AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಮಸೀದಿಯೊಳಗೆ ಮನಬಂದಂತೆ ಗುಂಡಿನ ದಾಳಿ, ಮೂವರು ಸಾವು, ಇಬ್ಬರು ಶಂಕಿತರು ಕೂಡ ಶವವಾಗಿ ಪತ್ತೆ

ಅಮೆರಿಕದ ಸ್ಯಾನ್ ಡಿಯಾಗೋದಲ್ಲಿರುವ ಇಸ್ಲಾಮಿಕ್ ಸೆಂಟರ್ ಮಸೀದಿಯೊಳಗೆ ಭೀಕರ ಗುಂಡಿನ ದಾಳಿ ನಡೆದಿದೆ. ಇಬ್ಬರು ಮಸೀದಿಗೆ ನುಗ್ಗಿ ಗುಂಡಿನ ಸುರಿಮಳೆಗೈದಿದ್ದಾರೆ. ಮಸೀದಿಯ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರು ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಇತ್ತ ಪೊಲೀಸರು ನಡೆಸಿದ ತಕ್ಷಣದ ಪ್ರತಿದಾಳಿಯಲ್ಲಿ ಇಬ್ಬರು ಶೂಟರ್‌ಗಳೂ ಸಹ ಸಾವನ್ನಪ್ಪಿದ್ದಾರೆ ಎಂದು ಸ್ಯಾನ್ ಡಿಯಾಗೋ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ತಿಳಿಸಿದ್ದಾರೆ.

ಅಮೆರಿಕದ ಮಸೀದಿಯೊಳಗೆ ಮನಬಂದಂತೆ ಗುಂಡಿನ ದಾಳಿ, ಮೂವರು ಸಾವು, ಇಬ್ಬರು ಶಂಕಿತರು ಕೂಡ ಶವವಾಗಿ ಪತ್ತೆ
ಮಸೀದಿImage Credit source: NDTV
ನಯನಾ ರಾಜೀವ್
|

Updated on: May 19, 2026 | 8:03 AM

Share

ಸ್ಯಾನ್ ಡಿಯಾಗೋ, ಮೇ 19: ಅಮೆರಿಕದ ಸ್ಯಾನ್ ಡಿಯಾಗೋದಲ್ಲಿರುವ ಇಸ್ಲಾಮಿಕ್ ಸೆಂಟರ್ ಮಸೀದಿ(Mosque)ಯೊಳಗೆ ಭೀಕರ ಗುಂಡಿನ ದಾಳಿ ನಡೆದಿದೆ. ಇಬ್ಬರು ಮಸೀದಿಗೆ ನುಗ್ಗಿ ಗುಂಡಿನ ಸುರಿಮಳೆಗೈದಿದ್ದಾರೆ. ಮಸೀದಿಯ ಭದ್ರತಾ ಸಿಬ್ಬಂದಿ ಸೇರಿದಂತೆ ಮೂವರು ಅಮಾಯಕರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಇತ್ತ ಪೊಲೀಸರು ನಡೆಸಿದ ತಕ್ಷಣದ ಪ್ರತಿದಾಳಿಯಲ್ಲಿ ಇಬ್ಬರು ಶೂಟರ್‌ಗಳೂ ಸಹ ಸಾವನ್ನಪ್ಪಿದ್ದಾರೆ ಎಂದು ಸ್ಯಾನ್ ಡಿಯಾಗೋ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ತಿಳಿಸಿದ್ದಾರೆ.

ಈ ಇಸ್ಲಾಮಿಕ್ ಕೇಂದ್ರವು ಸ್ಯಾನ್ ಡಿಯಾಗೋ ಕೌಂಟಿಯಲ್ಲೇ ಅತ್ಯಂತ ದೊಡ್ಡ ಮಸೀದಿಯಾಗಿದ್ದು, ಇಲ್ಲಿ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ಅರೇಬಿಕ್ ಭಾಷೆ, ಇಸ್ಲಾಮಿಕ್ ಅಧ್ಯಯನಗಳು ಮತ್ತು ಕುರಾನ್ ಬೋಧನೆ ಮಾಡುವ ‘ಅಲ್ ರಶೀದ್’ ಶಾಲೆ ಕೂಡ ಇದೆ. ಗುಂಡಿನ ದಾಳಿ ನಡೆದ ತಕ್ಷಣ ಇಡೀ ಪ್ರದೇಶವನ್ನು ಹತ್ತಾರು ಪೊಲೀಸ್ ವಾಹನಗಳು ಸುತ್ತುವರೆದವು. ಮಸೀದಿಯ ಪಾರ್ಕಿಂಗ್ ಸ್ಥಳದಿಂದ ಡಜನ್‌ಗಿಂತಲೂ ಹೆಚ್ಚು ಪುಟ್ಟ ಮಕ್ಕಳು ಪ್ರಾಣಭಯದಿಂದ ಪರಸ್ಪರ ಕೈ ಕೈ ಹಿಡಿದುಕೊಂಡು ಸುರಕ್ಷಿತವಾಗಿ ಹೊರಗೆ ಬರುತ್ತಿರುವ ದೃಶ್ಯಗಳು ಹೆಲಿಕಾಪ್ಟರ್ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ನೋಡುಗರ ಕರುಳು ಹಿಂಡುವಂತಿತ್ತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಸೀದಿಯ ಇಮಾಮ್ ತಹಾ ಹಸಾನೆ, ಈ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ನಮ್ಮ ಕೇಂದ್ರವು ಸದಾ ಅಂತರ್​ಧರ್ಮೀಯ ಸೌಹಾರ್ದತೆ ಮತ್ತು ಸಮುದಾಯ ನಿರ್ಮಾಣದ ಮೇಲೆ ಕೆಲಸ ಮಾಡುತ್ತದೆ. ಇಸ್ಲಾಂ ಧರ್ಮದ ಬಗ್ಗೆ ತಿಳಿದುಕೊಳ್ಳಲು ಮುಸ್ಲಿಮೇತರರ ದೊಡ್ಡ ಗುಂಪೊಂದು ಮುಂಜಾನೆ ಮಸೀದಿಗೆ ಬಂದಿತ್ತು. ಅಂತಹ ಶಾಂತಿ ಬಯಸುವ ಜಾಗದಲ್ಲಿ ಈ ರಕ್ತಪಾತ ನಡೆದಿದೆ ಎಂದು ಅವರು ಕಣ್ಣೀರಿಟ್ಟಿದ್ದಾರೆ.\

ಮತ್ತಷ್ಟು ಓದಿ: ಹಫ್ತಾ ವಸೂಲಿ ಮಾಡುತ್ತ ಏರಿಯಾದಲ್ಲಿ ಹವಾ, ಮಸೀದಿ ಪಕ್ಕದ ಜಾಗಕ್ಕಾಗಿ ಬಿತ್ತು ಹೆಣ

ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ಮಾತನಾಡಿ, ಪ್ರಾಥಮಿಕ ಸಾಕ್ಷ್ಯಗಳ ಆಧಾರದ ಮೇಲೆ ಇದನ್ನು ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಸಿದ ‘ದ್ವೇಷಾಪರಾಧ’ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಆದರೆ ದಾಳಿ ನಡೆಸಿದ ಹದಿಹರೆಯದ ಶೂಟರ್‌ಗಳು ಯಾರು ಮತ್ತು ಅವರ ಹಿನ್ನೆಲೆ ಏನು ಎಂಬ ಹೆಚ್ಚಿನ ವಿವರಗಳನ್ನು ಸದ್ಯಕ್ಕೆ ಗೌಪ್ಯವಾಗಿಡಲಾಗಿದೆ ಎಂದಿದ್ದಾರೆ.

ಕ್ಯಾಲಿಫೋರ್ನಿಯಾ ಗವರ್ನರ್ ಗ್ಯಾವಿನ್ ನ್ಯೂಸಮ್ ಅವರ ಕಚೇರಿಯು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ತಿಳಿಸಿದೆ. “ಸಮುದಾಯವನ್ನು ರಕ್ಷಿಸಲು ಜೀವದ ಹಂಗು ತೊರೆದು ತಕ್ಷಣ ಸ್ಪಂದಿಸಿದ ರಕ್ಷಣಾ ಸಿಬ್ಬಂದಿಗೆ ಧನ್ಯವಾದಗಳು. ಸಾರ್ವಜನಿಕರು ಸ್ಥಳೀಯ ಅಧಿಕಾರಿಗಳ ಮಾರ್ಗದರ್ಶನವನ್ನು ಅನುಸರಿಸಬೇಕು” ಎಂದು ಗವರ್ನರ್ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

ಶಾಂತಿ ಮತ್ತು ಶಿಕ್ಷಣದ ಕೇಂದ್ರವಾಗಿದ್ದ ಸ್ಯಾನ್ ಡಿಯಾಗೋದ ಮಸೀದಿಯ ಸುತ್ತಮುತ್ತಲಿನ ಮುಸ್ಲಿಂ ಮಾರುಕಟ್ಟೆಗಳು ಮತ್ತು ನೆರೆಹೊರೆಯಲ್ಲಿ ಸದ್ಯ ಭೀತಿಯ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ