AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹುಟ್ಟಿದ ದೇಶದ ಈ ನಗರದಲ್ಲಿ ಲಾಕ್​ಡೌನ್​​ನಿಂದ ಬಸವಳಿದು ಹೋದ ಜನರು; ಆಹಾರ ಸಂರಕ್ಷಣೆಗಾಗಿ ಪರದಾಟ

ಜನರಿಗೆ ಬರೀ ಆಹಾರ, ಅಗತ್ಯವಸ್ತುಗಳ ಸಮಸ್ಯೆ ಮಾತ್ರವಲ್ಲ, ಮನೆಯಲ್ಲೇ ಇದ್ದು ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಿದ್ದಾರೆ. ಕಠಿಣ ಲಾಕ್​ಡೌನ್​ ನಿಯಮ ಹೇರಿ ಈಗಾಗಲೇ 2 ವಾರಗಳ ಮೇಲಾಯಿತು.

ಕೊರೊನಾ ಹುಟ್ಟಿದ ದೇಶದ ಈ ನಗರದಲ್ಲಿ ಲಾಕ್​ಡೌನ್​​ನಿಂದ ಬಸವಳಿದು ಹೋದ ಜನರು; ಆಹಾರ ಸಂರಕ್ಷಣೆಗಾಗಿ ಪರದಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Apr 06, 2022 | 12:18 PM

Share

ಚೆನ್ನೈನ ಹಣಕಾಸು ಕೇಂದ್ರ ಎಂದೇ ಖ್ಯಾತವಾಗಿರುವ ಶಾಂಘೈನಲ್ಲಿ ಕೊವಿಡ್​ 19 ಹೊಡೆತಕ್ಕೆ ಜನ ನಲುಗುತ್ತಿದ್ದಾರೆ. ಇಲ್ಲಿ ಕಠಿಣ ಲಾಕ್​ಡೌನ್​ ವಿಧಿಸಲಾಗಿದ್ದು, ಸೂಪರ್​ ಮಾರ್ಕೆಟ್​ಗಳು, ಮಾಲ್​ಗಳು ಬಂದ್​ ಆಗಿವೆ. ಮನೆಗೆ ಫುಡ್​, ಅಗತ್ಯ ವಸ್ತುಗಳ ಡಿಲೆವರಿ ಕೊಡುವ ವ್ಯವಸ್ಥೆಯನ್ನೂ ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳು, ಆಹಾರ ಪದಾರ್ಥಗಳು ಸರಿಯಾಗಿ ಸಿಗದೆ ಕಷ್ಟಪಡುತ್ತಿರುವ ಅವರು ಆಹಾರ ಸಂರಕ್ಷಣೆಯನ್ನೂ ಮಾಡಿಕೊಳ್ಳಲಾಗದೆ ಪರದಾಡುತ್ತಿದ್ದಾರೆ. ಒಟ್ಟಾರೆ ಇಲ್ಲಿನ ಸುಮಾರು 26 ಮಿಲಿಯನ್​ ಜನರ ಜೀವನ ಅಸ್ತವ್ಯಸ್ತಗೊಂಡಿದೆ.  ಶಾಂಘೈನಲ್ಲಿ ಕೊರೊನಾ ಮಿತಿಮೀರಿದ ಹಿನ್ನೆಲೆಯಲ್ಲಿ ಸ್ಥಳೀಯ ಸರ್ಕಾರ ನಿಯಂತ್ರಣ ಕ್ರಮಗಳನ್ನು ಬಿಗಿ ಗೊಳಿಸಿದೆ. ಅಷ್ಟೇ ಅಲ್ಲ, ನಗರದಾದ್ಯಂತ ಕೊವಿಡ್​ 19 ತಪಾಸಣಾ ಅಭಿಯಾನ ನಡೆಯುತ್ತಿದೆ. ಅದು ಮುಗಿಯುವವರೆಗೂ ಲಾಕ್​ಡೌನ್​ ನಿಯಮಗಳನ್ನು ತೆಗೆದು ಹಾಕುವುದಿಲ್ಲ ಎಂದು ಇಂದು ಅಲ್ಲಿನ ಸರ್ಕಾರ ಪ್ರಕಟಣೆಯನ್ನೂ ಹೊರಡಿಸಿದೆ. 

ಜನರಿಗೆ ಬರೀ ಆಹಾರ, ಅಗತ್ಯವಸ್ತುಗಳ ಸಮಸ್ಯೆ ಮಾತ್ರವಲ್ಲ, ಮನೆಯಲ್ಲೇ ಇದ್ದು ಮಾನಸಿಕವಾಗಿಯೂ ಕುಗ್ಗಿ ಹೋಗುತ್ತಿದ್ದಾರೆ. ಕಠಿಣ ಲಾಕ್​ಡೌನ್​ ನಿಯಮ ಹೇರಿ ಈಗಾಗಲೇ 2 ವಾರಗಳ ಮೇಲಾಯಿತು. ಇದೆಲ್ಲದರಿಂದ ಬಸವಳಿದು ಹೋಗುತ್ತಿದ್ದಾರೆ. ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರೋಗಲಕ್ಷಣಗಳೇ ಇಲ್ಲದೆ ಕೊವಿಡ್ 19 ಪಾಸಿಟಿವ್​ ಆಗಿರುವ ರೋಗಿಗಳನ್ನು ಮನೆಯಲ್ಲೇ ಕ್ವಾರಂಟೈನ್​ ಮಾಡಬೇಕು ಎಂಬ ಆಗ್ರಹ ಹೆಚ್ಚುತ್ತಿದೆ. ಕೊರೊನಾ ಕಾಣಿಸಿಕೊಂಡಿರುವ ಮಕ್ಕಳನ್ನು ಅವರ ಪಾಲಕರಿಂದ ಪ್ರತ್ಯೇಕ ಮಾಡುತ್ತಿರುವ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧವೂ ವ್ಯಕ್ತವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಶಾಂಘೈನಲ್ಲಿ ಮಂಗಳವಾರ 16,766 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ. ಹೀಗೆ ಪಾಸಿಟಿವ್​ ಬಂದವರಲ್ಲಿ ಯಾರಿಗೂ ಕೊರೊನಾದ ಲಕ್ಷಣಗಳಿಲ್ಲ. ಸೋಮವಾರ 13,086 ಕೇಸ್​ಗಳು ದಾಖಲಾಗಿದ್ದವು. ಮಂಗಳವಾರ 16ಸಾವಿರ ದಾಟಿವೆ. ಹಾಗೇ, ಲಕ್ಷಣಗಳುಳ್ಳ ಕೇಸ್​ಗಳು ಸೋಮವಾರ 268 ದಾಖಲಾಗಿದ್ದರೆ, ಮಂಗಳವಾರ 311ಕ್ಕೆ ಏರಿಕೆಯಾಗಿದೆ. ಇಷ್ಟೆಲ್ಲದ ಮಧ್ಯೆ ಈಗ ಹೇರಿರುವ ನಿರ್ಬಂಧಗಳು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿವೆ. ಅದರಲ್ಲೂ ಸಣ್ಣ ಪ್ರಮಾಣದ ಉದ್ಯಮಗಳಿಗೆ ತೀವ್ರ ಹೊಡೆತ ಕೊಡುತ್ತಿವೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: ಉರ್ದು ಮಾತಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಲಾಗಿದೆ: ಮತೀಯ ತಿರುವು ಪಡೆದುಕೊಂಡ ಚಂದ್ರು ಹತ್ಯೆ ಪ್ರಕರಣ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ