ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನಕ್ಕೆ ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡನೆ; ಶೀಘ್ರ ಬಿಡುಗಡೆಗೆ ಆಗ್ರಹ

ಬಾಂಗ್ಲಾದೇಶದ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನವನ್ನು ಖಂಡಿಸಿದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಚಿನ್ಮಯ್ ದಾಸ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ದೇಶದ್ರೋಹದ ಆರೋಪದ ಮೇಲೆ ಈ ವಾರದ ಆರಂಭದಲ್ಲಿ ಚಿನ್ಮಯ್ ದಾಸ್ ಅವರನ್ನು ಬಂಧಿಸಲಾಗಿತ್ತು.

ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನಕ್ಕೆ ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡನೆ; ಶೀಘ್ರ ಬಿಡುಗಡೆಗೆ ಆಗ್ರಹ
ಶೇಖ್ ಹಸೀನಾ

Updated on: Nov 28, 2024 | 8:38 PM

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಹಿಂದೂ ಆಧ್ಯಾತ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನವನ್ನು ಇಂದು ಖಂಡಿಸಿದ್ದಾರೆ. ಹಿಂದೂ ನಾಯಕ ಚಿನ್ಮಯ್ ದಾಸ್​ನನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಅವರು ಹೇಳಿದ್ದಾರೆ. ದೇಶದ್ರೋಹದ ಆರೋಪದ ಮೇಲೆ ಈ ವಾರದ ಆರಂಭದಲ್ಲಿ ಚಿನ್ಮಯ್ ದಾಸ್ ಅವರನ್ನು ಬಂಧಿಸಲಾಯಿತು.

“ಸನಾತನ ಧಾರ್ಮಿಕ ಸಮುದಾಯದ ಹಿರಿಯ ನಾಯಕನನ್ನು ಅನ್ಯಾಯವಾಗಿ ಬಂಧಿಸಲಾಗಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು” ಎಂದು ಶೇಖ್ ಹಸೀನಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಚಿತ್ತಗಾಂಗ್‌ನಲ್ಲಿ ದೇವಸ್ಥಾನವನ್ನು ಸುಟ್ಟು ಹಾಕಲಾಗಿದೆ. ಈ ಹಿಂದೆ ಅಹ್ಮದೀಯ ಸಮುದಾಯದ ಮಸೀದಿಗಳು, ಮಂದಿರಗಳು, ಚರ್ಚ್‌ಗಳು, ಮಠಗಳು ಮತ್ತು ಮನೆಗಳ ಮೇಲೆ ದಾಳಿ, ಧ್ವಂಸ, ಲೂಟಿ ಮಾಡಿ ಬೆಂಕಿ ಹಚ್ಚಲಾಗಿತ್ತು. ಧಾರ್ಮಿಕ ಸ್ವಾತಂತ್ರ್ಯ ಮತ್ತು ಎಲ್ಲಾ ಸಮುದಾಯಗಳ ಜನರ ಜೀವನ ಮತ್ತು ಆಸ್ತಿಯ ಸುರಕ್ಷತೆಯನ್ನು ಖಾತ್ರಿ ಪಡಿಸಬೇಕು ಎಂದು ಮಾಜಿ ಪ್ರಧಾನಿ ಶೇಖ್ ಹಸೀನಾ ಅವಾಮಿ ಲೀಗ್‌ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಚಿನ್ಮಯ್ ದಾಸ್ ಬಂಧನ: ಅಧಿಕಾರಿಗಳು, ನಿವೃತ್ತ ನ್ಯಾಯಮೂರ್ತಿಗಳಿಂದ ಪ್ರಧಾನಿ ಮೋದಿಗೆ ಪತ್ರ

ವಿವಾದಾತ್ಮಕ ಉದ್ಯೋಗ ಕೋಟಾ ವ್ಯವಸ್ಥೆಗೆ ಸಂಬಂಧಿಸಿದಂತೆ ಅವರ ಅವಾಮಿ ಲೀಗ್ ನೇತೃತ್ವದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಂತರ ಶೇಖ್ ಹಸೀನಾ ಆಗಸ್ಟ್ 5ರಂದು ಭಾರತಕ್ಕೆ ಪಲಾಯನ ಮಾಡಿದರು. ಅದಾದ ಮೂರು ದಿನಗಳ ನಂತರ, ನೊಬೆಲ್ ಪ್ರಶಸ್ತಿ ವಿಜೇತ ಮಹಮ್ಮದ್ ಯೂನಸ್ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಅಧಿಕಾರ ವಹಿಸಿಕೊಂಡರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us