AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ನಿರೋಧಕ ಶಕ್ತಿ ಪತ್ತೆ; ಅಚ್ಚರಿಗೆ ಕಾರಣವಾಯ್ತು ಹೊಸ ಸಂಶೋಧನೆ

ಹೆರಿಗೆಗೆ ಹತ್ತಿರದ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾದ ಸ್ತ್ರೀಯರಿಗೆ ಜನಿಸಿದ ಮಗುವಿನಲ್ಲಿ ರೋಗ ನಿರೋಧಕ ಅಂಶ ಅಧಿಕವಾಗಿರುವುದು ತಿಳಿದುಬಂದಿದೆ. ಒಂದು ವೇಳೆ ಇನ್ನುಮುಂದೆ ಹುಟ್ಟುವ ಮಕ್ಕಳಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ಶಕ್ತಿ ತನ್ನಿಂತಾನೇ ಅಭಿವೃದ್ಧಿಯಾದರೆ ಅದು ವೈಜ್ಞಾನಿಕವಾಗಿ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ.

ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ನಿರೋಧಕ ಶಕ್ತಿ ಪತ್ತೆ; ಅಚ್ಚರಿಗೆ ಕಾರಣವಾಯ್ತು ಹೊಸ ಸಂಶೋಧನೆ
ಕೊರೊನಾದ ಕುಲಾಂತರಿ ತಳಿ
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 18, 2020 | 3:48 PM

Share

ಸಿಂಗಾಪುರ: ಕೊವಿಡ್​​ಗೆ ತುತ್ತಾದ ಗರ್ಭಿಣಿಯರಿಗೆ ಜನಿಸುವ ಮಕ್ಕಳಲ್ಲಿ ಕೊವಿಡ್​ ವಿರುದ್ಧದ ರೋಗ ನಿರೋಧಕ ಶಕ್ತಿ ಅಭಿವೃದ್ಧಿಯಾಗಿರುತ್ತದೆ ಎಂದು ಸಿಂಗಾಪುರದ ತಜ್ಞರು ನಡೆಸಿದ ಸಂಶೋಧನೆಯೊಂದು ವರದಿಮಾಡಿದೆ. ಸಂಶೋಧನೆಗೆ ಒಳಪಡಿಸಿದ ಒಟ್ಟು 16 ಕೊರೊನಾ ಸೋಂಕಿತ ಗರ್ಭಿಣಿಯರ ಪೈಕಿ 5 ಜನರಿಗೆ ಹೆರಿಗೆಯಾಗಿದ್ದು ಎಲ್ಲಾ 5 ನವಜಾತ ಶಿಶುಗಳಲ್ಲೂ ರೋಗ ನಿರೋಧಕ ಶಕ್ತಿ ಪತ್ತೆಯಾಗಿರುವುದು ತಜ್ಞರಲ್ಲಿ ಅಚ್ಚರಿ ಮೂಡಿಸಿದೆ.

ಸಿಂಗಾಪುರದ ಪ್ರಸೂತಿ ಮತ್ತು ಸ್ತ್ರೀರೋಗ ಅಧ್ಯಯನ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ವಿಚಾರ ಬಹಿರಂಗವಾಗಿದೆ. ಸದ್ಯ ನವಜಾತ ಶಿಶುಗಳಲ್ಲಿ ರೋಗ ನಿರೋಧಕ ಶಕ್ತಿ ಎಷ್ಟು ಕಾಲ ಉಳಿಯಲಿದೆ ಎನ್ನುವುದು ಖಚಿತವಾಗಿಲ್ಲ. ಹೆರಿಗೆಗೆ ಹತ್ತಿರದ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾದ ಸ್ತ್ರೀಯರಿಗೆ ಜನಿಸಿದ ಮಗುವಿನಲ್ಲಿ ರೋಗ ನಿರೋಧಕ ಅಂಶ ಅಧಿಕವಾಗಿರುವುದು ತಿಳಿದುಬಂದಿದೆ.

ಒಂದು ವೇಳೆ ಇನ್ನುಮುಂದೆ ಹುಟ್ಟುವ ಮಕ್ಕಳಲ್ಲಿ ಕೊರೊನಾ ವೈರಾಣುವಿನ ವಿರುದ್ಧ ಹೋರಾಡುವ ಶಕ್ತಿ ತನ್ನಿಂತಾನೇ ಅಭಿವೃದ್ಧಿಯಾದರೆ ಅದು ವೈಜ್ಞಾನಿಕವಾಗಿ ಹೊಸ ಸಾಧ್ಯತೆಗಳನ್ನು ಹುಟ್ಟುಹಾಕಲಿದೆ. ಜೊತೆಗೆ, ಮುಂದಿನ ಪೀಳಿಗೆಗೆ ಕೊರೊನಾ ವೈರಾಣು ವರ್ಗವಾಗುವುದನ್ನು ಅತ್ಯಂತ ಸಹಜವಾಗಿ ತಡೆಗಟ್ಟುವುದು ಸಹ ಸಾಧ್ಯವಾಗಲಿದೆ.

ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರ ಮಾನಸಿಕ ಆರೋಗ್ಯಕ್ಕೆ ಪೆಟ್ಟು ಕೊಟ್ಟ ಕೊರೊನಾ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ