AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದ ಸಿನೋವ್ಯಾಕ್​ ಕೊರೊನಾ ಲಸಿಕೆ ಪ್ರಯೋಗಗಳಲ್ಲಿ ಮುಂಚೂಣಿಯಲ್ಲಿದ್ದ ವಿಜ್ಞಾನಿ ನೊವಿಲಿಯಾ ಸ್ಜಾಫ್ರಿ ಬಚ್ಚಿಯಾರ್ ಸಾವು

ಇಂಡೋನೇಷ್ಯಾದ ರಾಜ್ಯ ಉದ್ಯಮಗಳ ಸಚಿವ ಎರಿಕ್​ ತೋಹಿರ್​​ ಇನ್​ಸ್ಟಾಗ್ರಾಂನಲ್ಲಿ ನೊವಿಲಿಯಾ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಆದರೆ ಆಕೆಯ ಸಾವಿಗೆ ನಿಖರ ಕಾರಣವೇನೆಂದು ಅವರೂ ತಿಳಿಸಲಿಲ್ಲ.

ಚೀನಾದ ಸಿನೋವ್ಯಾಕ್​ ಕೊರೊನಾ ಲಸಿಕೆ ಪ್ರಯೋಗಗಳಲ್ಲಿ ಮುಂಚೂಣಿಯಲ್ಲಿದ್ದ ವಿಜ್ಞಾನಿ ನೊವಿಲಿಯಾ ಸ್ಜಾಫ್ರಿ ಬಚ್ಚಿಯಾರ್ ಸಾವು
ನೊವಿಲಿಯಾ ಸ್ಜಾಫ್ರಿ ಬಚ್ಚಿಯಾರ್
TV9 Web
| Edited By: |

Updated on: Jul 10, 2021 | 11:00 AM

Share

ಇಂಡೋನೇಷ್ಯಾದಲ್ಲಿ ಚೀನಾದ ಸಿನೋವ್ಯಾಕ್ ಕೊರೊನಾ ಲಸಿಕೆ ಪ್ರಯೋಗಗಳನ್ನು ನಡೆಸುತ್ತಿದ್ದ ಪ್ರಮುಖ ವಿಜ್ಞಾನಿ ಮೃತಪಟ್ಟಿದ್ದಾರೆ. ಸಿನೋವ್ಯಾಕ್​ ಕೊರೊನಾ ಲಸಿಕೆಯ ಪ್ರಯೋಗದಲ್ಲಿ ಮುಂಚೂಣಿಯಲ್ಲಿದ್ದ ನೊವಿಲಿಯಾ ಸ್ಜಾಫ್ರಿ ಬಚ್ಚಿಯಾರ್ ಶಂಕಿತ ಕೊವಿಡ್​ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಇಂಡೋನೇಷಿಯಾ ಮಾಧ್ಯಮಗಳು ವರದಿ ಮಾಡಿವೆ. ಇಂಡೋನೇಷಿಯಾದಲ್ಲಿ ಕೊರೊನಾ ವೈರಸ್​ ಉಲ್ಬಣಗೊಂಡಿದೆ. ಹಾಗೇ ಈ ದೇಶದ ಚೀನಾದ ಸಿನೋವ್ಯಾಕ್​ ಲಸಿಕೆಯನ್ನೇ ಹೆಚ್ಚಾಗಿ ಬಳಕೆ ಮಾಡಲಾಗುತ್ತಿದೆ.

ನೊವಿಲಿಯಾ ಅವರು ಮೃತಪಟ್ಟಿದ್ದು ಕೊರೊನಾ ವೈರಸ್​ನಿಂದ. ಹಾಗಾಗಿ ಅವರ ಅಂತ್ಯಕ್ರಿಯೆಯನ್ನು ಕೊವಿಡ್​ 19 ಶಿಷ್ಟಾಚಾರ ಅನುಸರಿಸಿಯೇ ಮಾಡಲಾಗಿದೆ ಎಂದು ಸಿಂಡೋನ್ಯೂಸ್​ ವರದಿ ಮಾಡಿದೆ. ಇಂಡೋನೇಷ್ಯಾದ ಲಸಿಕೆ ತಯಾರಿಕಾ ಕಂಪನಿ ಬಯೋ ಫಾರ್ಮಾ ಮೃತ ನೊವಿಲಿಯಾರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ. ಅವರನ್ನು ಕಳೆದುಕೊಂಡಿದ್ದು ಬಯೋಫಾರ್ಮ್​ಗೆ ದೊಡ್ಡ ನಷ್ಟ ಎಂದೂ ಹೇಳಿದೆ.

ಇಂಡೋನೇಷ್ಯಾದ ರಾಜ್ಯ ಉದ್ಯಮಗಳ ಸಚಿವ ಎರಿಕ್​ ತೋಹಿರ್​​ ಇನ್​ಸ್ಟಾಗ್ರಾಂನಲ್ಲಿ ನೊವಿಲಿಯಾ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಆದರೆ ಆಕೆಯ ಸಾವಿಗೆ ನಿಖರ ಕಾರಣವೇನೆಂದು ಅವರೂ ತಿಳಿಸಲಿಲ್ಲ. ಚೀನಾದ ಸಿನೋವ್ಯಾಕ್​ ಲಸಿಕೆಯನ್ನು ಇಂಡೋನೇಷ್ಯಾದಲ್ಲಿ ಬಯೋ ಫಾರ್ಮಾ ಕ್ಲಿನಿಕಲ್​ ಟ್ರಯಲ್​ ನಡೆಸುತ್ತಿದ್ದು, ಅದರ ವಿಜ್ಞಾನಿಗಳ ತಂಡವನ್ನು ನೊವಿಲಿಯಾ ಸ್ಜಾಫ್ರಿ ಬಚ್ಚಿಯಾರ್ ಮುನ್ನಡೆಸಿದ್ದರು. ಚೀನಾದ ಸಿನೋವ್ಯಾಕ್​ ಲಸಿಕೆಯ ದಕ್ಷತೆ ಬಗ್ಗೆ ಹಲವು ಪ್ರಶ್ನೆಗಳನ್ನೂ ಎತ್ತಿದ್ದರು. ಈಗಾಗಲೇ ಇಂಡೋನೇಷ್ಯಾದಲ್ಲಿ ಸುಮಾರು 10 ಮಿಲಿಯನ್​ ಜನರಿಗೆ ಸಿನೋವ್ಯಾಕ್​ ನೀಡಲಾಗಿದೆ.

ಇದನ್ನೂ ಓದಿ: Aamir Khan: ಸೌರವ್ ಗಂಗೂಲಿ ಮನೆಯ ಗಾರ್ಡ್​ಗಳು ಆಮೀರ್ ಖಾನ್​ರನ್ನು ಒಳ ಬಿಡದೇ ಹೊರ ಕಳಿಸಿದ ಕತೆ ನಿಮಗೆ ಗೊತ್ತಾ?

Sinovac Vaccine Scientist Novilia Sjafri Bachtiar Dies in Indonesia

Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ