AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹುಟ್ಟಿದ ದೇಶದ ಈ ನಗರದಲ್ಲಿ ಲಾಕ್​ಡೌನ್​​ನಿಂದ ಬಸವಳಿದು ಹೋದ ಜನರು; ಆಹಾರ ಸಂರಕ್ಷಣೆಗಾಗಿ ಪರದಾಟ

ಜನರಿಗೆ ಬರೀ ಆಹಾರ, ಅಗತ್ಯವಸ್ತುಗಳ ಸಮಸ್ಯೆ ಮಾತ್ರವಲ್ಲ, ಮನೆಯಲ್ಲೇ ಇದ್ದು ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಿದ್ದಾರೆ. ಕಠಿಣ ಲಾಕ್​ಡೌನ್​ ನಿಯಮ ಹೇರಿ ಈಗಾಗಲೇ 2 ವಾರಗಳ ಮೇಲಾಯಿತು.

ಕೊರೊನಾ ಹುಟ್ಟಿದ ದೇಶದ ಈ ನಗರದಲ್ಲಿ ಲಾಕ್​ಡೌನ್​​ನಿಂದ ಬಸವಳಿದು ಹೋದ ಜನರು; ಆಹಾರ ಸಂರಕ್ಷಣೆಗಾಗಿ ಪರದಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 06, 2022 | 12:18 PM

Share

ಚೆನ್ನೈನ ಹಣಕಾಸು ಕೇಂದ್ರ ಎಂದೇ ಖ್ಯಾತವಾಗಿರುವ ಶಾಂಘೈನಲ್ಲಿ ಕೊವಿಡ್​ 19 ಹೊಡೆತಕ್ಕೆ ಜನ ನಲುಗುತ್ತಿದ್ದಾರೆ. ಇಲ್ಲಿ ಕಠಿಣ ಲಾಕ್​ಡೌನ್​ ವಿಧಿಸಲಾಗಿದ್ದು, ಸೂಪರ್​ ಮಾರ್ಕೆಟ್​ಗಳು, ಮಾಲ್​ಗಳು ಬಂದ್​ ಆಗಿವೆ. ಮನೆಗೆ ಫುಡ್​, ಅಗತ್ಯ ವಸ್ತುಗಳ ಡಿಲೆವರಿ ಕೊಡುವ ವ್ಯವಸ್ಥೆಯನ್ನೂ ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳು, ಆಹಾರ ಪದಾರ್ಥಗಳು ಸರಿಯಾಗಿ ಸಿಗದೆ ಕಷ್ಟಪಡುತ್ತಿರುವ ಅವರು ಆಹಾರ ಸಂರಕ್ಷಣೆಯನ್ನೂ ಮಾಡಿಕೊಳ್ಳಲಾಗದೆ ಪರದಾಡುತ್ತಿದ್ದಾರೆ. ಒಟ್ಟಾರೆ ಇಲ್ಲಿನ ಸುಮಾರು 26 ಮಿಲಿಯನ್​ ಜನರ ಜೀವನ ಅಸ್ತವ್ಯಸ್ತಗೊಂಡಿದೆ.  ಶಾಂಘೈನಲ್ಲಿ ಕೊರೊನಾ ಮಿತಿಮೀರಿದ ಹಿನ್ನೆಲೆಯಲ್ಲಿ ಸ್ಥಳೀಯ ಸರ್ಕಾರ ನಿಯಂತ್ರಣ ಕ್ರಮಗಳನ್ನು ಬಿಗಿ ಗೊಳಿಸಿದೆ. ಅಷ್ಟೇ ಅಲ್ಲ, ನಗರದಾದ್ಯಂತ ಕೊವಿಡ್​ 19 ತಪಾಸಣಾ ಅಭಿಯಾನ ನಡೆಯುತ್ತಿದೆ. ಅದು ಮುಗಿಯುವವರೆಗೂ ಲಾಕ್​ಡೌನ್​ ನಿಯಮಗಳನ್ನು ತೆಗೆದು ಹಾಕುವುದಿಲ್ಲ ಎಂದು ಇಂದು ಅಲ್ಲಿನ ಸರ್ಕಾರ ಪ್ರಕಟಣೆಯನ್ನೂ ಹೊರಡಿಸಿದೆ. 

ಜನರಿಗೆ ಬರೀ ಆಹಾರ, ಅಗತ್ಯವಸ್ತುಗಳ ಸಮಸ್ಯೆ ಮಾತ್ರವಲ್ಲ, ಮನೆಯಲ್ಲೇ ಇದ್ದು ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಿದ್ದಾರೆ. ಕಠಿಣ ಲಾಕ್​ಡೌನ್​ ನಿಯಮ ಹೇರಿ ಈಗಾಗಲೇ 2 ವಾರಗಳ ಮೇಲಾಯಿತು. ಇದೆಲ್ಲದರಿಂದ ಬಸವಳಿದು ಹೋಗುತ್ತಿದ್ದಾರೆ. ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರೋಗಲಕ್ಷಣಗಳೇ ಇಲ್ಲದೆ ಕೊವಿಡ್ 19 ಪಾಸಿಟಿವ್​ ಆಗಿರುವ ರೋಗಿಗಳನ್ನು ಮನೆಯಲ್ಲೇ ಕ್ವಾರಂಟೈನ್​ ಮಾಡಬೇಕು ಎಂಬ ಆಗ್ರಹ ಹೆಚ್ಚುತ್ತಿದೆ. ಕೊರೊನಾ ಕಾಣಿಸಿಕೊಂಡಿರುವ ಮಕ್ಕಳನ್ನು ಅವರ ಪಾಲಕರಿಂದ ಪ್ರತ್ಯೇಕ ಮಾಡುತ್ತಿರುವ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧವೂ ವ್ಯಕ್ತವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಶಾಂಘೈನಲ್ಲಿ ಮಂಗಳವಾರ 16,766 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ. ಹೀಗೆ ಪಾಸಿಟಿವ್​ ಬಂದವರಲ್ಲಿ ಯಾರಿಗೂ ಕೊರೊನಾದ ಲಕ್ಷಣಗಳಿಲ್ಲ. ಸೋಮವಾರ 13,086 ಕೇಸ್​ಗಳು ದಾಖಲಾಗಿದ್ದವು. ಮಂಗಳವಾರ 16ಸಾವಿರ ದಾಟಿವೆ. ಹಾಗೇ, ಲಕ್ಷಣಗಳುಳ್ಳ ಕೇಸ್​ಗಳು ಸೋಮವಾರ 268 ದಾಖಲಾಗಿದ್ದರೆ, ಮಂಗಳವಾರ 311ಕ್ಕೆ ಏರಿಕೆಯಾಗಿದೆ. ಇಷ್ಟೆಲ್ಲದ ಮಧ್ಯೆ ಈಗ ಹೇರಿರುವ ನಿರ್ಬಂಧಗಳು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿವೆ. ಅದರಲ್ಲೂ ಸಣ್ಣ ಪ್ರಮಾಣದ ಉದ್ಯಮಗಳಿಗೆ ತೀವ್ರ ಹೊಡೆತ ಕೊಡುತ್ತಿವೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: ಉರ್ದು ಮಾತಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಲಾಗಿದೆ: ಮತೀಯ ತಿರುವು ಪಡೆದುಕೊಂಡ ಚಂದ್ರು ಹತ್ಯೆ ಪ್ರಕರಣ

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ