AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಆಫ್ರಿಕಾದ ಬಾರ್​ನಲ್ಲಿ ಅಡ್ಡಾದಿಡ್ಡಿ ಗುಂಡು ಹಾರಾಟ: 14 ಮಂದಿ ಸಾವು

ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ಹೊತ್ತಿಗೆ 12 ಮಂದಿ ಮೃತಪಟ್ಟಿದ್ದರು. ಗಾಯಗೊಂಡಿದ್ದ 11 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ದಕ್ಷಿಣ ಆಫ್ರಿಕಾದ ಬಾರ್​ನಲ್ಲಿ ಅಡ್ಡಾದಿಡ್ಡಿ ಗುಂಡು ಹಾರಾಟ: 14 ಮಂದಿ ಸಾವು
ಜೊಹಾನ್ಸ್​ಬರ್ಗ್​ನ ಸೊವೆಟೊ ಪಟ್ಟಣದಲ್ಲಿ ಅಡ್ಡಾದಿಡ್ಡಿ ಗುಂಡು ಹಾರಾಟ ನಡೆದಿದೆ.
TV9 Web
| Edited By: |

Updated on: Jul 10, 2022 | 1:56 PM

Share

ಜೋಹಾನ್ಸ್​ಬರ್ಗ್: ದಕ್ಷಿಣ ಆಫ್ರಿಕಾದ ಸೊವೆಟೊ (Soweto of Johannesburg)  ಪಟ್ಟಣದಲ್ಲಿ ದುಷ್ಕರ್ಮಿಯೊಬ್ಬ ಅಡ್ಡಾದಿಡ್ಡಿ ಗುಂಡು ಹಾರಿಸಿ 14 ಮಂದಿಯನ್ನು ಕೊಂದಿದ್ದಾನೆ. ಈ ಪಟ್ಟಣವು ದಕ್ಷಿಣ ಆಫ್ರಿಕಾದ ಪ್ರಮುಖ ನಗರ ಜೋಹಾನ್ಸ್​ಬರ್ಗ್​​ ಸಮೀಪವೇ ಇದೆ. ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ನಸುಕಿನವರೆಗೆ ಗುಂಡಿನ ದಾಳಿ ನಡೆದಿದೆ. ನಮಗೆ ನಡುರಾತ್ರಿ 12:30ಕ್ಕೆ ವಿಷಯ ತಿಳಿಯಿತು ಎಂದು ಪೊಲೀಸ್ ಅಧಿಕಾರಿ ಲೆಫ್ಟಿನೆಂಟ್ ಎಲಿಯಾಸ್ ಮಾವೆಲಾ ಹೇಳಿದರು.

ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ಹೊತ್ತಿಗೆ 12 ಮಂದಿ ಮೃತಪಟ್ಟಿದ್ದರು. ಗಾಯಗೊಂಡಿದ್ದ 11 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಪೈಕಿ ಇಬ್ಬರು ನಂತರ ಮೃತಪಟ್ಟರು. ಜೊಹಾನ್ಸ್​ಬರ್ಗ್​​ ಹೊರವಲಯದಲ್ಲಿರುವ ಆರ್​ಲೆಂಡೊ ಜಿಲ್ಲೆಯಲ್ಲಿ ಸೊವೆಟೊ ಪಟ್ಟಣವಿದೆ.

ಇತ್ತೀಚಿನ ದಿನಗಳಲ್ಲಿ ವಿಶ್ವದ ವಿವಿಧೆಡೆ ಅಡ್ಡಾದಿಡ್ಡಿ ಗುಂಡು ಹಾರಿಸಿ ಜನರನ್ನು ಕೊಲ್ಲುವ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇತ್ತೀಚೆಗಷ್ಟೇ ಜಪಾನ್​ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಅಮೆರಿಕದ ಟೆಕ್ಸಾಸ್, ನ್ಯೂಯಾರ್ಕ್ ಸೇರಿದಂತೆ ಹಲವೆಡೆ ಗುಂಡಿನ ದಾಳಿ ನಡೆದು ಶಾಲಾ ಮಕ್ಕಳು ಮತ್ತು ಸಾರ್ವಜನಿಕರನ್ನು ಹತ್ಯೆ ಮಾಡಲಾಗಿತ್ತು. ಗುಂಡಿನ ದಾಳಿಯು ಒಂದು ಪಿಡುಗಾಗಿ ಬೆಳೆಯುತ್ತಿರುವುದನ್ನು ಗಮನಿಸಿದ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಬಂದೂಕು ಹೊಂದಲು ನಿರ್ಬಂಧ ವಿಧಿಸಲು ಮುಂದಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

Follow Us
Web contact
Web contact

TV9 Kannada

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ