AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಮನ್ ಕರಾವಳಿಯಲ್ಲಿ 24 ಭಾರತೀಯ ನಾವಿಕರಿದ್ದ ಹಡಗಿನಲ್ಲಿ ಬೆಂಕಿ ಅವಘಡ

ಓಮನ್ ಕರಾವಳಿಯ ಬಳಿ ಭೀಕರ ದಾಳಿಗೆ ಒಳಗಾಗಿ ಅಗ್ನಿ ಅವಘಡಕ್ಕೀಡಾದ ಸರಕು ಸಾಗಣೆ ಹಡಗು ಮತ್ತು ಅದರಲ್ಲಿರುವ 24 ಭಾರತೀಯ ನಾವಿಕರ ರಕ್ಷಣೆಗೆ ಭಾರತ ಕ್ರಮಗಳನ್ನು ಕೈಗೊಂಡಿದೆ. ಒಮಾನ್ ಕರಾವಳಿಯ ಅಂತಾರಾಷ್ಟ್ರೀಯ ಸಮುದ್ರ ಮಾರ್ಗದಲ್ಲಿ ಚಲಿಸುತ್ತಿದ್ದ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಡ್ರೋನ್ ಮೂಲಕ ದಾಳಿ ನಡೆಸಲಾಗಿದೆ. ಈ ದಾಳಿಯ ಬೆನ್ನಲ್ಲೇ ಹಡಗಿನಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಹಡಗು ಹೊತ್ತಿ ಉರಿದಿದೆ. ಈ ಹಡಗಿನಲ್ಲಿ 24 ಭಾರತೀಯ ನಾವಿಕರು ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಓಮನ್ ಕರಾವಳಿಯಲ್ಲಿ 24 ಭಾರತೀಯ ನಾವಿಕರಿದ್ದ ಹಡಗಿನಲ್ಲಿ ಬೆಂಕಿ ಅವಘಡ
Cargo Vessel With 24 Indians Catches FireImage Credit source: x
ಸುಷ್ಮಾ ಚಕ್ರೆ
|

Updated on: Jun 08, 2026 | 6:56 PM

Share

ನವದೆಹಲಿ, ಜೂನ್ 8: ಓಮನ್ ಕರಾವಳಿಯ ಹಾರ್ಮುಜ್ ಜಲಸಂಧಿಯ ಬಳಿ ವಾಣಿಜ್ಯ ಸರಕು ಹಡಗಿನ ಮೇಲೆ ಶಂಕಿತ ಡ್ರೋನ್ ಅಥವಾ ಕ್ಷಿಪಣಿ ದಾಳಿ ನಡೆದಿದೆ. 24 ಭಾರತೀಯ ನಾವಿಕರು ಈ ಹಡಗಿನಲ್ಲಿದ್ದರು. ಈ ದಾಳಿಯು ಹಡಗಿನ ಎಂಜಿನ್ ಕೋಣೆಯಲ್ಲಿ ಭಾರಿ ಸ್ಫೋಟಕ್ಕೆ ಕಾರಣವಾಯಿತು. ಇದರಿಂದ ಹಡಿಗಿನಲ್ಲಿ ಬೆಂಕಿ ಹೊತ್ತಿಕೊಂಡಿತು, ಇದು ಸಿಬ್ಬಂದಿಗಳಲ್ಲಿ ಭೀತಿಯನ್ನುಂಟುಮಾಡಿತು. ಇರಾನ್ (Iran) ಮತ್ತು ಇಸ್ರೇಲ್ ನಡುವಿನ ಯುದ್ಧವು ಪುನರಾರಂಭಗೊಂಡಿರುವ ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಭದ್ರತಾ ಆತಂಕದ ಮಧ್ಯೆ ಈ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಪಲಾವ್ ಧ್ವಜ ಹೊತ್ತ ಸರಕು ಹಡಗು ಓಮನ್ ಕರಾವಳಿಯಿಂದ ಸುಮಾರು 15 ನಾಟಿಕಲ್ ಮೈಲು ದೂರದಲ್ಲಿದ್ದಾಗ ಅಪಘಾತಕ್ಕೀಡಾಯಿತು. ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ ಹಡಗಿನ ಎಂಜಿನ್ ಕೋಣೆಯಲ್ಲಿ ದೊಡ್ಡ ರಂಧ್ರ ಉಂಟಾಗಿ, ಅದು ನೀರಿನಿಂದ ಬೇಗನೆ ತುಂಬಿ ಸಮತೋಲನ ಕಳೆದುಕೊಂಡಿತು. ಸ್ಫೋಟದ ನಂತರ, ಎಂಜಿನ್ ಕೋಣೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತು.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಮಾರ್ಗ ತೆರೆಯುವ ಸುಳಿವು ನೀಡಿದ ಟ್ರಂಪ್

ಪರಿಸ್ಥಿತಿ ಹದಗೆಡುತ್ತಿದ್ದಂತೆ, ಸಿಬ್ಬಂದಿ ತುರ್ತು ಕರೆಗಳನ್ನು ಮಾಡಿದರು. ಫಾರ್ವರ್ಡ್ ಸೀಮೆನ್ಸ್ ಯೂನಿಯನ್ ಆಫ್ ಇಂಡಿಯಾ (FSUI) ದಾಳಿಯನ್ನು ದೃಢಪಡಿಸಿತು. ಹಡಗಿನಲ್ಲಿ ಭಾರತೀಯ ನಾವಿಕರು ಇದ್ದಾರೆ ಎಂದು ಒಕ್ಕೂಟ ತಿಳಿಸಿದೆ. ಮೂಲಗಳ ಪ್ರಕಾರ, ದಾಳಿಯಲ್ಲಿ ಹಡಗಿನ ಲೈಫ್ ಬೋಟ್ ಕೂಡ ಹಾನಿಗೊಳಗಾಗಿದ್ದು, ನಾವಿಕರನ್ನು ರಕ್ಷಿಸುವುದು ಕಷ್ಟಕರವಾಗಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ಪ್ರಸ್ತುತ ನಡೆಯುತ್ತಿವೆ. ಸದ್ಯದ ಮಟ್ಟಿಗೆ ಎಲ್ಲ ಭಾರತೀಯರೂ ಸುರಕ್ಷಿತವಾಗಿದ್ದಾರೆ.

ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಭಾರತ ಸರ್ಕಾರ ಮತ್ತು ಭಾರತೀಯ ನೌಕಾಪಡೆ ತಕ್ಷಣವೇ ಕಾರ್ಯಪ್ರವೃತ್ತವಾಗಿವೆ. ಆ ಪ್ರದೇಶದಲ್ಲಿ ಕಡಲ್ಗಳ್ಳರ ನಿಗ್ರಹ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಈಗಾಗಲೇ ಗಸ್ತಿನಲ್ಲಿದ್ದ ಭಾರತೀಯ ನೌಕಾಪಡೆಯ ಅತ್ಯಾಧುನಿಕ ಯುದ್ಧನೌಕೆ ಮತ್ತು ಕಡಲ ಗಸ್ತು ವಿಮಾನವನ್ನು (P-8I) ತಕ್ಷಣವೇ ಆಪತ್ತಿನಲ್ಲಿರುವ ಹಡಗಿನ ರಕ್ಷಣೆಗೆ ಧಾವಿಸುವಂತೆ ಸೂಚಿಸಲಾಗಿದೆ. ಓಮನ್ ದೇಶದ ನೌಕಾಪಡೆ ಮತ್ತು ಪ್ರಾದೇಶಿಕ ಕಡಲ ರಕ್ಷಣಾ ಸಮನ್ವಯ ಕೇಂದ್ರಗಳ (MRCC) ಜೊತೆಗೆ ಭಾರತೀಯ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ತಕ್ಷಣದ ಕದನ ವಿರಾಮಕ್ಕೆ ಒಪ್ಪಿವೆ; ಟ್ರಂಪ್ ಘೋಷಣೆ

ನಾವಿಕರ ಪ್ರಸ್ತುತ ಆರೋಗ್ಯ ಸ್ಥಿತಿಯ ಬಗ್ಗೆ ನಿಖರ ಮಾಹಿತಿ ಇನ್ನಷ್ಟೇ ಹೊರಬರಬೇಕಾಗಿದೆ. ಆದರೆ ಭಾರತೀಯ ನೌಕಾಪಡೆಯು ಅವರ ಸುರಕ್ಷತೆಗೆ ಮೊದಲ ಆದ್ಯತೆ ನೀಡಿದೆ ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ. ಇತ್ತೀಚಿನ ತಿಂಗಳುಗಳಲ್ಲಿ ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರದ ಮಾರ್ಗಗಳಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ಗಣನೀಯವಾಗಿ ಹೆಚ್ಚಾಗಿದ್ದು, ಜಾಗತಿಕ ವ್ಯಾಪಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​