AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ನಾಲ್ಕು ಗುಂಡು ತಾಗಿತ್ತು: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್

ದಾಳಿಯ ಹಿಂದಿನ ದಿನ ವಜೀರಾಬಾದ್‌ನಲ್ಲಿ ಅಥವಾ ಗುಜರಾತ್‌ನಲ್ಲಿ ಅವರು ನನ್ನನ್ನು ಕೊಲ್ಲಲು ಯೋಜಿಸಿದ್ದಾರೆ ಎಂದು ನನಗೆ ತಿಳಿದಿತ್ತು

ನನಗೆ ನಾಲ್ಕು ಗುಂಡು ತಾಗಿತ್ತು: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್
ಇಮ್ರಾನ್ ಖಾನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 04, 2022 | 10:25 PM

Share

ಲಾಹೋರ್: ಪಾಕಿಸ್ತಾನದ (Pakistan) ಪಂಜಾಬ್‌ನ ವಜೀರಾಬಾದ್ ಪಟ್ಟಣದಲ್ಲಿ ಗುರುವಾರ ನಡೆದ ಹತ್ಯೆಯ ಪ್ರಯತ್ನದಲ್ಲಿ ತನಗೆ ನಾಲ್ಕು ಬುಲೆಟ್‌ಗಳು ತಾಗಿತ್ತು ಎಂದು ಇಮ್ರಾನ್ ಖಾನ್ (Imran Khan) ಶುಕ್ರವಾರ ಹೇಳಿದ್ದಾರೆ. “ದಾಳಿಯ ಹಿಂದಿನ ದಿನ ವಜೀರಾಬಾದ್‌ನಲ್ಲಿ ಅಥವಾ ಗುಜರಾತ್‌ನಲ್ಲಿ ಅವರು ನನ್ನನ್ನು ಕೊಲ್ಲಲು ಯೋಜಿಸಿದ್ದಾರೆ ಎಂದು ನನಗೆ ತಿಳಿದಿತ್ತು” ಎಂದು ಪಾಕ್ ಮಾಜಿ ಪ್ರಧಾನಿ ವಿಡಿಯೊದಲ್ಲಿ ಹೇಳಿದ್ದಾರೆ. ತಮ್ಮ ಮೇಲೆ ದಾಳಿ ನಡೆದ ನಂತರ ಲಾಹೋರ್ ಆಸ್ಪತ್ರೆಯಿಂದ ಇದೇ ಮೊದಲ ಬಾರಿ ಅವರು ಮಾತನಾಡಿದ್ದಾರೆ. ವಜೀರಾಬಾದ್ ಮತ್ತು ಗುಜರಾತ್ ಸೈನ್ಯ ಸ್ಥಾಪನೆ ಬೆಂಬಲಿತ ಫೆಡರಲ್ ಸರ್ಕಾರದ ವಿರುದ್ಧ ಲಾಹೋರ್‌ನಿಂದ ಇಸ್ಲಾಮಾಬಾದ್‌ಗೆ ಸಾಗುವ ಮಾರ್ಗದಲ್ಲಿ ಬರುವ ಪಟ್ಟಣಗಳಾಗಿವೆ. ನನಗೆ ನಾಲ್ಕು ಗುಂಡು ತಾಗಿದೆ ಎಂದು ಖಾನ್ ತಮ್ಮ ಕಾಲಿನ ಮೇಲಿನ ಹೊಲಿಗೆಗಳನ್ನು ತೋರಿಸುತ್ತಾ, ಗಾಲಿಕುರ್ಚಿಯಲ್ಲಿ ಕುಳಿತು ಹೇಳಿದ್ದಾರೆ. ಅವರು ಆಸ್ಪತ್ರೆಯ ನೀಲಿ ಗೌನ್ ಧರಿಸಿದ್ದರು.

ಇಬ್ಬರು ಶೂಟರ್‌ಗಳಿದ್ದಾರೆ. ಪೊಲೀಸರು ಇಲ್ಲಿಯವರೆಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ ಒಬ್ಬ ವ್ಯಕ್ತಿ ಮತ್ತು ಇತರ ಇಬ್ಬರು “ಅನುಮಾನಿತರನ್ನು” ಬಂಧಿಸಿದ್ದಾರೆ. ಖಾನ್ “ಅಪಾಯದಿಂದ ಪಾರಾಗಿದ್ದಾರೆ” ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಆದರೆ ಅವರ ಬೆಂಬಲಿಗರೊಬ್ಬರು ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಪಕ್ಷದ ಮುಖಂಡರು ಸೇರಿದಂತೆ ಕನಿಷ್ಠ 13 ಜನರು ಗುರುವಾರ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಬಂಧಿತ ದಾಳಿಕೋರನು ಕ್ಯಾಮರಾದಲ್ಲಿ ಪೊಲೀಸರಲ್ಲಿ ಇಮ್ರಾನ್ ಖಾನ್ ಜನರನ್ನು ದಾರಿತಪ್ಪಿಸುತ್ತಾನೆ ಮತ್ತು ಇಸ್ಲಾಂನ ಸಿದ್ಧಾಂತಗಳಿಂದ ದೂರವಿಡುವುದರಿಂದ ನಾನು ಅಸಮಾಧಾನಗೊಂಡಿದ್ದೇನೆ” ಎಂದಿದ್ದಾನೆ. ಆದರೆ ಖಾನ್ ಮೂರು ನಾಯಕರನ್ನು ನಿರ್ದಿಷ್ಟವಾಗಿ ದೂಷಿಸಿದ್ದಾರೆ. ಪಿಎಂ ಶೆಹಬಾಜ್ ಷರೀಫ್, ಆಂತರಿಕ ಭದ್ರತಾ ಸಚಿವ ರಾಣಾ ಸನಾವುಲ್ಲಾ ಮತ್ತು ಗುಪ್ತಚರ ಸಂಸ್ಥೆ ISI ಯನ್ನು ಮುನ್ನಡೆಸುವ ಮೇಜರ್ ಜನರಲ್ ಫೈಸಲ್ ನಸೀರ್ ಇದರ ಹಿಂದೆ ಇದ್ದಾರೆ ಎಂದು ಇಮ್ರಾನ್ಖಾನ್ ಆರೋಪಿಸಿದ್ದಾರೆ

ಆದಾಗ್ಯೂ  ಸರ್ಕಾರ ಈ ಆರೋಪ ನಿರಾಕರಿಸಿದ್ದು ನ್ಯಾಯಯುತ ತನಿಖೆಗೆ ಭರವಸೆ ನೀಡಿದೆ.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!