AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ನಿರೋಧಕ ಶಕ್ತಿ ಪತ್ತೆ; ಅಚ್ಚರಿಗೆ ಕಾರಣವಾಯ್ತು ಹೊಸ ಸಂಶೋಧನೆ

ಹೆರಿಗೆಗೆ ಹತ್ತಿರದ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾದ ಸ್ತ್ರೀಯರಿಗೆ ಜನಿಸಿದ ಮಗುವಿನಲ್ಲಿ ರೋಗ ನಿರೋಧಕ ಅಂಶ ಅಧಿಕವಾಗಿರುವುದು ತಿಳಿದುಬಂದಿದೆ. ಒಂದು ವೇಳೆ ಇನ್ನುಮುಂದೆ ಹುಟ್ಟುವ ಮಕ್ಕಳಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ಶಕ್ತಿ ತನ್ನಿಂತಾನೇ ಅಭಿವೃದ್ಧಿಯಾದರೆ ಅದು ವೈಜ್ಞಾನಿಕವಾಗಿ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ.

ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ನಿರೋಧಕ ಶಕ್ತಿ ಪತ್ತೆ; ಅಚ್ಚರಿಗೆ ಕಾರಣವಾಯ್ತು ಹೊಸ ಸಂಶೋಧನೆ
ಕೊರೊನಾದ ಕುಲಾಂತರಿ ತಳಿ
Skanda
| Edited By: |

Updated on: Dec 18, 2020 | 3:48 PM

Share

ಸಿಂಗಾಪುರ: ಕೊವಿಡ್​​ಗೆ ತುತ್ತಾದ ಗರ್ಭಿಣಿಯರಿಗೆ ಜನಿಸುವ ಮಕ್ಕಳಲ್ಲಿ ಕೊವಿಡ್​ ವಿರುದ್ಧದ ರೋಗ ನಿರೋಧಕ ಶಕ್ತಿ ಅಭಿವೃದ್ಧಿಯಾಗಿರುತ್ತದೆ ಎಂದು ಸಿಂಗಾಪುರದ ತಜ್ಞರು ನಡೆಸಿದ ಸಂಶೋಧನೆಯೊಂದು ವರದಿಮಾಡಿದೆ. ಸಂಶೋಧನೆಗೆ ಒಳಪಡಿಸಿದ ಒಟ್ಟು 16 ಕೊರೊನಾ ಸೋಂಕಿತ ಗರ್ಭಿಣಿಯರ ಪೈಕಿ 5 ಜನರಿಗೆ ಹೆರಿಗೆಯಾಗಿದ್ದು ಎಲ್ಲಾ 5 ನವಜಾತ ಶಿಶುಗಳಲ್ಲೂ ರೋಗ ನಿರೋಧಕ ಶಕ್ತಿ ಪತ್ತೆಯಾಗಿರುವುದು ತಜ್ಞರಲ್ಲಿ ಅಚ್ಚರಿ ಮೂಡಿಸಿದೆ.

ಸಿಂಗಾಪುರದ ಪ್ರಸೂತಿ ಮತ್ತು ಸ್ತ್ರೀರೋಗ ಅಧ್ಯಯನ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ. ಸದ್ಯ ನವಜಾತ ಶಿಶುಗಳಲ್ಲಿ ರೋಗ ನಿರೋಧಕ ಶಕ್ತಿ ಎಷ್ಟು ಕಾಲ ಉಳಿಯಲಿದೆ ಎನ್ನುವುದು ಖಚಿತವಾಗಿಲ್ಲ. ಹೆರಿಗೆಗೆ ಹತ್ತಿರದ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾದ ಸ್ತ್ರೀಯರಿಗೆ ಜನಿಸಿದ ಮಗುವಿನಲ್ಲಿ ರೋಗ ನಿರೋಧಕ ಅಂಶ ಅಧಿಕವಾಗಿರುವುದು ತಿಳಿದುಬಂದಿದೆ.

ಒಂದು ವೇಳೆ ಇನ್ನುಮುಂದೆ ಹುಟ್ಟುವ ಮಕ್ಕಳಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ಶಕ್ತಿ ತನ್ನಿಂತಾನೇ ಅಭಿವೃದ್ಧಿಯಾದರೆ ಅದು ವೈಜ್ಞಾನಿಕವಾಗಿ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ. ಜೊತೆಗೆ, ಮುಂದಿನ ಪೀಳಿಗೆಗೆ ಕೊರೊನಾ ವೈರಾಣು ವರ್ಗವಾಗುವುದನ್ನು ಅತ್ಯಂತ ಸಹಜವಾಗಿ ತಡೆಗಟ್ಟುವುದು ಸಹ ಸಾಧ್ಯವಾಗಲಿದೆ.

ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರ ಮಾನಸಿಕ ಆರೋಗ್ಯಕ್ಕೆ ಪೆಟ್ಟು ಕೊಟ್ಟ ಕೊರೊನಾ

Follow Us
Skanda
Skanda
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ