ ಮತ್ತು ವಿದೇಶಾಂಗ ನೀತಿಯನ್ನು ತಪ್ಪಾಗಿ ನಿರ್ವಹಿಸುತ್ತಿದ್ದಾರೆ ಎಂದು ಪ್ರತಿಪಕ್ಷವು ಖಾನ್ ಅವರನ್ನು ದೂಷಿಸುತ್ತದೆ. ಅಂದಹಾಗೆ ಪಾಕಿಸ್ತಾನದ ಯಾವೊಬ್ಬ ಪ್ರಧಾನಿಯೂ ತನ್ನ ಅಧಿಕಾರಾವಧಿಯನ್ನು ಪೂರ್ಣಗೊಳಿಸಿಲ್ಲ.  ಅವಿಶ್ವಾಸ ನಿರ್ಣಯದಲ್ಲಿ ಖಾನ್ ಅವರನ್ನು ತೆಗೆದುಹಾಕಲು ಪ್ರತಿಪಕ್ಷಗಳು ನೋಡುತ್ತಿರುವಂತೆಯೇ ಪರಮಾಣು ಸಶಸ್ತ್ರ ರಾಷ್ಟ್ರದಲ್ಲಿ ರಾಜಕೀಯ ಪ್ರಕ್ಷುಬ್ಧತೆಯ ಬೆದರಿಕೆ ಹೆಚ್ಚಾಗಿದೆ ಎಂದು ರಾಯಿಟರ್ಸ್ ವರದಿಮಾಡಿದೆ. ನಮಗೆ ಪ್ರಧಾನ ಮಂತ್ರಿಯೊಂದಿಗೆ ಭಿನ್ನಾಭಿಪ್ರಾಯಗಳಿವೆ ಎಂದು ಅವರ ಶಾಸಕರಲ್ಲಿ ಒಬ್ಬರಾದ ರಾಜಾ ರಿಯಾಜ್ ಸ್ಥಳೀಯ ಜಿಯೋ ನ್ಯೂಸ್ ಟಿವಿಗೆ ತಿಳಿಸಿದ್ದಾರೆ.

“ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುತ್ತೇವೆ” ಎಂದ ಅವರು 20 ಕ್ಕೂ ಹೆಚ್ಚು ಅತೃಪ್ತರು ಇದ್ದಾರೆ ಎಂದು ಹೇಳಿದರು.  ಇನ್ನೂ ಮೂವರು ಶಾಸಕರು ರಿಯಾಝ್ ಅವರನ್ನು ಅನುಮೋದಿಸಿದ್ದಾರೆ. ಟಿವಿ ಚಾನೆಲ್‌ಗಳು ಇಸ್ಲಾಮಾಬಾದ್‌ನಲ್ಲಿರುವ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಕಚೇರಿಯಲ್ಲಿ ಆಡಳಿತ ಪಕ್ಷದ ಸದಸ್ಯರು ಇರುವುದನ್ನು ತೋರಿಸಿವೆ.

“ನಮ್ಮ ಸರ್ಕಾರವನ್ನು ಉಳಿಸಲು ನಾವು ಯಾವುದೇ ಬ್ಲ್ಯಾಕ್‌ಮೇಲಿಂಗ್‌ಗೆ ಒಳಗಾಗುವುದಿಲ್ಲ ಎಂದು ನಾವು ಸ್ಪಷ್ಟಪಡಿಸಿದ್ದೇವೆ” ಎಂದು ಮಾಹಿತಿ ಸಚಿವ ಫವಾದ್ ಚೌಧರಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಮ್ಮಿಶ್ರ ಪಾಲುದಾರರು ಮತ್ತು ಭಿನ್ನಮತೀಯರಿಲ್ಲದಿದ್ದರೆ, ಕೆಳಮನೆಯಲ್ಲಿ 155 ಸ್ಥಾನಗಳನ್ನು ಹೊಂದಿರುವ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷವು ಅಧಿಕಾರವನ್ನು ಉಳಿಸಿಕೊಳ್ಳಲು ಬೇಕಾದ 172 ಸ್ಥಾನವನ್ನು ಪಡೆಯುಲು ಸಾಧ್ಯವಾಗುವುದಿಲ್ಲ.

ಜಂಟಿ ವಿರೋಧ ಪಕ್ಷವು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಮತ್ತು ಮಾಜಿ ಪ್ರಧಾನಿ ಬೆನಜೀರ್ ಭುಟ್ಟೊ ಅವರ ಪಿಪಿಪಿ ಯಂತಹ ಪ್ರಮುಖ ಪಕ್ಷಗಳನ್ನು ಒಳಗೊಂಡಿದೆ. ಇದು ಕೆಳಮನೆಯಲ್ಲಿ 160 ಕ್ಕೂ ಹೆಚ್ಚು ಸ್ಥಾನಗಳನ್ನು ಹೊಂದಿದೆ.

ಪ್ರತಿಪಕ್ಷಗಳು ಮತ್ತು ರಾಜಕೀಯ ವಿಶ್ಲೇಷಕರು ಖಾನ್ ಅವರು ಪಾಕಿಸ್ತಾನದ ಪ್ರಬಲ ಮಿಲಿಟರಿಯೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ ಎಂದು ಹೇಳಿದ್ದು ಖಾನ್ ಮತ್ತು ಮಿಲಿಟರಿ ಇದನ್ನು ನಿರಾಕರಿಸಿದೆ.

ಇದನ್ನೂ ಓದಿಢಾಕಾದಲ್ಲಿ ಇಸ್ಕಾನ್ ದೇವಾಲಯ ಧ್ವಂಸಗೊಳಿಸಿದ ದುಷ್ಕರ್ಮಿಗಳ ಗುಂಪು; ಮೂವರು ಭಕ್ತರಿಗೆ ಗಾಯ

Published On - 4:53 pm, Fri, 18 March 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?