AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಾಗ್ತಾರೆ ಪಾಕಿಸ್ತಾನದ ಮುಂದಿನ ಪ್ರಧಾನಿ?- ರೇಸ್​​ನಲ್ಲಿದ್ದಾರೆ ಶೆಹಬಾಜ್​ ಶರೀಫ್​- ಶಾ ಮೊಹಮ್ಮದ್​ ಖುರೇಶಿ

ಇಮ್ರಾನ್ ಖಾನ್​ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಈ ಶೆಹಬಾಜ್ ಶರೀಫ್​. ಇವರ ನೇತೃತ್ವದಲ್ಲಿಯೇ ಪ್ರತಿಪಕ್ಷಗಳು ವಿವಿಧ ತಂತ್ರ ರೂಪಿಸಿದ್ದು. ಹೀಗಾಗಿ ಎಲ್ಲ ವಿಪಕ್ಷಗಳೂ ಜಂಟಿಯಾಗಿ ಶರೀಫ್​ ಅವರೇ ತಮ್ಮ ಪ್ರಧಾನಿ ಅಭ್ಯರ್ಥಿ ಎಂದು ಒಪ್ಪಿಕೊಂಡಿವೆ.

ಯಾರಾಗ್ತಾರೆ ಪಾಕಿಸ್ತಾನದ ಮುಂದಿನ ಪ್ರಧಾನಿ?- ರೇಸ್​​ನಲ್ಲಿದ್ದಾರೆ ಶೆಹಬಾಜ್​ ಶರೀಫ್​- ಶಾ ಮೊಹಮ್ಮದ್​ ಖುರೇಶಿ
ಶೆಹಬಾಜ್ ಶರೀಫ್​ ಮತ್ತು ಶಾ ಮೊಹಮ್ಮದ್​ ಖುರೇಶಿ
TV9 Web
| Edited By: |

Updated on: Apr 10, 2022 | 4:27 PM

Share

ಇಮ್ರಾನ್​ ಖಾನ್ ಪಾಕಿಸ್ತಾನದ ಪ್ರಧಾನಿ ಹುದ್ದೆಯಿಂದ ನಿನ್ನೆ ರಾತ್ರಿ ಕೆಳಗಿಳಿದ ಬೆನ್ನಲ್ಲೇ ದೇಶಕ್ಕೆ ಬೇರೆ ಪ್ರಧಾನಿಯನ್ನು ನೇಮಕ ಮಾಡುವ ಪ್ರಕ್ರಿಯೆ ಚುರುಕುಗೊಂಡಿದೆ. ಪ್ರತಿಪ್ರಕ್ಷಗಳೆಲ್ಲ ಸೇರಿ ಪಾಕಿಸ್ತಾನ ಮುಸ್ಲಿಂ ಲೀಗ್​-ನವಾಜ್​​ ಪಕ್ಷದ ನಾಯಕ ಶೆಹಬಾಜ್​ ಶರೀಫ್​​ರನ್ನು ಪ್ರಧಾನಿ ಹುದ್ದೆಗೆ ನಾಮನಿರ್ದೇಶನ ಮಾಡಿವೆ. ಇತ್ತ ಇಮ್ರಾನ್ ಖಾನ್​​ರ ಪಾಕಿಸ್ತಾನ್​ ತೆಹ್ರೀಕ್​ ಇ ಇನ್ಸಾಫ್​ ಪಾರ್ಟಿ, ಶಾ ಮೊಹಮ್ಮದ್ ಖುರೇಶಿ  ತಮ್ಮ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದೆ. ಸದ್ಯ ಪ್ರಧಾನಿ ಹುದ್ದೆಯ ರೇಸ್​​ನಲ್ಲಿ ಶೆಹಬಾಜ್​ ಶರೀಫ್​ ಮತ್ತು ಖುರೇಷಿ ಇದ್ದು, ನಾಳೆಯಷ್ಟರಲ್ಲಿ ನೂತನ ಪಿಎಂ ಆಯ್ಕೆ ಚುನಾವಣೆ ನಡೆಯಲಿದೆ. ಶೆಹಬಾಜ್​ ಶರೀಫ್​ ಅವರು ಪಾಕಿಸ್ತಾನದ ಮಾಜಿ ಪ್ರಧಾನಿ (ಮೂರು ಸಲ ಪ್ರಧಾನಿಯಾದವರು) ನವಾಜ್​ ಶರೀಫ್​ರ ತಮ್ಮ. ಪಾಕಿಸ್ತಾನದ ಮುಂದಿನ ಪ್ರಧಾನಮಂತ್ರಿ ಇವರೇ ಎಂದೇ ಹೇಳಲಾಗುತ್ತಿದೆ.  

ಪ್ರತಿಪಕ್ಷಗಳೆಲ್ಲ ಸೇರಿ ತಮ್ಮನ್ನು ಪ್ರಧಾನಿ ಹುದ್ದೆಗೆ ನಾಮನಿರ್ದೇಶನ ಮಾಡಿದ ಬಳಿಕ ಟ್ವೀಟ್ ಮಾಡಿದ ಶೆಹಬಾಜ್ ಶರೀಫ್​, ನಾನು ನಾಗರಿಕ ಸಮಾಜಕ್ಕೆ, ಮಾಧ್ಯಮದವರಿಗೆ, ವಕೀಲರಿಗೆ, ನನ್ನ ಸಹೋದರ ನವಾಜ್​ ಶರೀಫ್​ ಸೇರಿ ಎಲ್ಲರಿಗೂ ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ. ಸಂವಿಧಾನಕ್ಕೆ ಬದ್ಧವಾಗಿ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.  ಇನ್ನು ನವಾಜ್ ಶರೀಫ್​ ಪಾಕಿಸ್ತಾನದಲ್ಲಿ ಮೂರು ಸಲ ಪ್ರಧಾನಿಯಾದರೂ ಕೊನೆಗೆ ಸುತ್ತಿಕೊಂಡಿದ್ದ ಭ್ರಷ್ಟಾಚಾರ ಆರೋಪ. ಅವರನ್ನು 2017ರಲ್ಲಿ ಪ್ರಧಾನಿ ಹುದ್ದೆಯಿಂದ ವಜಾಗೊಳಿಸಲಾಯಿತು. ಜೈಲಿಗೂ ಸೇರಿದ್ದರು. ಸದ್ಯ ಅವರು ಲಂಡನ್​ನಲ್ಲಿ ಆಶ್ರಯ ಪಡೆದಿದ್ದಾರೆ.

ಇಮ್ರಾನ್ ಖಾನ್​ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಈ ಶೆಹಬಾಜ್ ಶರೀಫ್​. ಇವರ ನೇತೃತ್ವದಲ್ಲಿಯೇ ಪ್ರತಿಪಕ್ಷಗಳು ವಿವಿಧ ತಂತ್ರ ರೂಪಿಸಿದ್ದು. ಹೀಗಾಗಿ ಎಲ್ಲ ವಿಪಕ್ಷಗಳೂ ಜಂಟಿಯಾಗಿ ಶರೀಫ್​ ಅವರೇ ತಮ್ಮ ಪ್ರಧಾನಿ ಅಭ್ಯರ್ಥಿ ಎಂದು ಒಪ್ಪಿಕೊಂಡಿವೆ. ಹಾಗೇ, ಶರೀಫ್ ಪ್ರಧಾನಿಯಾದರೆ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಬಿಲಾವಾಲ್​ ಬುಟ್ಟೋ ಜರ್ದಾರಿ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವರಾಗಿ ನೇಮಕಗೊಳ್ಳಲಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪಾಕಿಸ್ತಾನದ ಮಾಧ್ಯಮವೊಂದು ವರದಿ ಮಾಡಿದ್ದಾಗಿ ಪಿಟಿಐ ತಿಳಿಸಿದೆ.

ಖುರೇಶಿ ನಾಮ ನಿರ್ದೇಶನ

ಇತ್ತ ಇಮ್ರಾನ್ ಖಾನ್ ಪಕ್ಷವಾದ ಪಾಕಿಸ್ತಾನ್​ ತೆಹ್ರೀನ್​ ಇ ಇನ್ಸಾಫ್​ ಮೊಹಮ್ಮದ್ ಖುರೇಶಿಯವರನ್ನು ಪ್ರಧಾನಿ ಅಭ್ಯರ್ಥಿಯೆಂದು ಘೋಷಿಸಿದೆ. ಇವರು ಇಮ್ರಾನ್ ಖಾನ್ ಸರ್ಕಾರದಲ್ಲಿ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವರಾಗಿದ್ದರು. ನಿನ್ನೆ ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಸದನದಿಂದ ಹೊರನಡೆದಿದ್ದು. ಅವರ ಈ ನಡೆಯನ್ನು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಬುಟ್ಟೋ ಟೀಕಿಸಿದ್ದಾರೆ.

ಇದನ್ನೂ ಓದಿ: Srinagar Encounter: ಶ್ರೀನಗರದಲ್ಲಿ ಸಿಆರ್​​ಪಿಎಫ್ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದ ಇಬ್ಬರು ಪಾಕಿಸ್ತಾನಿ ಉಗ್ರರ ಎನ್​ಕೌಂಟರ್​

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?