ಗಡ್ಡ ಇರುವ ವೈದ್ಯರು ಕೊರೊನಾಗೆ ಚಿಕಿತ್ಸೆ ನೀಡುವಂತಿಲ್ಲ, ಸಿಖ್ ವೈದ್ಯರ ಆಕ್ರೋಶ

ಲಂಡನ್​: ಗಡ್ಡ ಇರುವ ವೈದ್ಯರು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಂತಿಲ್ಲ. ಫಿಟ್ ಟೆಸ್ಟ್​ನಲ್ಲಿ ಪಾಸಾಗದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಬರದಂತೆ ಸರ್ಕಾರ ಸೂಚನೆ ನೀಡಿದೆ. ಹಾಗಾಗಿ ಇಂಗ್ಲೆಂಡ್​ನಲ್ಲಿರುವ ಸಿಖ್ ಸಮುದಾಯದ ವೈದ್ಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಡ್ಡ ಇರುವುದರಿಂದ ಫೇಸ್ ಮಾಸ್ಕ್ ಫಿಟ್ ಆಗಲ್ಲ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಆದ್ರೆ ಗಡ್ಡ ತೆಗೆಯಲು ಐವರು ಸಿಖ್ ವೈದ್ಯರು ನಿರಾಕರಿಸಿದ್ದಾರೆ. ಹಾಗಾಗಿ ಕರ್ತವ್ಯಕ್ಕೆ ಬರದಂತೆ ವೈದ್ಯರಿಗೆ ಸರ್ಕಾರ ಸೂಚನೆ ನೀಡಿದೆ. ಸರ್ಕಾರದ ನಿರ್ಧಾರಕ್ಕೆ ಸಿಖ್ […]

ಗಡ್ಡ ಇರುವ ವೈದ್ಯರು ಕೊರೊನಾಗೆ ಚಿಕಿತ್ಸೆ ನೀಡುವಂತಿಲ್ಲ, ಸಿಖ್ ವೈದ್ಯರ ಆಕ್ರೋಶ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​

Updated on: May 06, 2020 | 3:54 PM

ಲಂಡನ್​: ಗಡ್ಡ ಇರುವ ವೈದ್ಯರು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವಂತಿಲ್ಲ. ಫಿಟ್ ಟೆಸ್ಟ್​ನಲ್ಲಿ ಪಾಸಾಗದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಬರದಂತೆ ಸರ್ಕಾರ ಸೂಚನೆ ನೀಡಿದೆ. ಹಾಗಾಗಿ ಇಂಗ್ಲೆಂಡ್​ನಲ್ಲಿರುವ ಸಿಖ್ ಸಮುದಾಯದ ವೈದ್ಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಡ್ಡ ಇರುವುದರಿಂದ ಫೇಸ್ ಮಾಸ್ಕ್ ಫಿಟ್ ಆಗಲ್ಲ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಆದ್ರೆ ಗಡ್ಡ ತೆಗೆಯಲು ಐವರು ಸಿಖ್ ವೈದ್ಯರು ನಿರಾಕರಿಸಿದ್ದಾರೆ. ಹಾಗಾಗಿ ಕರ್ತವ್ಯಕ್ಕೆ ಬರದಂತೆ ವೈದ್ಯರಿಗೆ ಸರ್ಕಾರ ಸೂಚನೆ ನೀಡಿದೆ.

ಸರ್ಕಾರದ ನಿರ್ಧಾರಕ್ಕೆ ಸಿಖ್ ವೈದ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಗಡ್ಡಕ್ಕೆ ಅನುಗುಣವಾಗಿ ಪಿಪಿಇ ಕಿಟ್ ತಯಾರಿಸುವಂತೆ ಆಗ್ರಹಿಸಿದ್ದಾರೆ.

Published On - 3:12 pm, Wed, 6 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us