AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thailand Plane Crash: ಥೈಲೆಂಡ್​ನಲ್ಲಿ ವಿಮಾನ ಪತನ, 9 ಮಂದಿ ಸಾವು

ಥೈಲೆಂಡ್​ನಲ್ಲಿ ವಿಮಾನ ಪತನಗೊಂಡಿದ್ದು, 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನವು ಟೇಕ್​ ಆಫ್ ಆಗಿ 11 ನಿಮಿಷಗಳ ಬಳಿಕ ಏರ್​ ಕಂಟ್ರೋಲರ್​ನಿಂದ ಸಂಪರ್ಕ ಕಳೆದುಕೊಂಡಿತ್ತು.

Thailand Plane Crash: ಥೈಲೆಂಡ್​ನಲ್ಲಿ ವಿಮಾನ ಪತನ, 9 ಮಂದಿ ಸಾವು
ವಿಮಾನ ಅಪಘಾತ
ನಯನಾ ರಾಜೀವ್
|

Updated on: Aug 23, 2024 | 11:09 AM

Share

ಥೈಲೆಂಡ್​ನಲ್ಲಿ ಪ್ರಯಾಣಿಕರ ಸಣ್ಣ ವಿಮಾನವೊಂದು ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಧಾನಿ ಬ್ಯಾಂಕಾಂಕ್​ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದ ಬಳಿಕ ಪತನಗೊಂಡಿದೆ. ಥಾಯ್ ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ವಿಮಾನ ನಿಲ್ದಾಣದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಮ್ಯಾಂಗ್ರೋವ್ ಜೌಗು ಪ್ರದೇಶದಲ್ಲಿ ವಿಮಾನದ ಅವಶೇಷಗಳು ಕಂಡುಬಂದಿವೆ.

ವಿಮಾನದಲ್ಲಿ 7 ಪ್ರಯಾಣಿಕರಿದ್ದರು, ಇಬ್ಬರು ಪೈಲಟ್​ಗಳು ಇದ್ದರು, ವಿಮಾನದಲ್ಲಿದ್ದವರ ಗುರುತು ತಕ್ಷಣವೇ ಸ್ಪಷ್ಟವಾಗಿಲ್ಲ, ಆದರೆ ವಿಮಾನದಲ್ಲಿದ್ದವರಲ್ಲಿ ಹ್ಯಾಂಕಾಂಗ್​ ಐವರು, ಚೀನೀ ಪ್ರವಾಸಿಗರು ಹಾಗೂ ಸಿಬ್ಬಂದಿ ಇದ್ದರು.

ಥೈಲೆಂಡ್ ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ಥಾಯ್ ಫ್ಲೈಯಿಂಗ್ ಸರ್ವೀಸ್ ಕಂಪನಿಯಿಂದ ನಿರ್ವಹಿಸಲ್ಪಡುವ ಸೆಸ್ನಾ ಕಾರವಾನ್ ಗುರುವಾರ ಮಧ್ಯಾಹ್ನ 2.46ಕ್ಕೆ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು.

ಮತ್ತಷ್ಟು ಓದಿ: ಬ್ರೆಜಿಲ್ ವಿಮಾನ ಪತನ : ಜನವಸತಿ ಪ್ರದೇಶದಲ್ಲೇ ಅಪಘಾತ, 62 ಸಾವು

ಟೇಕ್ ಆಫ್ ಆದ 11 ನಿಮಿಷಗಳ ಬಳಿಕ ಏರ್ ಟ್ರಾಫಿಕ್ ಕಂಟ್ರೋಲ್​ ಸಂಪರ್ಕವನ್ನು ಕಳೆದುಕೊಂಡರು. ಆ ಸಮಯದಲ್ಲಿ ವಿಮಾನವು ನಿಲ್ದಾಣದಿಂದ 35 ಕಿಲೋಮೀಟರ್​ ದೂರದಲ್ಲಿತ್ತು.ಅದು ಆಗ್ನೇಯಕ್ಕೆ 275 ಕಿಲೋಮೀಟರ್​ ದೂರದಲ್ಲಿರುವ ಟ್ರೀಟ್​ನ ಕರಾವಳಿ ಪ್ರಾಂತ್ಯದ ಕಡೆಗೆ ಹೋಗುತ್ತಿತ್ತು.

300ಕ್ಕೂ ಹೆಚ್ಚು ಸೇನಾ ಸಿಬ್ಬಂದಿ ಮತ್ತು ಸ್ವಯಂಸೇವಕರನ್ನು ಶೋಧ ಕಾರ್ಯದಲ್ಲಿ ನಿಯೋಜಿಸಲಾಗಿದ್ದು, ಅಪಘಾತದ ಕಾರಣವನ್ನು ಗುರುತಿಸಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ