AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್​ಗೆ ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಕ್ತಿಯ ಬಂಧನ

Dharmanjot Singh Kahlon: ಪಂಜಾಬ್‌ನ ಖ್ಯಾತ ಗಾಯಕ ಸಿಧು ಮೂಸೆವಾಲಾ(Sidhu Moose Wala )ಹತ್ಯೆ ಪ್ರಕರಣದಲ್ಲಿ ಇದೀಗ ವಾಂಟೆಡ್ ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಬಂಧಿಸಲಾಗಿದ್ದು, ಮೂಸೆವಾಲಾ ಹತ್ಯೆಗೆ ಆತನೇ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಿಧು ಮೂಸೆ ವಾಲಾ ಹತ್ಯೆ ಪ್ರಕರಣ: ಗ್ಯಾಂಗ್​ಸ್ಟರ್​ಗೆ ಶಸ್ತ್ರಾಸ್ತ್ರ ಪೂರೈಸಿದ್ದ ವ್ಯಕ್ತಿಯ ಬಂಧನ
ಧರ್ಮಂಜೋತ್ ಸಿಂಗ್ ಕಹ್ಲೋನ್
ನಯನಾ ರಾಜೀವ್
|

Updated on: Aug 10, 2023 | 10:26 AM

Share

ಪಂಜಾಬ್‌ನ ಖ್ಯಾತ ಗಾಯಕ ಸಿಧು ಮೂಸೆವಾಲಾ(Sidhu Moose Wala )ಹತ್ಯೆ ಪ್ರಕರಣದಲ್ಲಿ ಇದೀಗ ವಾಂಟೆಡ್ ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಬಂಧಿಸಲಾಗಿದ್ದು, ಮೂಸೆವಾಲಾ ಹತ್ಯೆಗೆ ಆತನೇ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಅಮೆರಿಕದಲ್ಲಿ ಪೊಲೀಸರು ಬಂಧಿಸಿದ್ದಾರೆ, ಅವರನ್ನು ಭಾರತಕ್ಕೆ ಕರೆತರಬಹುದು ಎಂದು ಹೇಳಲಾಗುತ್ತಿದೆ.

ಧರ್ಮಂಜೋತ್ ಸಿಂಗ್ ಕಹ್ಲೋನ್ ಎಂಬ ದೊಡ್ಡ ಶಸ್ತ್ರಾಸ್ತ್ರ ವ್ಯಾಪಾರಿಯನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ, ಈತ ಗ್ಯಾಂಗ್​ಸ್ಟರ್ ​​ಲಾರೆನ್ಸ್ ಬಿಷ್ಣೋಯ್ ಅವರಿಗೆ ತುಂಬಾ ನಿಕಟವಾಗಿದ್ದ ಎಂದು ಹೇಳಲಾಗಿದೆ. ಆತನ ಸೂಚನೆಯ ಮೇರೆಗೆ ಮೂಸೇವಾಲ ಅವರನ್ನು ಹತ್ಯೆ ಮಾಡಲಾಗಿತ್ತು. ಲಾರೆನ್ಸ್ ಬಿಷ್ಣೋಯ್ ಕಳೆದ ಹಲವಾರು ವರ್ಷಗಳಿಂದ ಜೈಲಿನಲ್ಲಿದ್ದ, ಅಲ್ಲಿಂದ ಅವರು ತಮ್ಮ ಗ್ಯಾಂಗ್‌ನೊಂದಿಗೆ ಸಂಪರ್ಕದಲ್ಲಿದ್ದ.

ಮತ್ತಷ್ಟು ಓದಿ: ಸಿಧು ಮೂಸೆ ವಾಲಾ ಹತ್ಯೆ ಪ್ರಕರಣದ ಆರೋಪಿ ಸಚಿನ್ ಬಿಷ್ಣೋಯಿ ಅಜರ್‌ಬೈಜಾನ್‌ನಿಂದ ಭಾರತಕ್ಕೆ ಹಸ್ತಾಂತರ

ಅಮೆರಿಕದಲ್ಲಿ ಬಂಧನಕ್ಕೊಳಗಾಗಿರುವ ಶಸ್ತ್ರಾಸ್ತ್ರ ವ್ಯಾಪಾರಿ ಕಹ್ಲೋನ್, ಸಿಧು ಮುಸೆವಾಲಾ ಅವರನ್ನು ಕೊಂದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದ. ಶೀಘ್ರದಲ್ಲೇ ಭಾರತೀಯ ಏಜೆನ್ಸಿಗಳು ಎಫ್‌ಬಿಐ ಅನ್ನು ಸಂಪರ್ಕಿಸಲಿವೆ ಎಂದು ಹೇಳಲಾಗುತ್ತಿದೆ, ನಂತರ ಕಹ್ಲೋನ್ ಅನ್ನು ಭಾರತಕ್ಕೆ ಕರೆತರಲು ಸಿದ್ಧತೆಗಳು ಪ್ರಾರಂಭವಾಗುತ್ತವೆ.

ಪಂಜಾಬ್‌ನ ಅಮೃತಸರದಲ್ಲಿ ವಾಸಿಸುತ್ತಿರುವ ಈ ಶಸ್ತ್ರಾಸ್ತ್ರ ವ್ಯಾಪಾರಿ ಎಕೆ-47 ರೈಫಲ್‌ಗಳು ಮತ್ತು ಇತರ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡಿದ ಆರೋಪ ಹೊತ್ತಿದ್ದಾನೆ.

ಲಾರೆನ್ಸ್ ಬಿಷ್ಣೋಯ್ ಅವರ ಸಹಚರ ಸಚಿನ್ ಬಿಷ್ಣೋಯ್ ಅವರನ್ನು ಅಜೆರ್ಬೈಜಾನ್‌ನಿಂದ ಭಾರತಕ್ಕೆ ಕರೆತರಲಾಯಿತು.  ಸಚಿನ್ ಕೂಡ ಬಿಷ್ಣೋಯ್ ಗ್ಯಾಂಗ್‌ನ ಗ್ಯಾಂಗ್​ಸ್ಟರ್ ಆಗಿದ್ದ, ಇವರ ಹಸ್ತಾಂತರಕ್ಕಾಗಿ ದೀರ್ಘಕಾಲ ಪ್ರಯತ್ನಿಸಲಾಯಿತು. ಇದೇ ಸಚಿನ್ ಬಿಷ್ಣೋಯ್ ಅಮೆರಿಕದಲ್ಲಿ ಡೀಲರ್ ಹೇಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಎಂಬುದನ್ನು ಏಜೆನ್ಸಿಗಳಿಗೆ ತಿಳಿಸಿದ್ದರು.

ಈತ ಲಾರೆನ್ಸ್ ಬಿಷ್ಣೋಯ್ ಮತ್ತು ಬಾಂಬಿಹಾ ಗ್ಯಾಂಗ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಎಂದು ಹೇಳಿದ್ದಾನೆ. ಸಚಿನ್ ಬಿಷ್ಣೋಯ್ ಲಾರೆನ್ಸ್ ಬಿಷ್ಣೋಯ್ ಅವರ ಸೋದರಸಂಬಂಧಿ.

ಕಳೆದ ವರ್ಷ ಮೇ 29 ರಂದು ಪಂಜಾಬ್‌ನ ಮಾನ್ಸಾದಲ್ಲಿ 28 ವರ್ಷದ ಗಾಯಕ ಮತ್ತು ಯುವ ನಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ಒಂದು ದಿನದ ಮೊದಲು ಅವರ ಭದ್ರತೆಯನ್ನು ತೆಗೆದುಹಾಕಲಾಗಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್