South Africa: ದಕ್ಷಿಣ ಆಫ್ರಿಕಾದಲ್ಲಿ ಮನೆಹೊಕ್ಕ ದುಷ್ಕರ್ಮಿಗಳಿಂದ ಗುಂಡಿನ ದಾಳಿ; 10 ಸಾವು

ದಕ್ಷಿಣ ಆಫ್ರಿಕಾದ ಮನೆಯೊಂದರಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಒಂದೇ ಕುಟುಂಬದ ಹತ್ತು ಸದಸ್ಯರು ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಎನ್​ಕೌಂಟರ್ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಮತ್ತೋರ್ವ ತಲೆಮರೆಸಿಕೊಂಡಿದ್ದಾನೆ.

South Africa: ದಕ್ಷಿಣ ಆಫ್ರಿಕಾದಲ್ಲಿ ಮನೆಹೊಕ್ಕ ದುಷ್ಕರ್ಮಿಗಳಿಂದ ಗುಂಡಿನ ದಾಳಿ; 10 ಸಾವು
ದಕ್ಷಿಣ ಆಫ್ರಿಕಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿದ್ದಾರೆ
Image Credit source: Ihsaan Haffejee/AFP/Getty Images
Rakesh Nayak Manchi

Updated on: Apr 21, 2023 | 9:28 PM

ಜೋಹಾನ್ಸ್‌ಬರ್ಗ್: ದುಷ್ಕರ್ಮಿಗಳು ಮನೆಯೊಂದಕ್ಕೆ ನುಗ್ಗಿ ನಡೆಸಿದ ಗುಂಡಿನ ದಾಳಿಯಲ್ಲಿ ಏಳು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿದ ಘಟನೆ ದಕ್ಷಿಣ ಆಫ್ರಿಕಾದ (South Africa) ಪೂರ್ವ ಕ್ವಾಝುಲು-ನಟಾಲ್ ಪ್ರಾಂತ್ಯದ ಪೀಟರ್‌ಮರಿಟ್ಜ್‌ಬರ್ಗ್ ನಗರದಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ (Gunfire) ಒಂದೇ ಕುಟುಂಬದ 7 ಮಹಿಳೆಯರು, ಒಂದು ಮಗು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆಗೆ ಇಳಿದ ಪೊಲೀಸರು ಮತ್ತು ದುಷ್ಕರ್ಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಓರ್ವನನ್ನು ಎನ್​ಕೌಂಟರ್ ಮಾಡಲಾಗಿದ್ದು, ಇಬ್ಬರನ್ನು ಸೆರೆ ಹಿಡಿಯಲಾಗಿದೆ. ಅಲ್ಲದೆ, ತಲೆಮರೆಸಿಕೊಂಡಿರುವ ಮತ್ತೋರ್ವನ ಬಂಧನಕ್ಕೆ ತನಿಖೆ ಮುಂದುವರಿದಿದೆ ಎಂದು ಸಚಿವ ಭೆಕಿ ಸೆಲೆ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಪೂರ್ವ ಕ್ವಾಝುಲು-ನಟಾಲ್ ಪ್ರಾಂತ್ಯದ ಪೀಟರ್‌ಮರಿಟ್ಜ್‌ಬರ್ಗ್ ನಗರದ ಮನೆಯೊಂದರ ಸದಸ್ಯರನ್ನು ಗುರಿಯಾಗಿಸಿ ನುಗ್ಗಿದ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿ 10 ಮಂದಿಯನ್ನು ಹತ್ಯೆಗೈದಿದ್ದಾರೆ. ಈ ಘಟನೆ ಗುರುವಾರ ರಾತ್ರಿ ಮತ್ತು ಶುಕ್ರವಾರ ಮುಂಜಾನೆ ನಡುವೆ ನಡೆದಿದೆ. ಸಾವನ್ನಪ್ಪಿದವರ ಪೈಕಿ 7 ಮಹಿಳೆಯರಾಗಿದ್ದು, ಇಬ್ಬರು ಪುರುಷರು ಮತ್ತು ಓರ್ವ 13 ವರ್ಷದ ವ್ಯಕ್ತಿ (ಪೊಲೀಸರು ಲಿಂಗ ಬಹಿರಂಗಪಡಿಸಿಲ್ಲ) ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Delhi: ದೆಹಲಿಯ ಸಾಕೇತ್​ ಕೋರ್ಟ್​ ಆವರಣದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಆಸ್ಪತ್ರೆಗೆ ದಾಖಲು

ಸಾಮೂಹಿಕ ಹತ್ಯೆ ನಡೆದ ಮನೆಯಿಂದ ಸುಮಾರು ಒಂದು ಮೈಲಿ ದೂರದಲ್ಲಿ ಪೊಲೀಸರಿಗೆ ಎದುರಾದ ದುಷ್ಕರ್ಮಿಗಳು ಗುಂಡಿನ ದಾಳಿ ಆರಂಭಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಕೂಡ ಗುಂಡಿನ ದಾಳಿ ನಡೆಸಿ ಓರ್ವನನ್ನು ಹೊಡೆದುರುಳಿಸಿದ್ದಾರೆ. ಅಲ್ಲದೆ, ಘಟನೆಯಲ್ಲಿ ಗಾಯಗೊಂಡ ಓರ್ವನ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ಮತ್ತೋರ್ವ ಪರಾರಿಯಾಗಿದ್ದು, ಗುರುತು ಪತ್ತೆಯಾಗಿದೆ ಎಂದು ಸಚಿವ ಸೆಲೆ ಹೇಳಿದರು.

ಪೊಲೀಸರ ಗುಂಡೇಟಿಗೆ ಸಾವನ್ನಪ್ಪಿದ ದುಷ್ಕರ್ಮಿ ಕುಖ್ಯಾತ ಮತ್ತು ಪ್ರದೇಶದ ಇತರ ಅಪರಾಧಗಳೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಸಚಿವ ಸೆಲೆ ಮಾಹಿತಿ ನೀಡಿದ್ದಾರೆ. ಅದಾಗ್ಯೂ, ಸಾಮೂಹಿಕ ಗುಂಡಿನ ದಾಳಿಗೆ ಕಾರಣ ಏನೆಂದು ಸ್ಪಷ್ಟಪಡಿಸಿಲ್ಲ. ತನಿಖೆ ನಂತರವಷ್ಟೇ ತಿಳಿದುಬರಲಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:28 pm, Fri, 21 April 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us