AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನಿಗಳ ಸಂಭ್ರಮಕ್ಕೆ ಮಕ್ಕಳೂ ಸೇರಿ ಹಲವರು ಬಲಿ; ಕಾಬೂಲ್​ನಲ್ಲಿ ದುರ್ಘಟನೆ

ನಿನ್ನೆ ಪಂಜ್​ಶಿರ್​ ಕಣಿವೆಯನ್ನೂ ತಾಲಿಬಾನಿಗಳು ವಶಪಡಿಸಿಕೊಂಡಿದ್ದಾರೆ. ಈ ಪ್ರದೇಶವನ್ನು ಸ್ಥಳೀಯರಿಂದ ವಶಪಡಿಸಿಕೊಳ್ಳುವುದು ಅಷ್ಟು ಸಲೀಸಾಗಿರಲಿಲ್ಲ.

ತಾಲಿಬಾನಿಗಳ ಸಂಭ್ರಮಕ್ಕೆ ಮಕ್ಕಳೂ ಸೇರಿ ಹಲವರು ಬಲಿ; ಕಾಬೂಲ್​ನಲ್ಲಿ ದುರ್ಘಟನೆ
ಗುಂಡಿನ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು
TV9 Web
| Edited By: |

Updated on:Sep 04, 2021 | 9:21 AM

Share

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಉಪಟಳ ದಿನೇದಿನೆ ಹೆಚ್ಚುತ್ತಿದೆ. ನಾವು ಶಾಂತಿಪ್ರಿಯರು ಎನ್ನುತ್ತಲೇ ಹಲವರನ್ನು ಕೊಲ್ಲುತ್ತಿದ್ದಾರೆ. ಹಾಗೇ, ಶುಕ್ರವಾರ ರಾತ್ರಿ ಕೂಡ ಕಾಬೂಲ್​​ನಲ್ಲಿ ತಾಲಿಬಾನಿಗಳ ಸಂಭ್ರಮಕ್ಕೆ ಹಲವರು ಬಲಿಯಾಗಿದ್ದಾರೆ. ಉಗ್ರರು ಗಾಳಿಯಲ್ಲಿ ಗುಂಡು ಹೊಡೆದ ಪರಿಣಾಮ ಮಕ್ಕಳೂ ಸೇರಿ ಹಲವರು ಜೀವಕಳೆದುಕೊಂಡಿದ್ದಾರೆ ಎಂದು ಅಫ್ಘಾನಿಸ್ತಾನ ಸ್ಥಳೀಯ ಮಾಧ್ಯಮ ಅಸ್ವಾಕಾ ವರದಿ ಮಾಡಿದೆ.  

ನಿನ್ನೆ ಪಂಜ್​ಶಿರ್​ ಕಣಿವೆಯನ್ನೂ ತಾಲಿಬಾನಿಗಳು ವಶಪಡಿಸಿಕೊಂಡಿದ್ದಾರೆ. ಈ ಪ್ರದೇಶವನ್ನು ಸ್ಥಳೀಯರಿಂದ ವಶಪಡಿಸಿಕೊಳ್ಳುವುದು ಅಷ್ಟು ಸಲೀಸಾಗಿರಲಿಲ್ಲ. ತುಂಬದಿನಗಳ ನಂತರ ಅಲ್ಲಿನ ನ್ಯಾಶನಲ್​ ರೆಸಿಸ್ಟೆನ್ಸ್​ ಫ್ರಂಟ್​ ಆಫ್​ ಅಫ್ಘಾನಿಸ್ತಾನ್​ (NRFA) ಸಂಘಟನೆಯನ್ನು ಸೋಲಿಸಿ, ಪಂಜಶಿರ್​ ಕಣಿವೆಯನ್ನೂ ತಾಲಿಬಾನಿಗಳು ಕೈವಶ ಮಾಡಿಕೊಂಡಿದ್ದಾರೆ. ಅದರಿಂದ ಖುಷಿಯಾದ ತಾಲಿಬಾನಿಗಳು ಕಾಬೂಲ್​ನಲ್ಲಿ ಗಾಳಿಯಲ್ಲಿ ಗುಂಡುಹೊಡೆದು ಸಂಭ್ರಮಿಸಿದ್ದಾರೆ. ಆದರೆ ತಾಲಿಬಾನಿಗ ಸಂಭ್ರಮ ಅನೇಕರ ಪ್ರಾಣ ತೆಗೆದಿದೆ. ಅದೆಷ್ಟೋ ಜನರು ಗಾಯಗೊಂಡಿದ್ದಾರೆ. ಈ ಫೋಟೊ, ವಿಡಿಯೋಗಳು ಸಿಕ್ಕಾಪಟೆ ವೈರಲ್​ ಆಗಿವೆ.

ಅಲ್ಲಾನ ಕೃಪೆಯಿಂದ ನಾವೀಗ ಇಡೀ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದ್ದೇವೆ. ಪಂಜಶಿರ್​ ಪ್ರದೇಶ ಒಂದು ನಮಗೆ ಸಿಕ್ಕಿರಲಿಲ್ಲ. ಇದೀಗ ಆ ತೊಂದರೆಯೂ ದೂರವಾಯಿತು. ಪಂಜಶಿರ್​ ವ್ಯಾಲಿ ಕೂಡ ನಮ್ಮದಾಯಿತು ಎಂದು ತಾಲಿಬಾನ್​ ಕಮಾಂಡರ್​ ಒಬ್ಬ ರಾಯಿಟರ್ಸ್​ ಬಳಿ ಹೇಳಿದ್ದಾನೆ.  ಹಾಗೇ, ಪಂಜಶಿರ್ ಸ್ಥಳೀಯ ಸಂಘಟನೆಯ ನಾಯಕ ಅಹ್ಮದ್​ ಮಸೂದ್​ ಟ್ವೀಟ್​ ಮಾಡಿದ್ದು, ಪಂಜಶಿರ್​​ನ್ನು ತಾಲಿಬಾನಿಗಳು ವಶ ಪಡಿಸಿಕೊಂಡಿದ್ದಾರೆ ಎಂದು ಪಾಕಿಸ್ತಾನ ಮೀಡಿಯಾಗಳಲ್ಲಿ ಸುದ್ದಿಯಾಗುತ್ತಿದೆ. ಆದರೆ ಇದು ಸುಳ್ಳು. ಯಾವತ್ತು ಪಂಜಶಿರ್​ ತಾಲಿಬಾನಿಗಳ ಕೈವಶ ಆಗುತ್ತದೆಯೋ ಅಂದು ನನ್ನ ಜೀವವೂ ಇರುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

Rohit Sharma: ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ರೋಹಿತ್ ಶರ್ಮಾ-ಉಮೇಶ್ ಯಾದವ್

Published On - 9:07 am, Sat, 4 September 21

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್