AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tulip Siddiq: ಶೇಖ್ ಹಸೀನಾ ಸೊಸೆ ಟ್ಯೂಲಿಪ್ ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ

ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿರುವ ಬ್ರಿಟನ್ ಹಣಕಾಸು ಸಚಿವೆ ಟ್ಯೂಲಿಪ್ ಸಿದ್ದಿಕ್ ರಾಜೀನಾಮೆ ನೀಡಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಮೊಹಮ್ಮದ್ ಯೂನಸ್ ಅವರು ಟ್ಯೂಲಿಪ್ ಸಿದ್ದಿಕ್ ಅವರ ಅತ್ತೆ, ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ತನಿಖೆ ಆರಂಭಿಸಿದ್ದರು ಮತ್ತು ಟ್ಯೂಲಿಪ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ನನ್ನ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಟ್ಯೂಲಿಪ್ ಪಿಎಂ ಕೀರ್ ಸ್ಟಾರ್ಮರ್‌ಗೆ ಪತ್ರ ಬರೆದಿದ್ದರು.

Tulip Siddiq: ಶೇಖ್ ಹಸೀನಾ ಸೊಸೆ ಟ್ಯೂಲಿಪ್ ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ
ಟ್ಯೂಲಿಪ್
ನಯನಾ ರಾಜೀವ್
|

Updated on:Jan 15, 2025 | 9:52 AM

Share

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸೋದರ ಸೊಸೆ ಮತ್ತು ಲೇಬರ್ ಪಕ್ಷದ ಸಂಸದೆ ಟ್ಯೂಲಿಪ್ ಸಿದ್ದಿಕ್  ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವಾರ ಲಂಡನ್‌ನಲ್ಲಿರುವ ಅವರ ಆಸ್ತಿಗಳಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ಮತ್ತು ಪಾರದರ್ಶಕತೆಯ ಕೊರತೆಯ ಆರೋಪವನ್ನು ಎದುರಿಸಿದ್ದರು.

ಸಿದ್ದಿಕಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಈ ಆರೋಪಗಳನ್ನು ತಳ್ಳಿಹಾಕಿದ್ದು, ಎಲ್ಲಾ ವಿಷಯಗಳಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಅಧಿಕಾರಿಗಳ ಸಲಹೆಯನ್ನು ಪಾಲಿಸಿದ್ದೇನೆ ಎಂದು ಹೇಳಿದ್ದಾರೆ. ಹಣಕಾಸು ಸಚಿವ ಹುದ್ದೆಯಲ್ಲಿ ಮುಂದುವರಿಯುವುದರಿಂದ ಸರ್ಕಾರದ ಕೆಲಸಕ್ಕೆ ಅಡ್ಡಿಯಾಗಬಹುದು ಎಂದು ಟ್ಯೂಲಿಪ್ ಸಿದ್ದಿಕಿ ರಾಜೀನಾಮೆಯಲ್ಲಿ ತಿಳಿಸಿದ್ದಾರೆ.

ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದರು ಮತ್ತು ಭವಿಷ್ಯಕ್ಕಾಗಿ ಅವರಿಗೆ ಶುಭ ಹಾರೈಸಿದರು. ಟುಲಿಪ್ ಸಿದ್ದಿಕಿ ಬದಲಿಗೆ ಲೇಬರ್ ಸಂಸದೆ ಎಮ್ಮಾ ರೆನಾಲ್ಡ್ಸ್ ಹೊಸ ಹಣಕಾಸು ಮಂತ್ರಿಯಾಗಲಿದ್ದಾರೆ ಎಂದು ಡೌನಿಂಗ್ ಸ್ಟ್ರೀಟ್ ಘೋಷಿಸಿತು. ಟ್ಯೂಲಿಪ್ ಸಿದ್ದಿಕಿ ವಿರುದ್ಧ ಸಂಹಿತೆಯ ಉಲ್ಲಂಘನೆಯ ಯಾವುದೇ ಪ್ರಕರಣ ಕಂಡುಬಂದಿಲ್ಲ ಅಥವಾ ಆಕೆಯಿಂದ ಹಣಕಾಸಿನ ಅಕ್ರಮಗಳ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಪ್ರಧಾನಿ ಕೀರ್ ಸ್ಟಾರ್ಮರ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.  ಸ್ಟಾರ್ಮರ್ ಅವರ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಶ್ಲಾಘಿಸಿದರು.

ಮತ್ತಷ್ಟು ಓದಿ: ವೀಸಾ ವಿಸ್ತರಣೆ ಬೆನ್ನಲ್ಲೇ ಶೇಖ್ ಹಸೀನಾ ಪಾಸ್‌ಪೋರ್ಟ್ ರದ್ದುಗೊಳಿಸಲು ಭಾರತಕ್ಕೆ ಬಾಂಗ್ಲಾದೇಶ ಒತ್ತಾಯ

ರಾಜೀನಾಮೆ ನಂತರ ಪರಿಸ್ಥಿತಿ: ಟ್ಯೂಲಿಪ್ ಸಿದ್ದಿಕಿ ರಾಜೀನಾಮೆ ಬ್ರಿಟನ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ವಿಶೇಷವಾಗಿ ಇದು ಪಾರದರ್ಶಕತೆ ಮತ್ತು ಹಣಕಾಸಿನ ಜವಾಬ್ದಾರಿಗಳಿಗೆ ಸಂಬಂಧಿಸಿದೆ. ಆದರೆ, ಪ್ರಧಾನಿಯಿಂದ ಕ್ಲೀನ್ ಚಿಟ್ ಪಡೆದ ನಂತರ, ಅವರ ವಿರುದ್ಧ ಯಾವುದೇ ಖಚಿತವಾದ ಸಾಕ್ಷ್ಯಗಳಿಲ್ಲ ಎಂದು ಸ್ಪಷ್ಟವಾಯಿತು, ಆದರೂ ಅವರು ಸರ್ಕಾರದ ಕಾರ್ಯನಿರ್ವಹಣೆಗೆ ಅಡ್ಡಿಯಾಗದಂತೆ ಈ ಕ್ರಮ ಕೈಗೊಂಡಿದ್ದಾರೆ.

ಹೊಸ ಹಣಕಾಸು ಸಚಿವೆ ಎಮ್ಮಾ ರೆನಾಲ್ಡ್ಸ್ ಅವರ ಜವಾಬ್ದಾರಿ ಟ್ಯೂಲಿಪ್ ಸಿದ್ದಿಕಿ ಅವರ ರಾಜೀನಾಮೆ ಬ್ರಿಟಿಷ್ ರಾಜಕೀಯದಲ್ಲಿ ಪ್ರಮುಖ ತಿರುವು. ಆದರೆ, ಪ್ರಧಾನಿಯಿಂದ ಕ್ಲೀನ್ ಚಿಟ್ ಪಡೆದ ನಂತರ ಅವರ ಇಮೇಜ್ ಬಗ್ಗೆ ಪರಿಸ್ಥಿತಿ ಸ್ಪಷ್ಟವಾಗಿದೆ. ಈಗ ಹೊಸ ಹಣಕಾಸು ಸಚಿವೆ ಎಮ್ಮಾ ರೆನಾಲ್ಡ್ಸ್ ಯಾವ ಬದಲಾವಣೆಗಳನ್ನು ತರುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:51 am, Wed, 15 January 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ