AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಗಾಪುರ ಸಂಸತ್ತಿನಲ್ಲಿ ಜವಾಹರ್​ ಲಾಲ್​ ನೆಹರೂ ಉಲ್ಲೇಖ; ಭಾರತಕ್ಕೆ ಶ್ರೇಷ್ಠ ಮೌಲ್ಯಗಳ ಅಡಿಪಾಯ ಹಾಕಲಾಗಿದೆ ಎಂದ ಪ್ರಧಾನಿ ಲಿ ಸೇನ್​​​​ ಲೂಂಗ್

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ಅದನ್ನು ಗೆದ್ದ ನಾಯಕರು ಮಹಾನ್ ಧೈರ್ಯಶಾಲಿಗಳಾದ ಅಸಾಧಾರಣ ವ್ಯಕ್ತಿಗಳು. ವಿವಿಧ ದೇಶಗಳಲ್ಲಿ ಇಂಥ ಮಹಾನ್ ನಾಯಕರಿದ್ದಾರೆ ಎಂದು ಲಿ ಸೀನ್​ ಲೂಂಗ್​ ಹೇಳಿದ್ದಾರೆ.

ಸಿಂಗಾಪುರ ಸಂಸತ್ತಿನಲ್ಲಿ ಜವಾಹರ್​ ಲಾಲ್​ ನೆಹರೂ ಉಲ್ಲೇಖ; ಭಾರತಕ್ಕೆ ಶ್ರೇಷ್ಠ ಮೌಲ್ಯಗಳ ಅಡಿಪಾಯ ಹಾಕಲಾಗಿದೆ ಎಂದ ಪ್ರಧಾನಿ ಲಿ ಸೇನ್​​​​ ಲೂಂಗ್
ಸಿಂಗಾಪುರ ಪ್ರಧಾನಿ
TV9 Web
| Edited By: |

Updated on: Feb 17, 2022 | 3:33 PM

Share

ಸಿಂಗಾಪುರ ಪಾರ್ಲಿಮೆಂಟ್​​ನಲ್ಲಿ ಭಾರತದ ಪ್ರಥಮ ಪ್ರಧಾನಿ ಜವಾಹರ್​ ಲಾಲ್​ ನೆಹರೂ ಬಗ್ಗೆ ಮಾತನಾಡಲಾಗಿದೆ. ಜವಾಹರ್ ಲಾಲ್​ ನೆಹರೂ ಅವರ ಪರಂಪರೆಯನ್ನು ಉಲ್ಲೇಖಿಸಿ ಸಂಸತ್ತಿನಲ್ಲಿ ಮಾತನಾಡಿದ್ದು ಬೇರೆ ಯಾರೂ ಅಲ್ಲ, ಸಿಂಗಾಪುರದ ಪ್ರಧಾನಮಂತ್ರಿ ಲಿ ಸೇನ್​​​​ ಲೂಂಗ್(Singapore, Prime Minister Lee Hsien Loong). ಸ್ವತಂತ್ರ ಭಾರತಕ್ಕೆ ಅತ್ಯುನ್ನತ ಆದರ್ಶ ಮತ್ತು ಶ್ರೇಷ್ಠ ಮೌಲ್ಯಗಳ ಅಡಿಪಾಯ ಹಾಕಲಾಗಿದೆ ಎಂದು ಲಿ ಸೇನ್​​​​ ಲೂಂಗ್ ಹೇಳಿದ್ದಾರೆ. ಸಿಂಗಾಪುರ್​ನ ವರ್ಕರ್ಸ್ ಪಾರ್ಟಿಯ ಮಾಜಿ ಸಂಸದೆ ರಯೀಸಾ ಖಾನ್ ಅವರು ಇತ್ತೀಚೆಗೆ ತನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಸಂಸತ್ತಿನಲ್ಲಿ ಹೇಳಿದ್ದರು. ಆದರೆ ಅದು ಕಟ್ಟುಕತೆಯಾಗಿತ್ತು. ನಂತರ ಇದೇ ಎಡವಟ್ಟಿನ ಕಾರಣಕ್ಕೆ ಅವರು ರಾಜೀನಾಮೆಯನ್ನೂ ಕೊಟ್ಟಿದ್ದಾರೆ. ಆದರೆ ರಯೀಸಾ ಖಾನ್​ ಹೇಳಿಕೆಗಳನ್ನು ಪರಿಶೀಲಿಸಿ, ತನಿಖೆ ನಡೆಸುವ ಸಂಬಂಧ ಒಂದು ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿ ಫೆ.10ರಂದು ತನ್ನ ತನಿಖಾ ವರದಿ ನೀಡಿದ್ದು, ಸದ್ಯ ಸಿಂಗಾಪುರ ಸಂಸತ್ತಿನಲ್ಲಿ ಈ ವರದಿ ಮೇಲೆ ಚರ್ಚೆ ನಡೆಯುತ್ತಿದೆ. ಇದೇ ವೇಳೆ ಮಾತನಾಡಿದ ಪ್ರಧಾನಮಂತ್ರಿ  ಭಾರತ ಮತ್ತು ಅದರ ಮೊದಲ ಪ್ರಧಾನಮಂತ್ರಿ ಬಗ್ಗೆ ಉಲ್ಲೇಖಿಸಿದ್ದಾರೆ.

ಭಾರತಕ್ಕೆ ಶ್ರೇಷ್ಠ ಮೌಲ್ಯಗಳು, ಆದರ್ಶಗಳ ಅಡಿಪಾಯ ಹಾಕಲಾಗಿದೆ. ಆದರೂ ಜವಾಹರ್​ ಲಾಲ್​ ನೆಹರೂರವರ ಭಾರತದಲ್ಲಿಯೂ ಕೂಡ ಲೋಕಸಭೆಯಲ್ಲಿ ಅರ್ಧದಷ್ಟು ಸಂಸದರ ವಿರುದ್ಧ ಕ್ರಿಮಿನಲ್​ ಕೇಸ್​ಗಳು, ರೇಪ್​, ಮರ್ಡರ್​ ಕೇಸ್​​ಗಳು ಇವೆ ಎಂದು ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಆದರೆ ಅದರಲ್ಲಿ ಅನೇಕ ಕೇಸ್​ಗಳು ರಾಜಕೀಯ ಪ್ರೇರಿತವಾದದ್ದು ಎಂದೂ ಹೇಳಲಾಗಿದೆ ಎಂದು ಪ್ರಧಾನಿ ಲೂಂಗ್​ ಹೇಳಿದ್ದಾರೆ.  ಅಷ್ಟೇ ಅಲ್ಲ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ಅದನ್ನು ಗೆದ್ದ ನಾಯಕರು ಮಹಾನ್ ಧೈರ್ಯಶಾಲಿಗಳಾದ ಅಸಾಧಾರಣ ವ್ಯಕ್ತಿಗಳು. ವಿವಿಧ ದೇಶಗಳಲ್ಲಿ ಇಂಥ ಮಹಾನ್ ನಾಯಕರಿದ್ದಾರೆ. ಡೇವಿಡ್​ ಬೆನ್​ ಗುರಿಯನ್ಸ್ ಇರಬಹುದು, ಜವಾಹರ್​ ಲಾಲ್​ ನೆಹರೂ ಇರಬಹುದು. ಹಾಗೇ, ನಮ್ಮ ದೇಶದಲ್ಲೂ ಇದ್ದಾರೆ ಎಂದು ಪ್ರಧಾನಿ ಹೇಳಿದರು. ಈ ಮೂಲಕ ರಾಜಕಾರಣಿಗಳಿಗೆ ಇರಬೇಕಾದ ಮೌಲ್ಯಗಳ ಬಗ್ಗೆ ಮಾತನಾಡಿದರು.

ಇದನ್ನೂ ಓದಿ:Redmi Smart TV X43: ಧೂಳೆಬ್ಬಿಸುತ್ತಿದೆ ನಂಬರ್ ಒನ್ ಸ್ಮಾರ್ಟ್​ ಟಿವಿ ಬ್ರ್ಯಾಂಡ್​ ಶವೋಮಿಯ ರೆಡ್ಮಿ ಸ್ಮಾರ್ಟ್‌ ಟಿವಿ X43: ಇದರ ಬೆಲೆ ಕೇವಲ …

Follow Us
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು