AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನಕ್ಕೆ ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡನೆ; ಶೀಘ್ರ ಬಿಡುಗಡೆಗೆ ಆಗ್ರಹ

ಬಾಂಗ್ಲಾದೇಶದ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನವನ್ನು ಖಂಡಿಸಿದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಚಿನ್ಮಯ್ ದಾಸ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ದೇಶದ್ರೋಹದ ಆರೋಪದ ಮೇಲೆ ಈ ವಾರದ ಆರಂಭದಲ್ಲಿ ಚಿನ್ಮಯ್ ದಾಸ್ ಅವರನ್ನು ಬಂಧಿಸಲಾಗಿತ್ತು.

ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನಕ್ಕೆ ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡನೆ; ಶೀಘ್ರ ಬಿಡುಗಡೆಗೆ ಆಗ್ರಹ
ಶೇಖ್ ಹಸೀನಾ
Follow us
ಸುಷ್ಮಾ ಚಕ್ರೆ
|

Updated on: Nov 28, 2024 | 8:38 PM

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನವನ್ನು ಇಂದು ಖಂಡಿಸಿದ್ದಾರೆ. ಹಿಂದೂ ನಾಯಕ ಚಿನ್ಮಯ್ ದಾಸ್​ನನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅವರು ಹೇಳಿದ್ದಾರೆ. ದೇಶದ್ರೋಹದ ಆರೋಪದ ಮೇಲೆ ಈ ವಾರದ ಆರಂಭದಲ್ಲಿ ಚಿನ್ಮಯ್ ದಾಸ್ ಅವರನ್ನು ಬಂಧಿಸಲಾಯಿತು.

“ಸನಾತನ ಧಾರ್ಮಿಕ ಸಮುದಾಯದ ಹಿರಿಯ ನಾಯಕನನ್ನು ಅನ್ಯಾಯವಾಗಿ ಬಂಧಿಸಲಾಗಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು” ಎಂದು ಶೇಖ್ ಹಸೀನಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚಿತ್ತಗಾಂಗ್‌ನಲ್ಲಿ ದೇವಸ್ಥಾನವನ್ನು ಸುಟ್ಟು ಹಾಕಲಾಗಿದೆ. ಈ ಹಿಂದೆ ಅಹ್ಮದೀಯ ಸಮುದಾಯದ ಮಸೀದಿಗಳು, ಮಂದಿರಗಳು, ಚರ್ಚ್‌ಗಳು, ಮಠಗಳು ಮತ್ತು ಮನೆಗಳ ಮೇಲೆ ದಾಳಿ, ಧ್ವಂಸ, ಲೂಟಿ ಮಾಡಿ ಬೆಂಕಿ ಹಚ್ಚಲಾಗಿತ್ತು. ಧಾರ್ಮಿಕ ಸ್ವಾತಂತ್ರ್ಯ ಮತ್ತು ಎಲ್ಲಾ ಸಮುದಾಯಗಳ ಜನರ ಜೀವನ ಮತ್ತು ಆಸ್ತಿಯ ಸುರಕ್ಷತೆಯನ್ನು ಖಾತ್ರಿ ಪಡಿಸಬೇಕು ಎಂದು ಮಾಜಿ ಪ್ರಧಾನಿ ಶೇಖ್ ಹಸೀನಾ ಅವಾಮಿ ಲೀಗ್‌ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನ: ಅಧಿಕಾರಿಗಳು, ನಿವೃತ್ತ ನ್ಯಾಯಮೂರ್ತಿಗಳಿಂದ ಪ್ರಧಾನಿ ಮೋದಿಗೆ ಪತ್ರ

ವಿವಾದಾತ್ಮಕ ಉದ್ಯೋಗ ಕೋಟಾ ವ್ಯವಸ್ಥೆಗೆ ಸಂಬಂಧಿಸಿದಂತೆ ಅವರ ಅವಾಮಿ ಲೀಗ್ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಂತರ ಶೇಖ್ ಹಸೀನಾ ಆಗಸ್ಟ್ 5ರಂದು ಭಾರತಕ್ಕೆ ಪಲಾಯನ ಮಾಡಿದರು. ಅದಾದ ಮೂರು ದಿನಗಳ ನಂತರ, ನೊಬೆಲ್ ಪ್ರಶಸ್ತಿ ವಿಜೇತ ಮಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಅಧಿಕಾರ ವಹಿಸಿಕೊಂಡರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!