AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಾಗ್ತಾರೆ ಪಾಕಿಸ್ತಾನದ ಮುಂದಿನ ಪ್ರಧಾನಿ?- ರೇಸ್​​ನಲ್ಲಿದ್ದಾರೆ ಶೆಹಬಾಜ್​ ಶರೀಫ್​- ಶಾ ಮೊಹಮ್ಮದ್​ ಖುರೇಶಿ

ಇಮ್ರಾನ್ ಖಾನ್​ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಈ ಶೆಹಬಾಜ್ ಶರೀಫ್​. ಇವರ ನೇತೃತ್ವದಲ್ಲಿಯೇ ಪ್ರತಿಪಕ್ಷಗಳು ವಿವಿಧ ತಂತ್ರ ರೂಪಿಸಿದ್ದು. ಹೀಗಾಗಿ ಎಲ್ಲ ವಿಪಕ್ಷಗಳೂ ಜಂಟಿಯಾಗಿ ಶರೀಫ್​ ಅವರೇ ತಮ್ಮ ಪ್ರಧಾನಿ ಅಭ್ಯರ್ಥಿ ಎಂದು ಒಪ್ಪಿಕೊಂಡಿವೆ.

ಯಾರಾಗ್ತಾರೆ ಪಾಕಿಸ್ತಾನದ ಮುಂದಿನ ಪ್ರಧಾನಿ?- ರೇಸ್​​ನಲ್ಲಿದ್ದಾರೆ ಶೆಹಬಾಜ್​ ಶರೀಫ್​- ಶಾ ಮೊಹಮ್ಮದ್​ ಖುರೇಶಿ
ಶೆಹಬಾಜ್ ಶರೀಫ್​ ಮತ್ತು ಶಾ ಮೊಹಮ್ಮದ್​ ಖುರೇಶಿ
TV9 Web
| Edited By: |

Updated on: Apr 10, 2022 | 4:27 PM

Share

ಇಮ್ರಾನ್​ ಖಾನ್ ಪಾಕಿಸ್ತಾನದ ಪ್ರಧಾನಿ ಹುದ್ದೆಯಿಂದ ನಿನ್ನೆ ರಾತ್ರಿ ಕೆಳಗಿಳಿದ ಬೆನ್ನಲ್ಲೇ ದೇಶಕ್ಕೆ ಬೇರೆ ಪ್ರಧಾನಿಯನ್ನು ನೇಮಕ ಮಾಡುವ ಪ್ರಕ್ರಿಯೆ ಚುರುಕುಗೊಂಡಿದೆ. ಪ್ರತಿಪ್ರಕ್ಷಗಳೆಲ್ಲ ಸೇರಿ ಪಾಕಿಸ್ತಾನ ಮುಸ್ಲಿಂ ಲೀಗ್​-ನವಾಜ್​​ ಪಕ್ಷದ ನಾಯಕ ಶೆಹಬಾಜ್​ ಶರೀಫ್​​ರನ್ನು ಪ್ರಧಾನಿ ಹುದ್ದೆಗೆ ನಾಮನಿರ್ದೇಶನ ಮಾಡಿವೆ. ಇತ್ತ ಇಮ್ರಾನ್ ಖಾನ್​​ರ ಪಾಕಿಸ್ತಾನ್​ ತೆಹ್ರೀಕ್​ ಇ ಇನ್ಸಾಫ್​ ಪಾರ್ಟಿ, ಶಾ ಮೊಹಮ್ಮದ್ ಖುರೇಶಿ  ತಮ್ಮ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದೆ. ಸದ್ಯ ಪ್ರಧಾನಿ ಹುದ್ದೆಯ ರೇಸ್​​ನಲ್ಲಿ ಶೆಹಬಾಜ್​ ಶರೀಫ್​ ಮತ್ತು ಖುರೇಷಿ ಇದ್ದು, ನಾಳೆಯಷ್ಟರಲ್ಲಿ ನೂತನ ಪಿಎಂ ಆಯ್ಕೆ ಚುನಾವಣೆ ನಡೆಯಲಿದೆ. ಶೆಹಬಾಜ್​ ಶರೀಫ್​ ಅವರು ಪಾಕಿಸ್ತಾನದ ಮಾಜಿ ಪ್ರಧಾನಿ (ಮೂರು ಸಲ ಪ್ರಧಾನಿಯಾದವರು) ನವಾಜ್​ ಶರೀಫ್​ರ ತಮ್ಮ. ಪಾಕಿಸ್ತಾನದ ಮುಂದಿನ ಪ್ರಧಾನಮಂತ್ರಿ ಇವರೇ ಎಂದೇ ಹೇಳಲಾಗುತ್ತಿದೆ.  

ಪ್ರತಿಪಕ್ಷಗಳೆಲ್ಲ ಸೇರಿ ತಮ್ಮನ್ನು ಪ್ರಧಾನಿ ಹುದ್ದೆಗೆ ನಾಮನಿರ್ದೇಶನ ಮಾಡಿದ ಬಳಿಕ ಟ್ವೀಟ್ ಮಾಡಿದ ಶೆಹಬಾಜ್ ಶರೀಫ್​, ನಾನು ನಾಗರಿಕ ಸಮಾಜಕ್ಕೆ, ಮಾಧ್ಯಮದವರಿಗೆ, ವಕೀಲರಿಗೆ, ನನ್ನ ಸಹೋದರ ನವಾಜ್​ ಶರೀಫ್​ ಸೇರಿ ಎಲ್ಲರಿಗೂ ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ. ಸಂವಿಧಾನಕ್ಕೆ ಬದ್ಧವಾಗಿ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.  ಇನ್ನು ನವಾಜ್ ಶರೀಫ್​ ಪಾಕಿಸ್ತಾನದಲ್ಲಿ ಮೂರು ಸಲ ಪ್ರಧಾನಿಯಾದರೂ ಕೊನೆಗೆ ಸುತ್ತಿಕೊಂಡಿದ್ದ ಭ್ರಷ್ಟಾಚಾರ ಆರೋಪ. ಅವರನ್ನು 2017ರಲ್ಲಿ ಪ್ರಧಾನಿ ಹುದ್ದೆಯಿಂದ ವಜಾಗೊಳಿಸಲಾಯಿತು. ಜೈಲಿಗೂ ಸೇರಿದ್ದರು. ಸದ್ಯ ಅವರು ಲಂಡನ್​ನಲ್ಲಿ ಆಶ್ರಯ ಪಡೆದಿದ್ದಾರೆ.

ಇಮ್ರಾನ್ ಖಾನ್​ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಈ ಶೆಹಬಾಜ್ ಶರೀಫ್​. ಇವರ ನೇತೃತ್ವದಲ್ಲಿಯೇ ಪ್ರತಿಪಕ್ಷಗಳು ವಿವಿಧ ತಂತ್ರ ರೂಪಿಸಿದ್ದು. ಹೀಗಾಗಿ ಎಲ್ಲ ವಿಪಕ್ಷಗಳೂ ಜಂಟಿಯಾಗಿ ಶರೀಫ್​ ಅವರೇ ತಮ್ಮ ಪ್ರಧಾನಿ ಅಭ್ಯರ್ಥಿ ಎಂದು ಒಪ್ಪಿಕೊಂಡಿವೆ. ಹಾಗೇ, ಶರೀಫ್ ಪ್ರಧಾನಿಯಾದರೆ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಬಿಲಾವಾಲ್​ ಬುಟ್ಟೋ ಜರ್ದಾರಿ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವರಾಗಿ ನೇಮಕಗೊಳ್ಳಲಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪಾಕಿಸ್ತಾನದ ಮಾಧ್ಯಮವೊಂದು ವರದಿ ಮಾಡಿದ್ದಾಗಿ ಪಿಟಿಐ ತಿಳಿಸಿದೆ.

ಖುರೇಶಿ ನಾಮ ನಿರ್ದೇಶನ

ಇತ್ತ ಇಮ್ರಾನ್ ಖಾನ್ ಪಕ್ಷವಾದ ಪಾಕಿಸ್ತಾನ್​ ತೆಹ್ರೀನ್​ ಇ ಇನ್ಸಾಫ್​ ಮೊಹಮ್ಮದ್ ಖುರೇಶಿಯವರನ್ನು ಪ್ರಧಾನಿ ಅಭ್ಯರ್ಥಿಯೆಂದು ಘೋಷಿಸಿದೆ. ಇವರು ಇಮ್ರಾನ್ ಖಾನ್ ಸರ್ಕಾರದಲ್ಲಿ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವರಾಗಿದ್ದರು. ನಿನ್ನೆ ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಸದನದಿಂದ ಹೊರನಡೆದಿದ್ದು. ಅವರ ಈ ನಡೆಯನ್ನು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಬುಟ್ಟೋ ಟೀಕಿಸಿದ್ದಾರೆ.

ಇದನ್ನೂ ಓದಿ: Srinagar Encounter: ಶ್ರೀನಗರದಲ್ಲಿ ಸಿಆರ್​​ಪಿಎಫ್ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದ ಇಬ್ಬರು ಪಾಕಿಸ್ತಾನಿ ಉಗ್ರರ ಎನ್​ಕೌಂಟರ್​

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ