AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ಕ್ಲಿಕ್ಕಿಸಲು ಜಲಪಾತದ ತುದಿಗೆ ಹೋದ ಭಾರತೀಯ ಟೆಕ್ಕಿ ಕಾಲುಜಾರಿ ಸಾವು

ಜಲಪಾತದ ತುದಿಯಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸುವ ವೇಳೆ ಭಾರತೀಯ ಮೂಲದ ಟೆಕ್ಕಿ ಒಬ್ಬಳು ಮೇಲಿಂದ ಕಾಲುಜಾರಿಬಿದ್ದು ಸಾವನ್ನಪ್ಪಿರೋ ಘಟನೆ ಅಮೆರಿಕದ ಅಟ್ಲಾಂಟಾ ನಗರದ ಬಳಿ ವರದಿಯಾಗಿದೆ. ಮೃತ ಸಾಫ್ಟ್​ವೇರ್​ ಇಂಜಿನಿಯರ್​ನ ಕಮಲಾ ಪೋಲಾವರಪು ಎಂದು ಗುರುತಿಸಲಾಗಿದೆ. ಮೂಲತಃ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ನಿವಾಸಿಯಾಗಿರುವ ಕಮಲಾ ಅಮೆರಿಕದ ಸಾಫ್ಟ್​ವೇರ್​ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಮಲಾ ಕಳೆದ ಭಾನುವಾರ ತಾನು ಮದುವೆಯಾಗಲಿದ್ದ ಹುಡುಗನೊಟ್ಟಿಗೆ ಅಟ್ಲಾಂಟಾದಲ್ಲಿದ್ದ ತನ್ನ ಸಂಬಂಧಿಕರ ಮನೆಗೆ ಭೇಟಿಕೊಟ್ಟಿದರು. ಅಲ್ಲಿಂದ ತಮ್ಮ ನಿವಾಸಕ್ಕೆ ಮರಳುವಾಗ […]

ಸೆಲ್ಫಿ ಕ್ಲಿಕ್ಕಿಸಲು ಜಲಪಾತದ ತುದಿಗೆ ಹೋದ ಭಾರತೀಯ ಟೆಕ್ಕಿ ಕಾಲುಜಾರಿ ಸಾವು
Follow us
KUSHAL V
|

Updated on: Sep 14, 2020 | 6:17 PM

ಜಲಪಾತದ ತುದಿಯಲ್ಲಿ ನಿಂತು ಸೆಲ್ಫಿ ಕ್ಲಿಕ್ಕಿಸುವ ವೇಳೆ ಭಾರತೀಯ ಮೂಲದ ಟೆಕ್ಕಿ ಒಬ್ಬಳು ಮೇಲಿಂದ ಕಾಲುಜಾರಿಬಿದ್ದು ಸಾವನ್ನಪ್ಪಿರೋ ಘಟನೆ ಅಮೆರಿಕದ ಅಟ್ಲಾಂಟಾ ನಗರದ ಬಳಿ ವರದಿಯಾಗಿದೆ. ಮೃತ ಸಾಫ್ಟ್​ವೇರ್​ ಇಂಜಿನಿಯರ್​ನ ಕಮಲಾ ಪೋಲಾವರಪು ಎಂದು ಗುರುತಿಸಲಾಗಿದೆ. ಮೂಲತಃ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ನಿವಾಸಿಯಾಗಿರುವ ಕಮಲಾ ಅಮೆರಿಕದ ಸಾಫ್ಟ್​ವೇರ್​ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಮಲಾ ಕಳೆದ ಭಾನುವಾರ ತಾನು ಮದುವೆಯಾಗಲಿದ್ದ ಹುಡುಗನೊಟ್ಟಿಗೆ ಅಟ್ಲಾಂಟಾದಲ್ಲಿದ್ದ ತನ್ನ ಸಂಬಂಧಿಕರ ಮನೆಗೆ ಭೇಟಿಕೊಟ್ಟಿದರು. ಅಲ್ಲಿಂದ ತಮ್ಮ ನಿವಾಸಕ್ಕೆ ಮರಳುವಾಗ ಮಾರ್ಗದಲ್ಲಿ ಇದ್ದ ಬಾಲ್ಡ್​ ರಿವರ್​ ಜಲಪಾತಕ್ಕೆ ಭೇಟಿ ನೀಡಿದ್ದರು.

ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಲು ಜೋಡಿಯು ಅದರ ತುತ್ತತುದಿಗೆ ತಲುಪಿದ್ದರು. ಸೆಲ್ಫಿ ತೆಗೆಯುವಾಗ ಕಾಲುಜಾರಿ ಜೋಡಿಯ ಮೇಲಿಂದ ಕೆಳಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳದಲ್ಲೇ ಇದ್ದವರು ಹುಡುಗನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಪಕ್ಕದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ ಕಮಲಾರನ್ನು ಉಳಿಸಲು ಸಾಧ್ಯವಾಗಲಿಲ್ಲವಂತೆ.

ಇದೀಗ, ಟೆಕ್ಕಿಯ ಮೃತದೇಹವನ್ನು ಭಾರತಕ್ಕೆ ತರಲು ಪ್ರಯತ್ನ ನಡೆಸಲಾಗುತ್ತಿದೆ. ಅಮೆರಿಕದ ತೆಲುಗು ಸಂಘವು ಮೃತದೇಹವನ್ನು ಭಾರತಕ್ಕೆ ರವಾನಿಸಲು ಪ್ರಕ್ರಿಯೆ ಆರಂಭಿಸಿದೆ ಎಂದು ಹೇಳಲಾಗಿದೆ.

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?