AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಆಫ್ರಿಕಾದ ಬಾರ್​ನಲ್ಲಿ ಅಡ್ಡಾದಿಡ್ಡಿ ಗುಂಡು ಹಾರಾಟ: 14 ಮಂದಿ ಸಾವು

ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ಹೊತ್ತಿಗೆ 12 ಮಂದಿ ಮೃತಪಟ್ಟಿದ್ದರು. ಗಾಯಗೊಂಡಿದ್ದ 11 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ದಕ್ಷಿಣ ಆಫ್ರಿಕಾದ ಬಾರ್​ನಲ್ಲಿ ಅಡ್ಡಾದಿಡ್ಡಿ ಗುಂಡು ಹಾರಾಟ: 14 ಮಂದಿ ಸಾವು
ಜೊಹಾನ್ಸ್​ಬರ್ಗ್​ನ ಸೊವೆಟೊ ಪಟ್ಟಣದಲ್ಲಿ ಅಡ್ಡಾದಿಡ್ಡಿ ಗುಂಡು ಹಾರಾಟ ನಡೆದಿದೆ.
TV9 Web
| Edited By: |

Updated on: Jul 10, 2022 | 1:56 PM

Share

ಜೋಹಾನ್ಸ್​ಬರ್ಗ್: ದಕ್ಷಿಣ ಆಫ್ರಿಕಾದ ಸೊವೆಟೊ (Soweto of Johannesburg)  ಪಟ್ಟಣದಲ್ಲಿ ದುಷ್ಕರ್ಮಿಯೊಬ್ಬ ಅಡ್ಡಾದಿಡ್ಡಿ ಗುಂಡು ಹಾರಿಸಿ 14 ಮಂದಿಯನ್ನು ಕೊಂದಿದ್ದಾನೆ. ಈ ಪಟ್ಟಣವು ದಕ್ಷಿಣ ಆಫ್ರಿಕಾದ ಪ್ರಮುಖ ನಗರ ಜೋಹಾನ್ಸ್​ಬರ್ಗ್​​ ಸಮೀಪವೇ ಇದೆ. ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ನಸುಕಿನವರೆಗೆ ಗುಂಡಿನ ದಾಳಿ ನಡೆದಿದೆ. ನಮಗೆ ನಡುರಾತ್ರಿ 12:30ಕ್ಕೆ ವಿಷಯ ತಿಳಿಯಿತು ಎಂದು ಪೊಲೀಸ್ ಅಧಿಕಾರಿ ಲೆಫ್ಟಿನೆಂಟ್ ಎಲಿಯಾಸ್ ಮಾವೆಲಾ ಹೇಳಿದರು.

ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ಹೊತ್ತಿಗೆ 12 ಮಂದಿ ಮೃತಪಟ್ಟಿದ್ದರು. ಗಾಯಗೊಂಡಿದ್ದ 11 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಪೈಕಿ ಇಬ್ಬರು ನಂತರ ಮೃತಪಟ್ಟರು. ಜೊಹಾನ್ಸ್​ಬರ್ಗ್​​ ಹೊರವಲಯದಲ್ಲಿರುವ ಆರ್​ಲೆಂಡೊ ಜಿಲ್ಲೆಯಲ್ಲಿ ಸೊವೆಟೊ ಪಟ್ಟಣವಿದೆ.

ಇತ್ತೀಚಿನ ದಿನಗಳಲ್ಲಿ ವಿಶ್ವದ ವಿವಿಧೆಡೆ ಅಡ್ಡಾದಿಡ್ಡಿ ಗುಂಡು ಹಾರಿಸಿ ಜನರನ್ನು ಕೊಲ್ಲುವ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿವೆ. ಇತ್ತೀಚೆಗಷ್ಟೇ ಜಪಾನ್​ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಅಮೆರಿಕದ ಟೆಕ್ಸಾಸ್, ನ್ಯೂಯಾರ್ಕ್ ಸೇರಿದಂತೆ ಹಲವೆಡೆ ಗುಂಡಿನ ದಾಳಿ ನಡೆದು ಶಾಲಾ ಮಕ್ಕಳು ಮತ್ತು ಸಾರ್ವಜನಿಕರನ್ನು ಹತ್ಯೆ ಮಾಡಲಾಗಿತ್ತು. ಗುಂಡಿನ ದಾಳಿಯು ಒಂದು ಪಿಡುಗಾಗಿ ಬೆಳೆಯುತ್ತಿರುವುದನ್ನು ಗಮನಿಸಿದ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಬಂದೂಕು ಹೊಂದಲು ನಿರ್ಬಂಧ ವಿಧಿಸಲು ಮುಂದಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು