AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿನ ದಾಳಿ, ಅಧ್ಯಕ್ಷ ಟ್ರಂಪ್​ರನ್ನು ಸುರಕ್ಷಿತ ತಾಣಕ್ಕೆ ಕರೆದೊಯ್ದ ಭದ್ರತಾಧಿಕಾರಿಗಳು

[lazy-load-videos-and-sticky-control id=”TZ_EDRao1z4″] ವಾಷಿಂಗ್ಟನ್: ಅಮೆರಿಕ ನೂತನ ಅಧ್ಯಕ್ಷರ ಆಯ್ಕೆಗೆ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲಿ ಶಕ್ತಿಕೇಂದ್ರ ವಾಷಿಂಗ್ಟನ್ ಸಮೀಪ ಗುಂಡಿನ ದಾಳಿ ನಡೆದಿದೆ. ಆ ವೇಳೆ, ಶ್ವೇತ ಭವನದ ಒಳಗೆ ಮಹತ್ವದ ಸುದ್ದಿಗೋಷ್ಠಿ ನಡೆಸುತ್ತಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ರಹಸ್ಯ ಸೇವಾ ಭದ್ರತಾಧಿಕಾರಿಗಳು ಸುತ್ತುವರಿದು ಸುರಕ್ಷಿತ ತಾಣಕ್ಕೆ ಕರೆದೊಯ್ದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಪತ್ರಕರ್ತರನ್ನೂ ಸುರಕ್ಷಿತ ತಾಣಕ್ಕೆ ತಲುಪಿಸಲಾಗಿದೆ ಎಂದು ವೈಟ್​ ಹೌಸ್​ ಮೂಲಗಳು ತಿಳಿಸಿವೆ. ಶ್ವೇತ ಭವನದ ಭದ್ರತೆಗೆ ನಿಯೋಜನೆ ಗೊಂಡಿದ್ದ ಭದ್ರತಾಪಡೆಗಳು ಸ್ವಯಂಚಾಲಿತ ರಫಲ್ಸ್​​ನೊಂದಿಗೆ ಶ್ವೇತಭನವನ್ನ […]

ಗುಂಡಿನ ದಾಳಿ, ಅಧ್ಯಕ್ಷ ಟ್ರಂಪ್​ರನ್ನು ಸುರಕ್ಷಿತ ತಾಣಕ್ಕೆ ಕರೆದೊಯ್ದ ಭದ್ರತಾಧಿಕಾರಿಗಳು
ಡೊನಾಲ್ಡ್​ ಟ್ರಂಪ್​
ಸಾಧು ಶ್ರೀನಾಥ್​
|

Updated on:Aug 11, 2020 | 12:58 PM

Share

[lazy-load-videos-and-sticky-control id=”TZ_EDRao1z4″]

ವಾಷಿಂಗ್ಟನ್: ಅಮೆರಿಕ ನೂತನ ಅಧ್ಯಕ್ಷರ ಆಯ್ಕೆಗೆ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲಿ ಶಕ್ತಿಕೇಂದ್ರ ವಾಷಿಂಗ್ಟನ್ ಸಮೀಪ ಗುಂಡಿನ ದಾಳಿ ನಡೆದಿದೆ. ಆ ವೇಳೆ, ಶ್ವೇತ ಭವನದ ಒಳಗೆ ಮಹತ್ವದ ಸುದ್ದಿಗೋಷ್ಠಿ ನಡೆಸುತ್ತಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ರಹಸ್ಯ ಸೇವಾ ಭದ್ರತಾಧಿಕಾರಿಗಳು ಸುತ್ತುವರಿದು ಸುರಕ್ಷಿತ ತಾಣಕ್ಕೆ ಕರೆದೊಯ್ದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಪತ್ರಕರ್ತರನ್ನೂ ಸುರಕ್ಷಿತ ತಾಣಕ್ಕೆ ತಲುಪಿಸಲಾಗಿದೆ ಎಂದು ವೈಟ್​ ಹೌಸ್​ ಮೂಲಗಳು ತಿಳಿಸಿವೆ.

ಶ್ವೇತ ಭವನದ ಭದ್ರತೆಗೆ ನಿಯೋಜನೆ ಗೊಂಡಿದ್ದ ಭದ್ರತಾಪಡೆಗಳು ಸ್ವಯಂಚಾಲಿತ ರಫಲ್ಸ್​​ನೊಂದಿಗೆ ಶ್ವೇತಭನವನ್ನ ಸುತ್ತುವರಿದಿದ್ದಾರೆ. ಇದೇ ವೇಳೆ ಶ್ವೇತ ಭವನದ ಉತ್ತರ ಭಾಗದಲ್ಲಿ ಶಸ್ತ್ರಧಾರಿಯೊಬ್ಬ Secret Service guards ಕಣ್ಣಿಗೆ ಬಿದ್ದಿದ್ದು, ಅವನ ಮೇಲೆ ಗುಂಡಿನ ಮಳೆಗರೆದಿದ್ದಾರೆ.

ಪ್ರಪಂಚ ಅಪಾಯಕಾರಿಯಾಗಿದೆ: ಟ್ರಂಪ್​ ಇನ್ನು ಘಟನೆ ನಂತರ ಸುದ್ದಿಗೋಷ್ಠಿ ಮುಂದುವರಿಸಿದ ಮಾತನಾಡಿರುವ ಟ್ರಂಪ್​ ದಾಳಿ ನಡೆದಿದ್ದು ಶ್ವೇತಭವನದ ಹೊರಗಡೆ. ನನಗೆ ಬೆದರಿಕೆ ಇತ್ತು ಎಂದು ಹೇಳಲಾಗದು. ಆದರೂ ಈ ಪ್ರಪಂಚ ಅಪಾಯಕಾರಿಯಾಗಿದೆ. ಇದು ಯಾವುದೂ ವಿರಳ ಘಟನೆ ಎಂದು ತಳ್ಳಿಹಾಕಲಾಗದು ಎಂದರು.

ನನ್ನ ಭದ್ರತಾಧಿಕಾರಿಗಳು ನಿಜಕ್ಕೂ ಅದ್ಭುತ, ಬೆಸ್ಟ್​ ಬೆಸ್ಟ್​. ಅವರು ತಕ್ಷಣ ನನ್ನ ನೆರವಿಗೆ ಧಾವಿಸಿದ್ದಾರೆ. ಅವರ ಕೈಯಲ್ಲಿ ನಾನು ಸುರಕ್ಷಿತವಾಗಿರಬಲ್ಲೆ ಎಂಬ ನಂಬಿಕೆ ನನಗಿದೆ ಎಂದು ಟ್ರಂಪ್​ ಹೇಳಿದರು.

Published On - 8:46 am, Tue, 11 August 20

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ