AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ನಾಲ್ಕು ಗುಂಡು ತಾಗಿತ್ತು: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್

ದಾಳಿಯ ಹಿಂದಿನ ದಿನ ವಜೀರಾಬಾದ್‌ನಲ್ಲಿ ಅಥವಾ ಗುಜರಾತ್‌ನಲ್ಲಿ ಅವರು ನನ್ನನ್ನು ಕೊಲ್ಲಲು ಯೋಜಿಸಿದ್ದಾರೆ ಎಂದು ನನಗೆ ತಿಳಿದಿತ್ತು

ನನಗೆ ನಾಲ್ಕು ಗುಂಡು ತಾಗಿತ್ತು: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್
ಇಮ್ರಾನ್ ಖಾನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 04, 2022 | 10:25 PM

Share

ಲಾಹೋರ್: ಪಾಕಿಸ್ತಾನದ (Pakistan) ಪಂಜಾಬ್‌ನ ವಜೀರಾಬಾದ್ ಪಟ್ಟಣದಲ್ಲಿ ಗುರುವಾರ ನಡೆದ ಹತ್ಯೆಯ ಪ್ರಯತ್ನದಲ್ಲಿ ತನಗೆ ನಾಲ್ಕು ಬುಲೆಟ್‌ಗಳು ತಾಗಿತ್ತು ಎಂದು ಇಮ್ರಾನ್ ಖಾನ್ (Imran Khan) ಶುಕ್ರವಾರ ಹೇಳಿದ್ದಾರೆ. “ದಾಳಿಯ ಹಿಂದಿನ ದಿನ ವಜೀರಾಬಾದ್‌ನಲ್ಲಿ ಅಥವಾ ಗುಜರಾತ್‌ನಲ್ಲಿ ಅವರು ನನ್ನನ್ನು ಕೊಲ್ಲಲು ಯೋಜಿಸಿದ್ದಾರೆ ಎಂದು ನನಗೆ ತಿಳಿದಿತ್ತು” ಎಂದು ಪಾಕ್ ಮಾಜಿ ಪ್ರಧಾನಿ ವಿಡಿಯೊದಲ್ಲಿ ಹೇಳಿದ್ದಾರೆ. ತಮ್ಮ ಮೇಲೆ ದಾಳಿ ನಡೆದ ನಂತರ ಲಾಹೋರ್ ಆಸ್ಪತ್ರೆಯಿಂದ ಇದೇ ಮೊದಲ ಬಾರಿ ಅವರು ಮಾತನಾಡಿದ್ದಾರೆ. ವಜೀರಾಬಾದ್ ಮತ್ತು ಗುಜರಾತ್ ಸೈನ್ಯ ಸ್ಥಾಪನೆ ಬೆಂಬಲಿತ ಫೆಡರಲ್ ಸರ್ಕಾರದ ವಿರುದ್ಧ ಲಾಹೋರ್‌ನಿಂದ ಇಸ್ಲಾಮಾಬಾದ್‌ಗೆ ಸಾಗುವ ಮಾರ್ಗದಲ್ಲಿ ಬರುವ ಪಟ್ಟಣಗಳಾಗಿವೆ. ನನಗೆ ನಾಲ್ಕು ಗುಂಡು ತಾಗಿದೆ ಎಂದು ಖಾನ್ ತಮ್ಮ ಕಾಲಿನ ಮೇಲಿನ ಹೊಲಿಗೆಗಳನ್ನು ತೋರಿಸುತ್ತಾ, ಗಾಲಿಕುರ್ಚಿಯಲ್ಲಿ ಕುಳಿತು ಹೇಳಿದ್ದಾರೆ. ಅವರು ಆಸ್ಪತ್ರೆಯ ನೀಲಿ ಗೌನ್ ಧರಿಸಿದ್ದರು.

ಇಬ್ಬರು ಶೂಟರ್‌ಗಳಿದ್ದಾರೆ. ಪೊಲೀಸರು ಇಲ್ಲಿಯವರೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ ಒಬ್ಬ ವ್ಯಕ್ತಿ ಮತ್ತು ಇತರ ಇಬ್ಬರು “ಅನುಮಾನಿತರನ್ನು” ಬಂಧಿಸಿದ್ದಾರೆ. ಖಾನ್ “ಅಪಾಯದಿಂದ ಪಾರಾಗಿದ್ದಾರೆ” ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಆದರೆ ಅವರ ಬೆಂಬಲಿಗರೊಬ್ಬರು ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಪಕ್ಷದ ಮುಖಂಡರು ಸೇರಿದಂತೆ ಕನಿಷ್ಠ 13 ಜನರು ಗುರುವಾರ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಬಂಧಿತ ದಾಳಿಕೋರನು ಕ್ಯಾಮರಾದಲ್ಲಿ ಪೊಲೀಸರಲ್ಲಿ ಇಮ್ರಾನ್ ಖಾನ್ ಜನರನ್ನು ದಾರಿತಪ್ಪಿಸುತ್ತಾನೆ ಮತ್ತು ಇಸ್ಲಾಂನ ಸಿದ್ಧಾಂತಗಳಿಂದ ದೂರವಿಡುವುದರಿಂದ ನಾನು ಅಸಮಾಧಾನಗೊಂಡಿದ್ದೇನೆ” ಎಂದಿದ್ದಾನೆ. ಆದರೆ ಖಾನ್ ಮೂರು ನಾಯಕರನ್ನು ನಿರ್ದಿಷ್ಟವಾಗಿ ದೂಷಿಸಿದ್ದಾರೆ. ಪಿಎಂ ಶೆಹಬಾಜ್ ಷರೀಫ್, ಆಂತರಿಕ ಭದ್ರತಾ ಸಚಿವ ರಾಣಾ ಸನಾವುಲ್ಲಾ ಮತ್ತು ಗುಪ್ತಚರ ಸಂಸ್ಥೆ ISI ಯನ್ನು ಮುನ್ನಡೆಸುವ ಮೇಜರ್ ಜನರಲ್ ಫೈಸಲ್ ನಸೀರ್ ಇದರ ಹಿಂದೆ ಇದ್ದಾರೆ ಎಂದು ಇಮ್ರಾನ್ಖಾನ್ ಆರೋಪಿಸಿದ್ದಾರೆ

ಆದಾಗ್ಯೂ  ಸರ್ಕಾರ ಈ ಆರೋಪ ನಿರಾಕರಿಸಿದ್ದು ನ್ಯಾಯಯುತ ತನಿಖೆಗೆ ಭರವಸೆ ನೀಡಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು