AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thailand Plane Crash: ಥೈಲೆಂಡ್​ನಲ್ಲಿ ವಿಮಾನ ಪತನ, 9 ಮಂದಿ ಸಾವು

ಥೈಲೆಂಡ್​ನಲ್ಲಿ ವಿಮಾನ ಪತನಗೊಂಡಿದ್ದು, 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನವು ಟೇಕ್​ ಆಫ್ ಆಗಿ 11 ನಿಮಿಷಗಳ ಬಳಿಕ ಏರ್​ ಕಂಟ್ರೋಲರ್​ನಿಂದ ಸಂಪರ್ಕ ಕಳೆದುಕೊಂಡಿತ್ತು.

Thailand Plane Crash: ಥೈಲೆಂಡ್​ನಲ್ಲಿ ವಿಮಾನ ಪತನ, 9 ಮಂದಿ ಸಾವು
ವಿಮಾನ ಅಪಘಾತ
ನಯನಾ ರಾಜೀವ್
|

Updated on: Aug 23, 2024 | 11:09 AM

Share

ಥೈಲೆಂಡ್​ನಲ್ಲಿ ಪ್ರಯಾಣಿಕರ ಸಣ್ಣ ವಿಮಾನವೊಂದು ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಧಾನಿ ಬ್ಯಾಂಕಾಂಕ್​ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದ ಬಳಿಕ ಪತನಗೊಂಡಿದೆ. ಥಾಯ್ ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ವಿಮಾನ ನಿಲ್ದಾಣದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಮ್ಯಾಂಗ್ರೋವ್ ಜೌಗು ಪ್ರದೇಶದಲ್ಲಿ ವಿಮಾನದ ಅವಶೇಷಗಳು ಕಂಡುಬಂದಿವೆ.

ವಿಮಾನದಲ್ಲಿ 7 ಪ್ರಯಾಣಿಕರಿದ್ದರು, ಇಬ್ಬರು ಪೈಲಟ್​ಗಳು ಇದ್ದರು, ವಿಮಾನದಲ್ಲಿದ್ದವರ ಗುರುತು ತಕ್ಷಣವೇ ಸ್ಪಷ್ಟವಾಗಿಲ್ಲ, ಆದರೆ ವಿಮಾನದಲ್ಲಿದ್ದವರಲ್ಲಿ ಹ್ಯಾಂಕಾಂಗ್​ ಐವರು, ಚೀನೀ ಪ್ರವಾಸಿಗರು ಹಾಗೂ ಸಿಬ್ಬಂದಿ ಇದ್ದರು.

ಥೈಲೆಂಡ್ ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ಥಾಯ್ ಫ್ಲೈಯಿಂಗ್ ಸರ್ವೀಸ್ ಕಂಪನಿಯಿಂದ ನಿರ್ವಹಿಸಲ್ಪಡುವ ಸೆಸ್ನಾ ಕಾರವಾನ್ ಗುರುವಾರ ಮಧ್ಯಾಹ್ನ 2.46ಕ್ಕೆ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು.

ಮತ್ತಷ್ಟು ಓದಿ: ಬ್ರೆಜಿಲ್ ವಿಮಾನ ಪತನ : ಜನವಸತಿ ಪ್ರದೇಶದಲ್ಲೇ ಅಪಘಾತ, 62 ಸಾವು

ಟೇಕ್ ಆಫ್ ಆದ 11 ನಿಮಿಷಗಳ ಬಳಿಕ ಏರ್ ಟ್ರಾಫಿಕ್ ಕಂಟ್ರೋಲ್​ ಸಂಪರ್ಕವನ್ನು ಕಳೆದುಕೊಂಡರು. ಆ ಸಮಯದಲ್ಲಿ ವಿಮಾನವು ನಿಲ್ದಾಣದಿಂದ 35 ಕಿಲೋಮೀಟರ್​ ದೂರದಲ್ಲಿತ್ತು.ಅದು ಆಗ್ನೇಯಕ್ಕೆ 275 ಕಿಲೋಮೀಟರ್​ ದೂರದಲ್ಲಿರುವ ಟ್ರೀಟ್​ನ ಕರಾವಳಿ ಪ್ರಾಂತ್ಯದ ಕಡೆಗೆ ಹೋಗುತ್ತಿತ್ತು.

300ಕ್ಕೂ ಹೆಚ್ಚು ಸೇನಾ ಸಿಬ್ಬಂದಿ ಮತ್ತು ಸ್ವಯಂಸೇವಕರನ್ನು ಶೋಧ ಕಾರ್ಯದಲ್ಲಿ ನಿಯೋಜಿಸಲಾಗಿದ್ದು, ಅಪಘಾತದ ಕಾರಣವನ್ನು ಗುರುತಿಸಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!