AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoon Suk Yeol: ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ವಿರುದ್ಧ ಅರೆಸ್ಟ್​ ವಾರಂಟ್ ಜಾರಿ

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಲಾಗಿದೆ. ದಕ್ಷಿಣ ಕೊರಿಯಾದಲ್ಲಿ ಹಾಲಿ ಅಧ್ಯಕ್ಷರ ವಿರುದ್ಧ ಹೊರಡಿಸಲಾದ ಮೊದಲ ಬಂಧನ ವಾರಂಟ್ ಇದಾಗಿದೆ.ಮಂಗಳವಾರ ದಕ್ಷಿಣ ಕೊರಿಯಾದ ನ್ಯಾಯಾಲಯವು ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ಡಿಸೆಂಬರ್ 3 ರಂದು ದೇಶದಲ್ಲಿ ಮಾರ್ಷಲ್ ಕಾನೂನನ್ನು ಹೇರುವ ನಿರ್ಧಾರದಿಂದಾಗಿ ಅವರ ವಿರುದ್ಧ ದೂರು ನೀಡಲಾಗಿದೆ.

Yoon Suk Yeol: ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ವಿರುದ್ಧ ಅರೆಸ್ಟ್​ ವಾರಂಟ್ ಜಾರಿ
ಯೂನ್ Image Credit source: CNN
ನಯನಾ ರಾಜೀವ್
|

Updated on: Dec 31, 2024 | 9:45 AM

Share

ದಕ್ಷಿಣ ಕೊರಿಯಾ ನ್ಯಾಯಾಲವು ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿದೆ. ಡಿಸೆಂಬರ್ 3 ರಂದು ಸಮರ ಕಾನೂನನ್ನು ಹೇರುವ ಅವರ ನಿರ್ಧಾರದ ಮೇಲೆ ಅಧಿಕಾರದಿಂದ ಅಮಾನತುಗೊಳಿಸಲಾಯಿತು. ಅಮಾನತುಗೊಂಡಿರುವ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್ ಮತ್ತು ಸರ್ಚ್ ವಾರೆಂಟ್ ಜಾರಿಗೊಳಿಸಲಾಗಿದೆ.

ಸಿಯೋಲ್ ವೆಸ್ಟರ್ನ್ ಡಿಸ್ಟ್ರಿಕ್ಟ್ ಕೋರ್ಟ್ ವಾರಂಟ್ ಅನ್ನು ಅನುಮೋದಿಸಿದೆ.ದಕ್ಷಿಣ ಕೊರಿಯಾದಲ್ಲಿ ಹಾಲಿ ಅಧ್ಯಕ್ಷರಿಗೆ ಹೊರಡಿಸಲಾದ ಮೊದಲ ಬಂಧನ ವಾರಂಟ್ ಇದಾಗಿದೆ. ದಕ್ಷಿಣ ಕೊರಿಯಾದಲ್ಲಿ ಮೊದಲ ಬಾರಿಗೆ ಸಮರ ಕಾನೂನನ್ನು ಘೋಷಿಸಲಾಗಿತ್ತು.

ಅಪಾರ ಒತ್ತಡದ ನಂತರ ಅದನ್ನು ಹಿಂತೆಗೆದುಕೊಳ್ಳಲಾಯಿತು. ರಾಷ್ಟ್ರ ವಿರೋಧಿ ಶಕ್ತಿಗಳನ್ನು ನಾಶಮಾಡಲು ಮಾರ್ಷಲ್ ಕಾನೂನನ್ನು ಘೋಷಿಸಲಾಗುತ್ತಿದೆ ಎಂದು ಹೇಳಿದ್ದರು. ಈ ಆದೇಶದಿಂದ ದೇಶವು ತಾತ್ಕಾಲಿಕ ಮಿಲಿಟರಿ ನಿಯಂತ್ರಣಕ್ಕೆ ಬರುತ್ತಿತ್ತು.

ದಕ್ಷಿಣ ಕೊರಿಯಾದಲ್ಲಿ ಮಾರ್ಷಲ್ ಕಾನೂನು ಜಾರಿ ಎಂದರೆ ತುರ್ತು ಪರಿಸ್ಥಿತಿ ಘೋಷಣೆ ಎಂದರ್ಥ. ಈ ಸಮಯದಲ್ಲಿ ಎಲ್ಲಾ ಆಡಳಿತವು ಮಿಲಿಟರಿ ಕೈಯಲ್ಲಿರುತ್ತದೆ. ಚುನಾಯಿತ ಸರ್ಕಾರಕ್ಕೆ ತನ್ನ ಕೆಲಸ ಮಾಡಲು ಸಾಧ್ಯವಾಗದೇ ಇರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

ಮತ್ತಷ್ಟು ಓದಿ: ದಕ್ಷಿಣ ಕೊರಿಯಾ ಬಿಕ್ಕಟ್ಟು: ಅಧ್ಯಕ್ಷ ಯೂನ್ ವಿರುದ್ಧ ಸಂಸತ್ತಿನಲ್ಲಿ ದೋಷಾರೋಪಣೆ ಮತ ಹಾಕಿದ 204 ಸಂಸದರು

1979 ರಲ್ಲಿ ದಕ್ಷಿಣ ಕೊರಿಯಾದಲ್ಲಿ ದಂಗೆಯ ಸಮಯದಲ್ಲಿ ದಕ್ಷಿಣ ಕೊರಿಯಾದ ಆಗಿನ ಮಿಲಿಟರಿ ಸರ್ವಾಧಿಕಾರಿ ಪಾರ್ಕ್ ಚುಂಗ್-ಹೀ ಹತ್ಯೆಯಾದಾಗ ಇದನ್ನು ಕೊನೆಯದಾಗಿ ಘೋಷಿಸಿತ್ತು. 1987 ರಲ್ಲಿ ದಕ್ಷಿಣ ಕೊರಿಯಾ ಸಂಸದೀಯ ಪ್ರಜಾಪ್ರಭುತ್ವವಾದ ನಂತರ ಇದು ಎಂದಿಗೂ ಜಾರಿಗೆ ಬಂದಿಲ್ಲ, ಆದರೆ ಅಧ್ಯಕ್ಷ ಯೂನ್ ದೇಶದಲ್ಲಿ ಮಾರ್ಷಲ್ ಕಾನೂನನ್ನು ಹೇರಿದ್ದರು.

ಡಿಸೆಂಬರ್ 3ರ ರಾತ್ರಿ ದಕ್ಷಿಣ ಕೊರಿಯಾದಲ್ಲಿ ತುರ್ತುಪರಿಸ್ಥಿತಿ ಅಂದರೆ ಸಮರ ಕಾನೂನನ್ನು ಘೋಷಿಸಲಾಗಿತ್ತು. ಇದನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಆರಂಭವಾಗಿದ್ದವು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್