AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನಿಗಳ ಸಂಭ್ರಮಕ್ಕೆ ಮಕ್ಕಳೂ ಸೇರಿ ಹಲವರು ಬಲಿ; ಕಾಬೂಲ್​ನಲ್ಲಿ ದುರ್ಘಟನೆ

ನಿನ್ನೆ ಪಂಜ್​ಶಿರ್​ ಕಣಿವೆಯನ್ನೂ ತಾಲಿಬಾನಿಗಳು ವಶಪಡಿಸಿಕೊಂಡಿದ್ದಾರೆ. ಈ ಪ್ರದೇಶವನ್ನು ಸ್ಥಳೀಯರಿಂದ ವಶಪಡಿಸಿಕೊಳ್ಳುವುದು ಅಷ್ಟು ಸಲೀಸಾಗಿರಲಿಲ್ಲ.

ತಾಲಿಬಾನಿಗಳ ಸಂಭ್ರಮಕ್ಕೆ ಮಕ್ಕಳೂ ಸೇರಿ ಹಲವರು ಬಲಿ; ಕಾಬೂಲ್​ನಲ್ಲಿ ದುರ್ಘಟನೆ
ಗುಂಡಿನ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು
TV9 Web
| Edited By: |

Updated on:Sep 04, 2021 | 9:21 AM

Share

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಉಪಟಳ ದಿನೇದಿನೆ ಹೆಚ್ಚುತ್ತಿದೆ. ನಾವು ಶಾಂತಿಪ್ರಿಯರು ಎನ್ನುತ್ತಲೇ ಹಲವರನ್ನು ಕೊಲ್ಲುತ್ತಿದ್ದಾರೆ. ಹಾಗೇ, ಶುಕ್ರವಾರ ರಾತ್ರಿ ಕೂಡ ಕಾಬೂಲ್​​ನಲ್ಲಿ ತಾಲಿಬಾನಿಗಳ ಸಂಭ್ರಮಕ್ಕೆ ಹಲವರು ಬಲಿಯಾಗಿದ್ದಾರೆ. ಉಗ್ರರು ಗಾಳಿಯಲ್ಲಿ ಗುಂಡು ಹೊಡೆದ ಪರಿಣಾಮ ಮಕ್ಕಳೂ ಸೇರಿ ಹಲವರು ಜೀವಕಳೆದುಕೊಂಡಿದ್ದಾರೆ ಎಂದು ಅಫ್ಘಾನಿಸ್ತಾನ ಸ್ಥಳೀಯ ಮಾಧ್ಯಮ ಅಸ್ವಾಕಾ ವರದಿ ಮಾಡಿದೆ.  

ನಿನ್ನೆ ಪಂಜ್​ಶಿರ್​ ಕಣಿವೆಯನ್ನೂ ತಾಲಿಬಾನಿಗಳು ವಶಪಡಿಸಿಕೊಂಡಿದ್ದಾರೆ. ಈ ಪ್ರದೇಶವನ್ನು ಸ್ಥಳೀಯರಿಂದ ವಶಪಡಿಸಿಕೊಳ್ಳುವುದು ಅಷ್ಟು ಸಲೀಸಾಗಿರಲಿಲ್ಲ. ತುಂಬದಿನಗಳ ನಂತರ ಅಲ್ಲಿನ ನ್ಯಾಶನಲ್​ ರೆಸಿಸ್ಟೆನ್ಸ್​ ಫ್ರಂಟ್​ ಆಫ್​ ಅಫ್ಘಾನಿಸ್ತಾನ್​ (NRFA) ಸಂಘಟನೆಯನ್ನು ಸೋಲಿಸಿ, ಪಂಜಶಿರ್​ ಕಣಿವೆಯನ್ನೂ ತಾಲಿಬಾನಿಗಳು ಕೈವಶ ಮಾಡಿಕೊಂಡಿದ್ದಾರೆ. ಅದರಿಂದ ಖುಷಿಯಾದ ತಾಲಿಬಾನಿಗಳು ಕಾಬೂಲ್​ನಲ್ಲಿ ಗಾಳಿಯಲ್ಲಿ ಗುಂಡುಹೊಡೆದು ಸಂಭ್ರಮಿಸಿದ್ದಾರೆ. ಆದರೆ ತಾಲಿಬಾನಿಗ ಸಂಭ್ರಮ ಅನೇಕರ ಪ್ರಾಣ ತೆಗೆದಿದೆ. ಅದೆಷ್ಟೋ ಜನರು ಗಾಯಗೊಂಡಿದ್ದಾರೆ. ಈ ಫೋಟೊ, ವಿಡಿಯೋಗಳು ಸಿಕ್ಕಾಪಟೆ ವೈರಲ್​ ಆಗಿವೆ.

ಅಲ್ಲಾನ ಕೃಪೆಯಿಂದ ನಾವೀಗ ಇಡೀ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದೇವೆ. ಪಂಜಶಿರ್​ ಪ್ರದೇಶ ಒಂದು ನಮಗೆ ಸಿಕ್ಕಿರಲಿಲ್ಲ. ಇದೀಗ ಆ ತೊಂದರೆಯೂ ದೂರವಾಯಿತು. ಪಂಜಶಿರ್​ ವ್ಯಾಲಿ ಕೂಡ ನಮ್ಮದಾಯಿತು ಎಂದು ತಾಲಿಬಾನ್​ ಕಮಾಂಡರ್​ ಒಬ್ಬ ರಾಯಿಟರ್ಸ್​ ಬಳಿ ಹೇಳಿದ್ದಾನೆ.  ಹಾಗೇ, ಪಂಜಶಿರ್ ಸ್ಥಳೀಯ ಸಂಘಟನೆಯ ನಾಯಕ ಅಹ್ಮದ್​ ಮಸೂದ್​ ಟ್ವೀಟ್​ ಮಾಡಿದ್ದು, ಪಂಜಶಿರ್​​ನ್ನು ತಾಲಿಬಾನಿಗಳು ವಶ ಪಡಿಸಿಕೊಂಡಿದ್ದಾರೆ ಎಂದು ಪಾಕಿಸ್ತಾನ ಮೀಡಿಯಾಗಳಲ್ಲಿ ಸುದ್ದಿಯಾಗುತ್ತಿದೆ. ಆದರೆ ಇದು ಸುಳ್ಳು. ಯಾವತ್ತು ಪಂಜಶಿರ್​ ತಾಲಿಬಾನಿಗಳ ಕೈವಶ ಆಗುತ್ತದೆಯೋ ಅಂದು ನನ್ನ ಜೀವವೂ ಇರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

Rohit Sharma: ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ-ಉಮೇಶ್ ಯಾದವ್

Published On - 9:07 am, Sat, 4 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ