AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ. 26ರಿಂದ ಭಾರತ, ಪಾಕಿಸ್ತಾನ ಸೇರಿ 6 ದೇಶಗಳ ಪ್ರಯಾಣಿಕರ ಪ್ರವೇಶಕ್ಕೆ ಸಿಂಗಾಪುರ ಅನುಮತಿ

Singapore Flight: ಭಾರತ, ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶ ಸೇರಿದಂತೆ ದಕ್ಷಿಣ ಏಷ್ಯಾದ ದೇಶಗಳಿಗೆ ಪ್ರಯಾಣವನ್ನು ಪುನರಾರಂಭಿಸುವುದಾಗಿ ಸಿಂಗಾಪುರ ಇಂದು ಘೋಷಿಸಿದೆ.

ಅ. 26ರಿಂದ ಭಾರತ, ಪಾಕಿಸ್ತಾನ ಸೇರಿ 6 ದೇಶಗಳ ಪ್ರಯಾಣಿಕರ ಪ್ರವೇಶಕ್ಕೆ ಸಿಂಗಾಪುರ ಅನುಮತಿ
ಸಿಂಗಾಪುರ ವಿಮಾನ
TV9 Web
| Edited By: |

Updated on:Oct 23, 2021 | 6:20 PM

Share

ನವದೆಹಲಿ: ಕೊವಿಡ್ ಹಿನ್ನೆಲೆಯಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಮಯನ್ಮಾರ್, ನೇಪಾಳ, ಶ್ರೀಲಂಕಾ ದೇಶಗಳ ವಿಮಾನ ಪ್ರಯಾಣಿಕರಿಗೆ ಹೇರಿದ್ದ ನಿಷೇಧವನ್ನು ಸಿಂಗಾಪುರ್ ರದ್ದುಪಡಿಸಿದೆ. ಹೀಗಾಗಿ, ಇನ್ನು ಮುಂದೆ ಭಾರತದ ಪ್ರಯಾಣಿಕರು ಸಿಂಗಾಪುರಕ್ಕೆ ಪ್ರಯಾಣಿಸಲು ಯಾವುದೇ ತೊಂದರೆಯಿಲ್ಲ. ಆದರೆ, ನಿಷೇಧ ತೆರವಾಗಿರುವ ದೇಶಗಳ ಪ್ರಯಾಣಿಕರು ಸಿಂಗಾಪುರದ ವಿಮಾನ ನಿಲ್ದಾಣದಲ್ಲಿ ಕೊವಿಡ್ ನೆಗೆಟಿವ್ ವರದಿ ನೀಡುವುದು ಹಾಗೂ ಸಿಂಗಾಪುರದಲ್ಲಿ ಕ್ವಾರಂಟೈನ್ ಆಗುವುದು ಕಡ್ಡಾಯವಾಗಿದೆ.

ಸಿಂಗಾಪುರ ಇಂದು ಭಾರತ, ಪಾಕಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶ ಸೇರಿದಂತೆ ದಕ್ಷಿಣ ಏಷ್ಯಾದ ದೇಶಗಳಿಗೆ ಪ್ರಯಾಣವನ್ನು ಪುನರಾರಂಭಿಸುವುದಾಗಿ ಘೋಷಿಸಿದೆ. ಕಳೆದ 14 ದಿನಗಳಲ್ಲಿ ಭಾರತ, ಬಾಂಗ್ಲಾದೇಶ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾಕ್ಕೆ ತೆರಳಿರುವ ಟ್ರಾವೆಲ್ ಹಿಸ್ಟರಿಯನ್ನು ಹೊಂದಿರುವವರಿಗೆ ಕೂಡ ಅಕ್ಟೋಬರ್ 26ರಿಂದ ಸಿಂಗಾಪುರವನ್ನು ಪ್ರವೇಶಿಸಲು ಹಾಗೂ ಸಿಂಗಾಪುರದ ಮೂಲಕ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ANI ವರದಿ ಮಾಡಿದೆ.

ಕೊರೊನಾ ಅಬ್ಬರ ಹೆಚ್ಚಾಗಿದ್ದರಿಂದ ಈ 6 ದೇಶಗಳ ಪ್ರಯಾಣಿಕರಿಗೆ ಸಿಂಗಾಪುರದಲ್ಲಿ ನಿಷೇಧ ಹೇರಲಾಗಿತ್ತು. ಇದೀಗ ನಿಷೇಧವನ್ನು ತೆರವುಗೊಳಿಸಲಾಗಿದ್ದರೂ ಈ ದೇಶಗಳಿಂದ ಬರುವ ಪ್ರಯಾಣಿಕರು 10 ದಿನಗಳ ಹೋಂ ಕ್ವಾರಂಟೈನ್ ಆಗಬೇಕಾದುದು ಕಡ್ಡಾಯ ಎಂದು ಸಿಂಗಾಪುರದ ಆರೋಗ್ಯ ಸಚಿವಾಲಯ ತಿಳಿಸಿದೆ.

ಸಿಂಗಾಪುರವು ಇನ್ನೂ 15 ದೇಶಗಳಿಂದ ಸಂಪೂರ್ಣವಾಗಿ ಲಸಿಕೆ ಹಾಕಿದ ಪ್ರಯಾಣಿಕರಿಗೆ ಕ್ವಾರಂಟೈನ್ ಮಾಡದೇ ಹಾಗೇ ದೇಶದೊಳಗೆ ಪ್ರವೇಶಿಸಲು ಅನುಮತಿ ನೀಡಲು ಯೋಜಿಸುತ್ತಿದೆ. ಅವುಗಳಲ್ಲಿ ಇಂಡೋನೇಷ್ಯಾ, ಮಲೇಷ್ಯಾ, ವಿಯೆಟ್ನಾಂ ಮತ್ತು ಯುಎಇ ಕೂಡ ಸೇರಿವೆ.

ಇದನ್ನೂ ಓದಿ: China Covid Cases: ಚೀನಾದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಹೆಚ್ಚಳ; ವಿಮಾನ ಸಂಚಾರ ಸ್ಥಗಿತ, ಶಾಲೆಗಳು ಬಂದ್

International Flights: ಭಾರತದಲ್ಲಿ ಅ. 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿಷೇಧ

Published On - 6:19 pm, Sat, 23 October 21

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್