AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ. 26ರಿಂದ ಭಾರತ, ಪಾಕಿಸ್ತಾನ ಸೇರಿ 6 ದೇಶಗಳ ಪ್ರಯಾಣಿಕರ ಪ್ರವೇಶಕ್ಕೆ ಸಿಂಗಾಪುರ ಅನುಮತಿ

Singapore Flight: ಭಾರತ, ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶ ಸೇರಿದಂತೆ ದಕ್ಷಿಣ ಏಷ್ಯಾದ ದೇಶಗಳಿಗೆ ಪ್ರಯಾಣವನ್ನು ಪುನರಾರಂಭಿಸುವುದಾಗಿ ಸಿಂಗಾಪುರ ಇಂದು ಘೋಷಿಸಿದೆ.

ಅ. 26ರಿಂದ ಭಾರತ, ಪಾಕಿಸ್ತಾನ ಸೇರಿ 6 ದೇಶಗಳ ಪ್ರಯಾಣಿಕರ ಪ್ರವೇಶಕ್ಕೆ ಸಿಂಗಾಪುರ ಅನುಮತಿ
ಸಿಂಗಾಪುರ ವಿಮಾನ
TV9 Web
| Edited By: |

Updated on:Oct 23, 2021 | 6:20 PM

Share

ನವದೆಹಲಿ: ಕೊವಿಡ್ ಹಿನ್ನೆಲೆಯಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಮಯನ್ಮಾರ್, ನೇಪಾಳ, ಶ್ರೀಲಂಕಾ ದೇಶಗಳ ವಿಮಾನ ಪ್ರಯಾಣಿಕರಿಗೆ ಹೇರಿದ್ದ ನಿಷೇಧವನ್ನು ಸಿಂಗಾಪುರ್ ರದ್ದುಪಡಿಸಿದೆ. ಹೀಗಾಗಿ, ಇನ್ನು ಮುಂದೆ ಭಾರತದ ಪ್ರಯಾಣಿಕರು ಸಿಂಗಾಪುರಕ್ಕೆ ಪ್ರಯಾಣಿಸಲು ಯಾವುದೇ ತೊಂದರೆಯಿಲ್ಲ. ಆದರೆ, ನಿಷೇಧ ತೆರವಾಗಿರುವ ದೇಶಗಳ ಪ್ರಯಾಣಿಕರು ಸಿಂಗಾಪುರದ ವಿಮಾನ ನಿಲ್ದಾಣದಲ್ಲಿ ಕೊವಿಡ್ ನೆಗೆಟಿವ್ ವರದಿ ನೀಡುವುದು ಹಾಗೂ ಸಿಂಗಾಪುರದಲ್ಲಿ ಕ್ವಾರಂಟೈನ್ ಆಗುವುದು ಕಡ್ಡಾಯವಾಗಿದೆ.

ಸಿಂಗಾಪುರ ಇಂದು ಭಾರತ, ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶ ಸೇರಿದಂತೆ ದಕ್ಷಿಣ ಏಷ್ಯಾದ ದೇಶಗಳಿಗೆ ಪ್ರಯಾಣವನ್ನು ಪುನರಾರಂಭಿಸುವುದಾಗಿ ಘೋಷಿಸಿದೆ. ಕಳೆದ 14 ದಿನಗಳಲ್ಲಿ ಭಾರತ, ಬಾಂಗ್ಲಾದೇಶ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾಕ್ಕೆ ತೆರಳಿರುವ ಟ್ರಾವೆಲ್ ಹಿಸ್ಟರಿಯನ್ನು ಹೊಂದಿರುವವರಿಗೆ ಕೂಡ ಅಕ್ಟೋಬರ್ 26ರಿಂದ ಸಿಂಗಾಪುರವನ್ನು ಪ್ರವೇಶಿಸಲು ಹಾಗೂ ಸಿಂಗಾಪುರದ ಮೂಲಕ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ANI ವರದಿ ಮಾಡಿದೆ.

ಕೊರೊನಾ ಅಬ್ಬರ ಹೆಚ್ಚಾಗಿದ್ದರಿಂದ ಈ 6 ದೇಶಗಳ ಪ್ರಯಾಣಿಕರಿಗೆ ಸಿಂಗಾಪುರದಲ್ಲಿ ನಿಷೇಧ ಹೇರಲಾಗಿತ್ತು. ಇದೀಗ ನಿಷೇಧವನ್ನು ತೆರವುಗೊಳಿಸಲಾಗಿದ್ದರೂ ಈ ದೇಶಗಳಿಂದ ಬರುವ ಪ್ರಯಾಣಿಕರು 10 ದಿನಗಳ ಹೋಂ ಕ್ವಾರಂಟೈನ್ ಆಗಬೇಕಾದುದು ಕಡ್ಡಾಯ ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಿಂಗಾಪುರವು ಇನ್ನೂ 15 ದೇಶಗಳಿಂದ ಸಂಪೂರ್ಣವಾಗಿ ಲಸಿಕೆ ಹಾಕಿದ ಪ್ರಯಾಣಿಕರಿಗೆ ಕ್ವಾರಂಟೈನ್ ಮಾಡದೇ ಹಾಗೇ ದೇಶದೊಳಗೆ ಪ್ರವೇಶಿಸಲು ಅನುಮತಿ ನೀಡಲು ಯೋಜಿಸುತ್ತಿದೆ. ಅವುಗಳಲ್ಲಿ ಇಂಡೋನೇಷ್ಯಾ, ಮಲೇಷ್ಯಾ, ವಿಯೆಟ್ನಾಂ ಮತ್ತು ಯುಎಇ ಕೂಡ ಸೇರಿವೆ.

ಇದನ್ನೂ ಓದಿ: China Covid Cases: ಚೀನಾದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಹೆಚ್ಚಳ; ವಿಮಾನ ಸಂಚಾರ ಸ್ಥಗಿತ, ಶಾಲೆಗಳು ಬಂದ್

International Flights: ಭಾರತದಲ್ಲಿ ಅ. 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿಷೇಧ

Published On - 6:19 pm, Sat, 23 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ