AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೆತ್ತವರ ಮುಂದೆಯೇ 8 ವರ್ಷದ ಬಾಲಕನನ್ನು ಎಳೆದುಕೊಂಡು ಹೋಗಿ ಕೊಂದ ಮೊಸಳೆ

ಅಪ್ಪ-ಅಮ್ಮನ ಜೊತೆ ನದಿಯ ದಡದಲ್ಲಿ ಆಟವಾಡುತ್ತಿದ್ದ ಬಾಲಕನ ತಲೆಗೆ ಬಾಯಿ ಹಾಕಿದ ಮೊಸಳೆ ಆತನನ್ನು ಆತನ ಹೆತ್ತವರ ಮುಂದೆಯೇ ಎಳೆದುಕೊಂಡು ಹೋಗಿದೆ.

Shocking News: ಹೆತ್ತವರ ಮುಂದೆಯೇ 8 ವರ್ಷದ ಬಾಲಕನನ್ನು ಎಳೆದುಕೊಂಡು ಹೋಗಿ ಕೊಂದ ಮೊಸಳೆ
ಮೊಸಳೆ
TV9 Web
| Edited By: |

Updated on: Nov 30, 2022 | 2:54 PM

Share

ನವದೆಹಲಿ: ತಾವು ಹೆತ್ತ ಮಗುವಿನ ಸಾವನ್ನು ತಮ್ಮ ಕಣ್ಣಮುಂದೆಯೇ ನೋಡುವುದು ಬಹಳ ನೋವಿನ ಸಂಗತಿ. ನದಿಯ ಪಕ್ಕದಲ್ಲಿ ವೀಕೆಂಡ್ (Weekend) ಸಮಯವನ್ನು ಕಳೆಯಲು ಹೋಗಿದ್ದ ಕುಟುಂಬಕ್ಕೆ ಜೀವನಪೂರ್ತಿ ಮರೆಯಲಾಗದ ದುಃಖ ಎದುರಾಗಿದೆ. ಕೋಸ್ಟಾ ರಿಕಾದಲ್ಲಿ (Costa Rica) ನದಿಯ ಪಕ್ಕದಲ್ಲಿ ಅಪ್ಪ-ಅಮ್ಮನ ಜೊತೆ ಆಟವಾಡುತ್ತಿದ್ದ 8 ವರ್ಷದ ಬಾಲಕನನ್ನು ಮೊಸಳೆಯೊಂದು (Crocodile) ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. ಆ ಬಾಲಕನ ಮೃತದೇಹ ಅಥವಾ ದೇಹದ ಅವಶೇಷಗಳು ಇನ್ನೂ ಪತ್ತೆಯಾಗಿಲ್ಲ. ಆತನನ್ನು ನೀರಿನೊಳಗೆ ಎಳೆದುಕೊಂಡು ಹೋದ ಮೊಸಳೆ ಮತ್ತೆ ಹೊರಗೆ ಬಂದಿಲ್ಲ.

ಅಪ್ಪ-ಅಮ್ಮನ ಜೊತೆ ನದಿಯ ದಡದಲ್ಲಿ ಆಟವಾಡುತ್ತಿದ್ದ ಬಾಲಕನ ತಲೆಗೆ ಬಾಯಿ ಹಾಕಿದ ಮೊಸಳೆ ಆತನನ್ನು ಆತನ ಹೆತ್ತವರ ಮುಂದೆಯೇ ಎಳೆದುಕೊಂಡು ಹೋಗಿದೆ. ಜೂಲಿಯೊ ಒಟೆರೊ ಫೆರ್ನಾಂಡಿಸ್ ಎಂಬ 8 ವರ್ಷದ ಬಾಲಕ ತನ್ನ ಮನೆಯ ಸಮೀಪವಿರುವ ಮರೀನಾ ನದಿಗೆ ಭೇಟಿ ನೀಡಿದ್ದ. ತನ್ನ ಅಪ್ಪ, ಅಮ್ಮ, ನಾಲ್ವರು ಅಣ್ಣ-ತಮ್ಮಂದಿರ ಜೊತೆ ಹೋಗಿದ್ದ ಆತ ಎಲ್ಲರೊಂದಿಗೆ ಆಟವಾಡುತ್ತಿದ್ದಾಗ ಮೊಸಳೆ ದಾಳಿ ನಡೆಸಿದೆ.

ಇದನ್ನೂ ಓದಿ: ಕಾರವಾರ: ಜನರ ಎಚ್ಚರಿಕೆ ಕಡೆಗಣಿಸಿ ಈಜಲು ಕಾಳಿ ನದಿಗಿಳಿದವನನ್ನು ನರಭಕ್ಷಕ ಮೊಸಳೆ ನೀರಿನಾಳಕ್ಕೆ ಎಳೆದೊಯ್ಯಿತು!

ಆಟವಾಡುತ್ತಿದ್ದಾಗ ನದಿಗೆ ಇಳಿದ ಆತ ಮೊಣಕಾಲು ಆಳದ ನೀರಿನಲ್ಲಿ ನಿಂತಿದ್ದಾಗ ಮಧ್ಯಾಹ್ನ 2 ಗಂಟೆಯ ವೇಳೆಗೆ ಬೃಹತ್ ಮೊಸಳೆ ಅವನತ್ತ ನುಗ್ಗಿತು. ಆ ಮೊಸಳೆ ಅವನನ್ನು ನದಿಯ ಆಳಕ್ಕೆ ಎಳೆದುಕೊಂಡು ಹೋಗುವ ಮೊದಲು ಅವನ ತಲೆಯನ್ನು ಕಚ್ಚಿ, ತುಂಡು ಮಾಡಿರುವುದನ್ನು ಕುಟುಂಬಸ್ಥರು ನೋಡಿದ್ದಾರೆ. ಆಮೇಲೆ ಏನಾಯಿತೆಂದು ಯಾರಿಗೂ ಸುಳಿವು ಸಿಕ್ಕಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?