Australia: ವಿಮಾನದಲ್ಲಿ ಪ್ರಯಾಣಿಕರ ಹೊಡೆದಾಟ ಬೇರೆ ದಾರಿ ತೋಚದೆ ತುರ್ತು ಭೂಸ್ಪರ್ಶ

ವಿಮಾನದಲ್ಲಿ ನಾಲ್ವರು ಪ್ರಯಾಣಿಕರ ಜಗಳ ತಾರಕ್ಕೇರಿದ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.

Australia: ವಿಮಾನದಲ್ಲಿ ಪ್ರಯಾಣಿಕರ  ಹೊಡೆದಾಟ ಬೇರೆ ದಾರಿ ತೋಚದೆ ತುರ್ತು ಭೂಸ್ಪರ್ಶ
ವಿಮಾನ
Follow us
|

Updated on:Apr 27, 2023 | 9:51 AM

ವಿಮಾನದಲ್ಲಿ ನಾಲ್ವರು ಪ್ರಯಾಣಿಕರ ಜಗಳ ತಾರಕ್ಕೇರಿದ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಿರುವ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ. ಈ ಕುರಿತು News.com.au ವರದಿ ಮಾಡಿದೆ, ಏಪ್ರಿಲ್ 20ರಂದು ಈ ಘಟನೆ ನಡೆದಿದೆ. ಪ್ರಯಾಣಿಕರ ಜಗಳ ವಿಪರೀತವಾದ ಕಾರಣ, ಅನಿವಾರ್ಯವಾಗಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಬೇಕಾಯಿತು, ಬಳಿಕ ವಿಮಾನ ನಿಲ್ದಾಣದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಒಬ್ಬ ಪ್ರಯಾಣಿಕ ಅವರ ತಲೆಯ ಮೇಲೆ ಗಾಜಿನ ಬಾಟಲಿಯನ್ನು ಹಿಡಿದಿರುವುದನ್ನು ಕಾಣಬಹುದು, ಇನ್ನೊಬ್ಬ ಪ್ರಯಾಣಿಕನನ್ನು ಹೊಡೆಯಲು ಮುಂದಾಗಿದ್ದು, ಸ್ಪಷ್ಟವಾಗಿ ಗೋಚರಿಸುತ್ತಿತ್ತು.

ಹೀಗಾಗಿ ಘಟನೆ ತಾರಕಕ್ಕೇರುತ್ತಿದ್ದಂತೆ, ವಿಮಾನ ಸಿಬ್ಬಂದಿಗೆ ಘಟನೆಯನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ, ವಿಮಾನದಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆ, ಹಲ್ಲೆ, ವಿಮಾನದ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಅವರನ್ನು ವಶಕ್ಕೆ ಪಡೆಯಲಾಗಿದೆ. ವಿಮಾನವಿ ಕ್ವೀನ್ಸ್​ಲ್ಯಾಂಡ್​ನಿಂದ ನಾರ್ದರ್ನ್​ ಟೆರಟರಿಗೆ ಪ್ರಯಾಣ ಬೆಳೆಸುತ್ತಿತ್ತು.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ಇತ್ತೀಚಿನ ದಿನಗಳಲ್ಲಿ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡುವುದು, ಮದ್ಯಪಾನ ಮಾಡಿ ಹಲ್ಲೆ ನಡೆಸುವ ಘಟನೆಗಳು ಹೆಚ್ಚಾಗುತ್ತಿವೆ. ಈ ಪ್ರಯಾಣಿಕರು ಜಗಳವಾಡಿದ್ದಷ್ಟೇ ಅಲ್ಲದೆ ವಿಮಾನದ ಕಿಟಕಿ ಗಾಜುಗಳಿಗೂ ಹಾನಿ ಮಾಡಿದ್ದಾರೆ. ವಿಮಾನ ಲ್ಯಾಂಡಿಂಗ್ ಆದರೂ ಅವರ ಜಗಳ ನಿಲ್ಲಲಿಲ್ಲ.

23 ವರ್ಷ ವಯಸ್ಸಿನ ವ್ಯಕ್ತಿಯ ಮೇಲೆ ಉದ್ದೇಶಪೂರ್ವಕವಾಗಿ ಇತರರ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು, ಆಕ್ರಮಣಕಾರಿ ಆಕ್ರಮಣ, ಆಸ್ತಿಗೆ ಹಾನಿ, ಸಾರ್ವಜನಿಕ ಸ್ಥಳದಲ್ಲಿ ಅವ್ಯವಸ್ಥೆಯ ವರ್ತನೆ ಮತ್ತು ಕೌಟುಂಬಿಕ ಹಿಂಸಾಚಾರದ ಆದೇಶವನ್ನು ಉಲ್ಲಂಘಿಸಿದ ಆರೋಪ ಹೊರಿಸಲಾಗಿದೆ.

ಮತ್ತೊಬ್ಬ ಪ್ರಯಾಣಿಕ, 22, ವಾಣಿಜ್ಯ ಔಷಧ ಪೂರೈಕೆ, ಮಾದಕವಸ್ತು ಹೊಂದುವಿಕೆ, ಪೊಲೀಸ್ ಸದಸ್ಯರಿಗೆ ಅಡ್ಡಿಪಡಿಸುವುದು, ಅಸಭ್ಯ ವರ್ತನೆ ಮತ್ತು ನಿರ್ಬಂಧಿತ ಪ್ರದೇಶದಲ್ಲಿ ಮದ್ಯವನ್ನು ಹೊಂದಿರುವ ಆರೋಪವನ್ನು ಹೊರಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:27 am, Wed, 26 April 23

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು