AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೆಮೆನ್​​ನಲ್ಲಿ ಏಡೆನ್ ರಾಜ್ಯಪಾಲರನ್ನು ಗುರಿಯಾಗಿಸಿ ಬಾಂಬ್​ ದಾಳಿ; 6 ಮಂದಿ ಸಾವು

ಕಾರು ಬಾಂಬ್​ ದಾಳಿ ನಡೆದದ್ದು ಏಡೆನ್​ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು. ಆದರೆ ಅದೃಷ್ಟವಶಾತ್​ ಅವರು ಪಾರಾಗಿದ್ದಾರೆ. ಆದರೆ ರಾಜ್ಯಪಾಲರ ಮಾಧ್ಯಮ ಕಾರ್ಯದರ್ಶಿ ಮತ್ತು ಅವರ ಫೋಟೋ ಗ್ರಾಫರ್​ ಇಬ್ಬರೂ ಮೃತಪಟ್ಟಿದ್ದಾರೆ.

ಯೆಮೆನ್​​ನಲ್ಲಿ ಏಡೆನ್ ರಾಜ್ಯಪಾಲರನ್ನು ಗುರಿಯಾಗಿಸಿ ಬಾಂಬ್​ ದಾಳಿ; 6 ಮಂದಿ ಸಾವು
ಕಾರು ಬಾಂಬ್​ ದಾಳಿ ನಡೆದ ಚಿತ್ರಣ
TV9 Web
| Edited By: |

Updated on: Oct 11, 2021 | 4:52 PM

Share

ಏಡೆನ್​: ಯೆಮೆನ್​​ನ ದಕ್ಷಿಣ ನಗರವಾದ ಏಡೆನ್​​ನಲ್ಲಿ ಅಲ್ಲಿನ ರಾಜ್ಯಪಾಲರ ಬೆಂಗಾವಲು ವಾಹನವನ್ನು ಗುರಿಯಾಗಿಸಿಕೊಂಡು ಕಾರ್​ ಬಾಂಬ್​ ದಾಳಿ ನಡೆದಿದ್ದು, ಈ ದುರ್ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. 7ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ಸಚಿವಾಲಯ ತಿಳಿಸಿದೆ.  ಬಾಂಬ್​ ದಾಳಿಯಲ್ಲಿ ಗವರ್ನರ್​ ಅಹ್ಮದ್​ ಲಾಮ್ಲಾಸ್​ ಮತ್ತು ಕೃಷಿ ಸಚಿ ಸೇಲಂ ಸುಖಾತ್ರಿ ಇಬ್ಬರೂ ಪಾರಾಗಿದ್ದಾರೆ. ಇವರಿಬ್ಬರೂ ದಕ್ಷಿಣ ಪ್ರತ್ಯೇಕತಾ ಗುಂಪಿಗೆ ಸೇರಿದವರಾಗಿದ್ದು, ಸದ್ಯದ ಭಯೋತ್ಪಾದನಾ ದಾಳಿಯಿಂದ ಇಬ್ಬರೂ ಪಾರಾಗಿದ್ದಾರೆ ಎಂದು ಹೇಳಿದೆ.  

ಕಾರು ಬಾಂಬ್​ ದಾಳಿ ನಡೆದದ್ದು ಏಡೆನ್​ ರಾಜ್ಯಪಾಲರನ್ನು ಗುರಿಯಾಗಿಸಿಕೊಂಡು. ಆದರೆ ಅದೃಷ್ಟವಶಾತ್​ ಅವರು ಪಾರಾಗಿದ್ದಾರೆ. ಆದರೆ ರಾಜ್ಯಪಾಲರ ಮಾಧ್ಯಮ ಕಾರ್ಯದರ್ಶಿ ಮತ್ತು ಅವರ ಫೋಟೋ ಗ್ರಾಫರ್​ ಇಬ್ಬರೂ ಮೃತಪಟ್ಟಿದ್ದಾರೆ. ಇನ್ನುಳಿದಂತೆ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಘಟನೆ ನಡೆದ ಸ್ಥಳದ ಆಡಳಿತ ತಿಳಿಸಿದೆ.  ಯೆಮೆನ್​ ಕೇಂದ್ರ ಸರ್ಕಾರ 2014ರಲ್ಲಿ ರಾಜಧಾನಿ ಸನಾದಿಂದ ಏಡೆನ್​​ಗೆ ಸ್ಥಳಾಂತರಗೊಂಡಿದೆ. ಅಂದಿನಿಂದಲೂ ಸೌದಿ ಬೆಂಬಲಿತ ಯೆಮೆನ್​ ಸರ್ಕಾರದ ವಿರುದ್ಧ ಇರಾನ್​ ಬೆಂಬಲಿತ ಹುತಿ ಬಂಡುಕೋರರು ಹೋರಾಟೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ನಾಪತ್ತೆ ಆಗಿರುವ 4 ಮಕ್ಕಳು ಮಂಗಳೂರಿನತ್ತ ಪ್ರಯಾಣಿಸಿರುವ ಶಂಕೆ; ಏನೇನು ತರಬೇಕು ಎಂದು ಮಾಡಿದ್ದ ಪಟ್ಟಿ ಲಭ್ಯ

ಅಂತರಿಕ್ಷಯಾನಿ ಬ್ಯಾಹ್ಯಾಕಾಶದಲ್ಲಿ ಸತ್ತರೆ ಮೃತದೇಹ ಭೂಮಿಗೆ ತರಲಾಗದು, ಅದು ಅಲ್ಲೇ ತೇಲಾಡುತ್ತಿರುತ್ತದೆ!

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ