AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thailand Plane Crash: ಥೈಲೆಂಡ್​ನಲ್ಲಿ ವಿಮಾನ ಪತನ, 9 ಮಂದಿ ಸಾವು

ಥೈಲೆಂಡ್​ನಲ್ಲಿ ವಿಮಾನ ಪತನಗೊಂಡಿದ್ದು, 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನವು ಟೇಕ್​ ಆಫ್ ಆಗಿ 11 ನಿಮಿಷಗಳ ಬಳಿಕ ಏರ್​ ಕಂಟ್ರೋಲರ್​ನಿಂದ ಸಂಪರ್ಕ ಕಳೆದುಕೊಂಡಿತ್ತು.

Thailand Plane Crash: ಥೈಲೆಂಡ್​ನಲ್ಲಿ ವಿಮಾನ ಪತನ, 9 ಮಂದಿ ಸಾವು
ವಿಮಾನ ಅಪಘಾತ
ನಯನಾ ರಾಜೀವ್
|

Updated on: Aug 23, 2024 | 11:09 AM

Share

ಥೈಲೆಂಡ್​ನಲ್ಲಿ ಪ್ರಯಾಣಿಕರ ಸಣ್ಣ ವಿಮಾನವೊಂದು ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಧಾನಿ ಬ್ಯಾಂಕಾಂಕ್​ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದ ಬಳಿಕ ಪತನಗೊಂಡಿದೆ. ಥಾಯ್ ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ವಿಮಾನ ನಿಲ್ದಾಣದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಮ್ಯಾಂಗ್ರೋವ್ ಜೌಗು ಪ್ರದೇಶದಲ್ಲಿ ವಿಮಾನದ ಅವಶೇಷಗಳು ಕಂಡುಬಂದಿವೆ.

ವಿಮಾನದಲ್ಲಿ 7 ಪ್ರಯಾಣಿಕರಿದ್ದರು, ಇಬ್ಬರು ಪೈಲಟ್​ಗಳು ಇದ್ದರು, ವಿಮಾನದಲ್ಲಿದ್ದವರ ಗುರುತು ತಕ್ಷಣವೇ ಸ್ಪಷ್ಟವಾಗಿಲ್ಲ, ಆದರೆ ವಿಮಾನದಲ್ಲಿದ್ದವರಲ್ಲಿ ಹ್ಯಾಂಕಾಂಗ್​ ಐವರು, ಚೀನೀ ಪ್ರವಾಸಿಗರು ಹಾಗೂ ಸಿಬ್ಬಂದಿ ಇದ್ದರು.

ಥೈಲೆಂಡ್ ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ಥಾಯ್ ಫ್ಲೈಯಿಂಗ್ ಸರ್ವೀಸ್ ಕಂಪನಿಯಿಂದ ನಿರ್ವಹಿಸಲ್ಪಡುವ ಸೆಸ್ನಾ ಕಾರವಾನ್ ಗುರುವಾರ ಮಧ್ಯಾಹ್ನ 2.46ಕ್ಕೆ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು.

ಮತ್ತಷ್ಟು ಓದಿ: ಬ್ರೆಜಿಲ್ ವಿಮಾನ ಪತನ : ಜನವಸತಿ ಪ್ರದೇಶದಲ್ಲೇ ಅಪಘಾತ, 62 ಸಾವು

ಟೇಕ್ ಆಫ್ ಆದ 11 ನಿಮಿಷಗಳ ಬಳಿಕ ಏರ್ ಟ್ರಾಫಿಕ್ ಕಂಟ್ರೋಲ್​ ಸಂಪರ್ಕವನ್ನು ಕಳೆದುಕೊಂಡರು. ಆ ಸಮಯದಲ್ಲಿ ವಿಮಾನವು ನಿಲ್ದಾಣದಿಂದ 35 ಕಿಲೋಮೀಟರ್​ ದೂರದಲ್ಲಿತ್ತು.ಅದು ಆಗ್ನೇಯಕ್ಕೆ 275 ಕಿಲೋಮೀಟರ್​ ದೂರದಲ್ಲಿರುವ ಟ್ರೀಟ್​ನ ಕರಾವಳಿ ಪ್ರಾಂತ್ಯದ ಕಡೆಗೆ ಹೋಗುತ್ತಿತ್ತು.

300ಕ್ಕೂ ಹೆಚ್ಚು ಸೇನಾ ಸಿಬ್ಬಂದಿ ಮತ್ತು ಸ್ವಯಂಸೇವಕರನ್ನು ಶೋಧ ಕಾರ್ಯದಲ್ಲಿ ನಿಯೋಜಿಸಲಾಗಿದ್ದು, ಅಪಘಾತದ ಕಾರಣವನ್ನು ಗುರುತಿಸಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ