AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೆತ್ತವರ ಮುಂದೆಯೇ 8 ವರ್ಷದ ಬಾಲಕನನ್ನು ಎಳೆದುಕೊಂಡು ಹೋಗಿ ಕೊಂದ ಮೊಸಳೆ

ಅಪ್ಪ-ಅಮ್ಮನ ಜೊತೆ ನದಿಯ ದಡದಲ್ಲಿ ಆಟವಾಡುತ್ತಿದ್ದ ಬಾಲಕನ ತಲೆಗೆ ಬಾಯಿ ಹಾಕಿದ ಮೊಸಳೆ ಆತನನ್ನು ಆತನ ಹೆತ್ತವರ ಮುಂದೆಯೇ ಎಳೆದುಕೊಂಡು ಹೋಗಿದೆ.

Shocking News: ಹೆತ್ತವರ ಮುಂದೆಯೇ 8 ವರ್ಷದ ಬಾಲಕನನ್ನು ಎಳೆದುಕೊಂಡು ಹೋಗಿ ಕೊಂದ ಮೊಸಳೆ
ಮೊಸಳೆ
TV9 Web
| Edited By: |

Updated on: Nov 30, 2022 | 2:54 PM

Share

ನವದೆಹಲಿ: ತಾವು ಹೆತ್ತ ಮಗುವಿನ ಸಾವನ್ನು ತಮ್ಮ ಕಣ್ಣಮುಂದೆಯೇ ನೋಡುವುದು ಬಹಳ ನೋವಿನ ಸಂಗತಿ. ನದಿಯ ಪಕ್ಕದಲ್ಲಿ ವೀಕೆಂಡ್ (Weekend) ಸಮಯವನ್ನು ಕಳೆಯಲು ಹೋಗಿದ್ದ ಕುಟುಂಬಕ್ಕೆ ಜೀವನಪೂರ್ತಿ ಮರೆಯಲಾಗದ ದುಃಖ ಎದುರಾಗಿದೆ. ಕೋಸ್ಟಾ ರಿಕಾದಲ್ಲಿ (Costa Rica) ನದಿಯ ಪಕ್ಕದಲ್ಲಿ ಅಪ್ಪ-ಅಮ್ಮನ ಜೊತೆ ಆಟವಾಡುತ್ತಿದ್ದ 8 ವರ್ಷದ ಬಾಲಕನನ್ನು ಮೊಸಳೆಯೊಂದು (Crocodile) ಎಳೆದುಕೊಂಡು ಹೋಗಿರುವ ಘಟನೆ ನಡೆದಿದೆ. ಆ ಬಾಲಕನ ಮೃತದೇಹ ಅಥವಾ ದೇಹದ ಅವಶೇಷಗಳು ಇನ್ನೂ ಪತ್ತೆಯಾಗಿಲ್ಲ. ಆತನನ್ನು ನೀರಿನೊಳಗೆ ಎಳೆದುಕೊಂಡು ಹೋದ ಮೊಸಳೆ ಮತ್ತೆ ಹೊರಗೆ ಬಂದಿಲ್ಲ.

ಅಪ್ಪ-ಅಮ್ಮನ ಜೊತೆ ನದಿಯ ದಡದಲ್ಲಿ ಆಟವಾಡುತ್ತಿದ್ದ ಬಾಲಕನ ತಲೆಗೆ ಬಾಯಿ ಹಾಕಿದ ಮೊಸಳೆ ಆತನನ್ನು ಆತನ ಹೆತ್ತವರ ಮುಂದೆಯೇ ಎಳೆದುಕೊಂಡು ಹೋಗಿದೆ. ಜೂಲಿಯೊ ಒಟೆರೊ ಫೆರ್ನಾಂಡಿಸ್ ಎಂಬ 8 ವರ್ಷದ ಬಾಲಕ ತನ್ನ ಮನೆಯ ಸಮೀಪವಿರುವ ಮರೀನಾ ನದಿಗೆ ಭೇಟಿ ನೀಡಿದ್ದ. ತನ್ನ ಅಪ್ಪ, ಅಮ್ಮ, ನಾಲ್ವರು ಅಣ್ಣ-ತಮ್ಮಂದಿರ ಜೊತೆ ಹೋಗಿದ್ದ ಆತ ಎಲ್ಲರೊಂದಿಗೆ ಆಟವಾಡುತ್ತಿದ್ದಾಗ ಮೊಸಳೆ ದಾಳಿ ನಡೆಸಿದೆ.

ಇದನ್ನೂ ಓದಿ: ಕಾರವಾರ: ಜನರ ಎಚ್ಚರಿಕೆ ಕಡೆಗಣಿಸಿ ಈಜಲು ಕಾಳಿ ನದಿಗಿಳಿದವನನ್ನು ನರಭಕ್ಷಕ ಮೊಸಳೆ ನೀರಿನಾಳಕ್ಕೆ ಎಳೆದೊಯ್ಯಿತು!

ಆಟವಾಡುತ್ತಿದ್ದಾಗ ನದಿಗೆ ಇಳಿದ ಆತ ಮೊಣಕಾಲು ಆಳದ ನೀರಿನಲ್ಲಿ ನಿಂತಿದ್ದಾಗ ಮಧ್ಯಾಹ್ನ 2 ಗಂಟೆಯ ವೇಳೆಗೆ ಬೃಹತ್ ಮೊಸಳೆ ಅವನತ್ತ ನುಗ್ಗಿತು. ಆ ಮೊಸಳೆ ಅವನನ್ನು ನದಿಯ ಆಳಕ್ಕೆ ಎಳೆದುಕೊಂಡು ಹೋಗುವ ಮೊದಲು ಅವನ ತಲೆಯನ್ನು ಕಚ್ಚಿ, ತುಂಡು ಮಾಡಿರುವುದನ್ನು ಕುಟುಂಬಸ್ಥರು ನೋಡಿದ್ದಾರೆ. ಆಮೇಲೆ ಏನಾಯಿತೆಂದು ಯಾರಿಗೂ ಸುಳಿವು ಸಿಕ್ಕಿಲ್ಲ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ