AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊಹಾನ್ನೆಸ್​ಬರ್ಗ್ ನಗರದ ಒಂದೇ ಮನೆಯಲ್ಲಿ ಕೊಳೆತು ನಾರುತ್ತಿದ್ದ 6 ಮಹಿಳೆಯರ ಶವಗಳು ಪತ್ತೆ, 21ರ ಪ್ರಾಯದ ಶಂಕಿತನ ಬಂಧನ!

ಸತ್ತ ಮಹಿಳೆಯೊಂದಿಗೆ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಎಂದು ಹೇಳಲಾಗುತ್ತಿರುವ ವ್ಯಕ್ತಿಯೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬ್ರೆಂಡಾ ಮುರಿಡಿಲಿ ಹೇಳಿದ್ದಾರೆ.

ಜೊಹಾನ್ನೆಸ್​ಬರ್ಗ್ ನಗರದ ಒಂದೇ ಮನೆಯಲ್ಲಿ ಕೊಳೆತು ನಾರುತ್ತಿದ್ದ 6 ಮಹಿಳೆಯರ ಶವಗಳು ಪತ್ತೆ, 21ರ ಪ್ರಾಯದ ಶಂಕಿತನ ಬಂಧನ!
ಒಂದೇ ಮನೆಯಲ್ಲಿ 6 ಶವಗಳು ಪತ್ತೆ!
TV9 Web
| Edited By: ಅರುಣ್​ ಕುಮಾರ್​ ಬೆಳ್ಳಿ|

Updated on:Oct 10, 2022 | 5:18 PM

Share

ಜೊಹಾನ್ನೆಸ್​ಬರ್ಗ್: ನಗರದ ಮಧ್ಯಭಾಗದಲ್ಲಿರುವ ಮನೆಗಳ ಬ್ಲಾಕೊಂದರಲ್ಲಿ ಹೆಚ್ಚು ಕಡಿಮೆ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆಯರ ಆರು ಶವಗಳು ಪತ್ತೆಯಾದ ಬಳಿಕ 21-ವರ್ಷದ ವ್ಯಕ್ತಿಯೊಬ್ಬನ ವಿರುದ್ಧ 6 ಹತ್ಯೆಗಳನ್ನು ಮಾಡಿರುವ ಆರೋಪದಲ್ಲಿ ಬಂಧಿಸಲಾಗುವುದು ಎಂದ ದಕ್ಷಿಣ ಆಫ್ರಿಕ ಪೊಲೀಸ್ ಸೋಮವಾರ ಬಿಡುಗಡೆ ಮಾಡಿರುವ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಮನೆಯಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ಅದರ ಅಕ್ಕಪಕ್ಕದ ಜನ ಪೊಲೀಸರಿಗೆ ಫೋನ್ ಮಾಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಆರಕ್ಷಕರಿಗೆ ಸದರಿ ಮನೆಯಿಂದ ಕೊಳೆತು ನಾರುತ್ತಿದ್ದ ಮಹಿಳೆಯ ದೇಹವೊಂದು ಕಂಡಿದೆ ಎಂದು ಪೊಲೀಸ್ ವಕ್ತಾರೆ ಬ್ರೆಂಡಾ ಮುರಿಡಿಲಿ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಕಾಣೆಯಾದ ಮಹಿಳೆಯೊಬ್ಬಳ ಬಗ್ಗೆ ದೂರು ಸಲ್ಲಿಸಲಾಗಿತ್ತು ಮತ್ತು ಆಕೆ ಧರಿಸಿದ್ದ ಉಡುಪಿನ ಬಗ್ಗೆ ನೀಡಿರುವ ವಿವರಣೆ ಮತ್ತು ಶವದ ಮೇಲಿರುವ ಬಟ್ಟೆಗಳ ನಡುವೆ ಸಾಮ್ಯತೆ ಇದೆ ಎಂದು ಆಕೆ ಹೇಳಿದ್ದಾರೆ.

ಸತ್ತ ಮಹಿಳೆಯೊಂದಿಗೆ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಎಂದು ಹೇಳಲಾಗುತ್ತಿರುವ ವ್ಯಕ್ತಿಯೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬ್ರೆಂಡಾ ಮುರಿಡಿಲಿ ಹೇಳಿದ್ದಾರೆ.

‘ಮಹಿಳೆಯ ಶವ ದೊರೆತ ಬಳಿಕ ಪೊಲೀಸರು ಆ ಕಟ್ಟಡಕ್ಕೆ ವಾಪಸ್ಸು ಹೋಗಿ ಅದರ ಹೊರಭಾಗದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ವರ್ಕ್ ಶಾಪ್ ಮತ್ತು ಕಸವನ್ನು ಕುಪ್ಪೆ ಹಾಕಿದ್ದ ಸ್ಥಳದಲ್ಲಿ ಇನ್ನೂ 5 ಶವಗಳನ್ನು ಪತ್ತೆ ಮಾಡಿದ್ದಾರೆ,’ ಎಂದು ಬ್ರೆಂಡಾ ಮುರಿಡಿಲಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಎ ಎಫ್ ಪಿ ಸುದ್ದಿ ಸಂಸ್ಥೆಯೊಂದಿಗೂ ಮಾತಾಡಿರುವ ಮುರಿಡಿಲಿ, ಫೊರೆನ್ಸಿಕ್ ತಜ್ಞರು ದೇಹಗಳನ್ನು ಗುರುತಿಸುವ ಕಾರ್ಯದಲ್ಲಿ ತೊಡಗಿದ್ದಾರೆ, ಪೊಲೀಸರಿಗೆ ಹಲವು ಸುಳಿವುಗಳು ಸಿಕ್ಕಿವೆ ಎಂದು ಹೇಳಿದ್ದಾರೆ.

ಆ ಪ್ರದೇಶದಲ್ಲಿರುವ ಕೆಲ ವೇಶ್ಯೆಯರು ಕೆಲದಿನಗಳಿಂದ ನಾಪತ್ತೆಯಾಗಿರುವರೆಂದು ಸ್ಥಳೀಯರು ಪೊಲೀಸರಿಗೆ ನೀಡಿರುವ ಸಾಕ್ಷ್ಯದಲ್ಲಿ ತಿಳಿಸಿದ್ದಾರೆ.

ಶಂಕಿತನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.

Published On - 5:17 pm, Mon, 10 October 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ