AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾದಲ್ಲಿ ಭಾರತದ ರಾಷ್ಟ್ರಧ್ವಜ ಸುಟ್ಟು, ಮೋದಿ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಸಿಖ್ಖರ ಪ್ರತಿಭಟನೆ

Hardeep Singh Nijjar: ಕೆನಡಾದ ಸಿಖ್ಖರು ಒಟ್ಟಾವಾ, ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿ ಮುಂದೆ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಪ್ರತಿಭಟನೆ ವೇಳೆ ಭಾರತದ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದ್ದು, ಪ್ರಧಾನಿ ಮೋದಿ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ.

ಕೆನಡಾದಲ್ಲಿ ಭಾರತದ ರಾಷ್ಟ್ರಧ್ವಜ ಸುಟ್ಟು, ಮೋದಿ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಸಿಖ್ಖರ ಪ್ರತಿಭಟನೆ
ಕೆನಡಾದಲ್ಲಿ ಭಾರತದ ವಿರುದ್ಧ ಸಿಖ್ಖ್​​ ಪ್ರತಿಭಟನೆ
ಅಕ್ಷಯ್​ ಪಲ್ಲಮಜಲು​​
|

Updated on: Sep 26, 2023 | 12:54 PM

Share

ಖಾಲಿಸ್ತಾನ್  (Khalistan) ಉಗ್ರನ ಹತ್ಯೆ ನಂತರ ಕೆನಡಾ ಮತ್ತು ಭಾರತದ ನಡುವೆ ಮುಸುಕಿನ ಗುದ್ದಾಟ ಮುಂದುವರಿದೆ. ಇದೀಗ ಈ ಕೆನಡಾದ ಸಿಖ್ಖರು ಒಟ್ಟಾವಾ, ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಜತಾಂತ್ರಿಕ ಕಚೇರಿ ಮುಂದೆ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಪ್ರತಿಭಟನೆ ವೇಳೆ ಭಾರತದ ರಾಷ್ಟ್ರಧ್ವಜವನ್ನು ಸುಟ್ಟು ಹಾಕಿದ್ದು, ಪ್ರಧಾನಿ ಮೋದಿ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಟೊರೊಂಟೊದಲ್ಲಿ ಸುಮಾರು 100 ಜನ ಹಾಗೂ ವ್ಯಾಂಕೋವರ್‌ನಲ್ಲಿ ಸುಮಾರು 200 ಪ್ರತಿಭಟನಾಕಾರರು ಭಾಗವಹಿಸಿದ್ದರು ಎಂದು ವರದಿ ಹೇಳಿದೆ. ಇಂದು ಬೆಳಿಗ್ಗೆ ಟೊರೊಂಟೊದಲ್ಲಿರುವ ಭಾರತೀಯ ಹೈಕಮಿಷನರ್ ಕಚೇರಿಯ ಮುಂದೆ ಪ್ರತಿಭಟನೆ ಮಾಡಲು ಶುರು ಮಾಡಿದ್ದಾರೆ. ಈ ಸಮಯದಲ್ಲಿ , “ಖಾಲಿಸ್ತಾನ್” ಧ್ವಜಗಳನ್ನು ಹಾರಿಸಿದ್ದಾರೆ. ಇದು ಭಾರತದಲ್ಲಿರುವ ಸಿಖ್ಖರಿಗೆ ಪ್ರತ್ಯೇಕ ರಾಜ್ಯದ ನೀಡುವ ಹೋರಾಟಕ್ಕೆ ಬೆಂಬಲದ ಸಂಕೇತವಾಗಿದೆ ಎಂದು ಹೇಳಲಾಗಿದೆ.

ಈ ಪ್ರತಿಭಟನೆ ಸಮಯದಲ್ಲಿ ಖಾಲಿಸ್ತಾನಿಗಳ ಪರವಾಗಿ ನಿಂತ ಕೆನಡಾದ ಪ್ರಧಾನಿ ಜಸ್ಟಿನ್​​ ಟ್ರುಡೊ ಅವರಿಗೆ ಧನ್ಯವಾದ ತಿಳಿಸಿದರು. ಇನ್ನು ಹತ್ಯೆ ಆಗಿರುವ ಖಾಲಿಸ್ತಾನಿಗಳಿಗೆ ನ್ಯಾಯ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದರಲ್ಲಿ ಒಬ್ಬ ಪ್ರತಿಭಟನಕಾರ ಕೆನಡಾದ ಪ್ರಧಾನಿ ಜಸ್ಟಿನ್​​ ಟ್ರುಡೊ ಅವರಿಗೆ ಕೃತಜ್ಞರಾಗಿರುತ್ತೇವೆ. ಇಂತಹ ಹೇಡಿತನದ ಕೃತ್ಯಕ್ಕೆ ಸರಿಯಾದ ಉತ್ತರ ನೀಡಬೇಕು ಎಂದು ಹೇಳಿದ್ದಾರೆ.

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆ ನಂತರ ಕೆನಡಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ಸಂಬಂಧದಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಸಾವಿಗೆ ಭಾರತವೇ ಕಾರಣ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ. ಆದರೆ ಭಾರತ ಇದು ಆಧಾರ ರಹಿತ ಆರೋಪ ಎಂದು ಹೇಳಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಸರ್ಕಾರ ಗುಪ್ತಚರ ಸಂಸ್ಥೆ ಮೂಲಕ ತನಿಖೆಯನ್ನು ನಡೆಸುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಭಾರತ-ಕೆನಡಾ ಸಂಬಂಧದಲ್ಲಿ ಬಿರುಕು; ಮಸೂರ್ ಬೇಳೆ ವ್ಯಾಪಾರಿಗಳಿಗೆ ಆತಂಕ

ಉಭಯ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯಿಂದ, ಎರಡು ರಾಷ್ಟ್ರಗಳ ವ್ಯಾಪರ ವಹಿವಾಟುಗಳ ಮೇಲೆ ಪರಿಣಾಮ ಉಂಟು ಮಾಡಿದೆ. ಇನ್ನು ಎರಡು ರಾಷ್ಟ್ರಗಳ ಹಿರಿಯ ರಾಜತಾಂತ್ರಿಕರನ್ನು ವಾಪಸ್ಸು ಕರೆಸಿಕೊಂಡಿದೆ, ಇದರ ಜತೆಗೆ ಕೆನಡಿಯನ್ನರಿಗೆ ವೀಸಾಗಳನ್ನು ಭಾರತವು ತಾತ್ಕಾಲಿಕವಾಗಿ ಅಮಾನತುಗೊಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಉತ್ತರ ನೀಡಬೇಕು ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಹೇಳಿದ್ದಾರೆ. ಆದರೆ ಭಾರತ ಜಸ್ಟಿನ್ ಟ್ರುಡೊ ಅವರದ್ದು “ಅಸಂಬದ್ಧ” ಹೇಳಿಕೆ ಎಂದು ಹೇಳಿದೆ. ಕೆನಡಾದಲ್ಲಿ ಭಾರತ ವಿರೋಧಿ ಚಟುವಟಿಕೆಗಳು ನಡೆಯುತ್ತಿದೆ ಎಂದು ಹೇಳಿದೆ. ನಾವು ಯಾವುದೇ ತನಿಖೆಗೂ ತಯಾರಾಗಿದ್ದೇವೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ