AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇಖ್ ಹಸೀನಾರ ಸಾಕು ಬೆಕ್ಕಿನ ಕಥೆ, ಪ್ರತಿಭಟನೆ ವೇಳೆ ಮಾರಾಟವಾಗಿ ಮತ್ತೆ ಮನೆ ತಲುಪಿದ ಬೆಕ್ಕು

ಶೇಖ್ ಹಸೀನಾ ಬಾಂಗ್ಲಾದೇಶ ತೊರೆದು ಭಾರತಕ್ಕೆ ಬಂದ ಬಳಿಕ ಅವರ ಅಧಿಕೃತ ನಿವಾಸಕ್ಕೆ ಹಲವರು ನುಗ್ಗಿ ಎಲ್ಲಾ ವಸ್ತಗಳನ್ನು ಧ್ವಂಸಗೊಳಿಸಿದ್ದಾರೆ. ಅಷ್ಟೇ ಅಲ್ಲದೆ ಅವರ ಮನೆಯಲ್ಲಿದ್ದ ಸಾಕು ಪ್ರಾಣಿಗಳನ್ನು ಅಪಹರಿಸಿ ಮಾರಾಟ ಮಾಡಿದ್ದಾರೆ.

ಶೇಖ್ ಹಸೀನಾರ ಸಾಕು ಬೆಕ್ಕಿನ ಕಥೆ, ಪ್ರತಿಭಟನೆ ವೇಳೆ ಮಾರಾಟವಾಗಿ ಮತ್ತೆ ಮನೆ ತಲುಪಿದ ಬೆಕ್ಕು
ಬೆಕ್ಕು
TV9 Web
| Edited By: |

Updated on: Aug 09, 2024 | 9:37 AM

Share

ಬಾಂಗ್ಲಾದೇಶದಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ಭುಗಿಲೆದ್ದ ಹಿಂಸಾಚಾರದಿಂದ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ್ದರು. ಅವರು ಬಾಂಗ್ಲಾದೇಶ ತೊರೆಯುತ್ತಿದ್ದಂತೆ ಕೆಲವೇ ಗಂಟೆಗಳಲ್ಲಿ ಅವರ ಅಧಿಕೃತ ನಿವಾಸವನ್ನು ಪ್ರತಿಭಟನಾಕಾರರು ವಶಪಡಿಸಿಕೊಂಡರು. ಪ್ರತಿಭಟನಾಕಾರರು ಶೇಖ್ ಹಸೀನಾ ಅವರ ಮನೆಯ ಕುರ್ಚಿಗಳು, ಬಟ್ಟೆಗಳು, ಸಾಕು ಪ್ರಾಣಿಗಳು, ಕೋಳಿಗಳು, ಮೀನು, ಬೆಕ್ಕು ಮತ್ತು ಜರ್ಮನ್ ಶೆಫರ್ಡ್​ ಸೇರಿದಂತೆ ಅನೇಕ ವಸ್ತುಗಳನ್ನು ಲೂಟಿ ಮಾಡಿದರು.

ಇದೀಗ ಬಾಂಗ್ಲಾದೇಶದ ಸ್ವಯಂಸೇವಾ ಸಂಸ್ಥೆಯೊಂದು ಶೇಖ್ ಹಸೀನಾ ಅವರ ಅಧಿಕೃತ ನಿವಾಸಿದಿಂದ ಲೂಟಿ ಮಾಡಿದ್ದ ಜರ್ಮನ್ ಶೆಫರ್ಡ್​ ಮತ್ತು ಬೆಕ್ಕನ್ನು ಹಿಂದಿರುಗಿಸುವ ಕೆಲಸ ಮಾಡಿದ್ದಾರೆ. ಶೇಖ್ ಹಸೀನಾ ಅವರ ನಿವಾಸದಿಂದ ಲೂಟಿ ಮಾಡಿದ ಬೆಕ್ಕನ್ನು 40 ಸಾವಿರ ರೂ. ಬಾಂಗ್ಲಾದೇಶಿ ಟಾಕಾಗೆ ಮಾರಾಟ ಮಾಡಲಾಗಿತ್ತು. ಬಾಂಗ್ಲಾದೇಶದ ವಿಶೇಷ ಭದ್ರತಾ ಪಡೆ ಹಸೀನಾ ಅವರ ನೆಚ್ಚಿನ ಜರ್ಮನ್ ಶೆಫರ್ಡ್​ ಅನ್ನು ಕೂಡ ಕರೆತರಲಾಗಿದೆ.

ಅಭೊಯಾರೊನ್ನೊ ಹೆಸರಿನ ಸಂಸ್ಥೆಯು ಫೇಸ್​ಬುಕ್ ಪೋಸ್ಟ್​ನಲ್ಲಿ ಹಸೀನಾರ ಬೆಕ್ಕನ್ನು ಮನೆಗೆ ಹಿಂದಿರುಗಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಆದರೆ ಟಿವಿ9 ಕನ್ನಡ ಈ ವಿಡಿಯೋವನ್ನು ದೃಢೀಕರಿಸಿಲ್ಲ.

ನಿವಾಸದಿಂದ ಲೂಟಿ ಮಾಡಿರುವ ಎಲ್ಲಾ ಪ್ರಾಣಿಗಳನ್ನು ಹಿಂದಿರುಗಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಸಂಘಟನೆ ಹೇಳಿದೆ.

ಅಗತ್ಯ ಬಿದ್ದರೆ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ. ಪ್ರಾಣಿಗಳನ್ನು ಲೂಟಿ ಮಾಡಿದವರಿಗೆ ತಕ್ಷಣ ಹಿಂದಿರುಗಿಸುವಂತೆ ಸಂಘಟನೆಯು ವಿನಂತಿಸಿದೆ. ಹಿಂಸಾತ್ಮಕ ಚಳವಳಿಯಿಂದಾಗಿ ಶೇಖ್ ಹಸೀನಾ ಸೋಮವಾರ ಬಾಂಗ್ಲಾದೇಶವನ್ನು ತೊರೆದಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ