AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಕಿಮ್ ರಾಜೀನಾಮೆ

ದಕ್ಷಿಣ ಕೊರಿಯಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದೆ. ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ರಾಜೀನಾಮೆ ನೀಡಿದ್ದಾರೆ. ಸಮರ ಕಾನೂನಿನ ಕಲ್ಪನೆಯ ಮಾಸ್ಟರ್ ಮೈಂಡ್ ಎಂದು ಅವರನ್ನು ಕರೆಯಲಾಗಿತ್ತು. ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಬುಧವಾರ ರಾತ್ರಿ 11 ಗಂಟೆಗೆ ಹಠಾತ್ತನೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿ ಸಮರ ಕಾನೂನನ್ನು ಹೇರುವುದಾಗಿ ಘೋಷಿಸಿದರು.

ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಕಿಮ್ ರಾಜೀನಾಮೆ
ಕಿಮ್
ನಯನಾ ರಾಜೀವ್
|

Updated on: Dec 05, 2024 | 9:20 AM

Share

ದಕ್ಷಿಣ ಕೊರಿಯಾದಲ್ಲಿ ರಾಜಕೀಯ ಅಸ್ಥಿರತೆ ಮುಂದುವರೆದಿದೆ. ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ರಾಜೀನಾಮೆ ನೀಡಿದ್ದಾರೆ. ಸಮರ ಕಾನೂನಿನ ಕಲ್ಪನೆಯ ಮಾಸ್ಟರ್ ಮೈಂಡ್ ಎಂದು ಅವರನ್ನು ಕರೆಯಲಾಗಿತ್ತು. ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಬುಧವಾರ ರಾತ್ರಿ 11 ಗಂಟೆಗೆ ಹಠಾತ್ತನೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿ ಸಮರ ಕಾನೂನನ್ನು ಹೇರುವುದಾಗಿ ಘೋಷಿಸಿದರು.

ಆದರೆ ಪ್ರತಿಪಕ್ಷಗಳ ವಿರೋಧ ಮತ್ತು ಸಾರ್ವಜನಿಕರ ಕೋಲಾಹಲದ ನಡುವೆ ಅವರು ಈ ನಿರ್ಧಾರವನ್ನು ಹಿಂಪಡೆಯಬೇಕಾಯಿತು. ಈ ಹಿಂದೆ ಸಂಸತ್ತಿನಲ್ಲಿ ಈ ನಿರ್ಧಾರದ ವಿರುದ್ಧ ನಿರ್ಣಯ ಮಂಡಿಸಿ ಅದನ್ನು ಕೈಬಿಡಲಾಗಿತ್ತು. ಸೌದಿ ಅರೇಬಿಯಾದ ರಾಯಭಾರಿ ಚೋಯ್ ಬ್ಯುಂಗ್-ಹ್ಯುಕ್ ಅವರನ್ನು ಹೊಸ ರಕ್ಷಣಾ ಸಚಿವರನ್ನಾಗಿ ಹೆಸರಿಸಲಾಗಿದೆ.

ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಅವರ ಪಕ್ಷವು ಸಂಸತ್ತಿನಲ್ಲಿ ಕಡಿಮೆ ಬೆಂಬಲವನ್ನು ಹೊಂದಿದೆ. ಪ್ರತಿಪಕ್ಷ ಡೆಮಾಕ್ರಟಿಕ್ ಪಕ್ಷ ಸಂಸತ್ತಿನಲ್ಲಿ ಪ್ರಾಬಲ್ಯ ಹೊಂದಿದೆ. ಇಂತಹ ಪರಿಸ್ಥಿತಿಯಲ್ಲಿ ಆಡಳಿತಾರೂಢ ಪೀಪಲ್ಸ್ ಪವರ್ ಪಕ್ಷದ ಪ್ರತಿಯೊಂದು ನಿರ್ಧಾರವನ್ನು ವಿರೋಧ ಪಕ್ಷವು ಸಂಸತ್ತಿನಲ್ಲಿ ರದ್ದುಪಡಿಸುತ್ತದೆ.

ಮತ್ತಷ್ಟು ಓದಿ: ತುರ್ತು ಮಿಲಿಟರಿ ಆಡಳಿತ ಹೇರಿ ಕೆಲವೇ ಗಂಟೆಗಳಲ್ಲಿ ಆದೇಶ ಹಿಂಪಡೆದ ದಕ್ಷಿಣ ಕೊರಿಯಾ

ಕಿಮ್ ಅವರನ್ನು ಅಧ್ಯಕ್ಷ ಯೂನ್ ಅರ ವಿಶ್ವಾಸಾರ್ಹ ವ್ಯಕ್ತಿ ಎಂದು ಪರಿಗಣಿಸಲಾಗಿದೆ. ಸಂಪುಟದ 12 ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಹಲವು ಪ್ರಮುಖ ನಾಯಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ವಿರೋಧಿಗಳು ಮಾತ್ರವಲ್ಲದೆ ಹಲವು ಕ್ಯಾಬಿನೆಟ್ ನಾಯಕರು ಕೂಡ ಸಮರ ಕಾನೂನಿನ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ. ಅವರ ಪಕ್ಷದ ಹಿರಿಯ ನಾಯಕ, ಪೀಪಲ್ ಪವರ್ ಪಾರ್ಟಿ, ಹ್ಯಾನ್ ಡಾಂಗ್ ಹೂನ್ ಅವರು ಪ್ರಮುಖ ವಿರೋಧ ಪಕ್ಷದ ನಾಯಕ ಲೀ ಜೇ-ಮ್ಯುಂಗ್ ಅವರೊಂದಿಗೆ ಕೈಜೋಡಿಸಿದ್ದಾರೆ, ಈ ನಿರ್ಧಾರವನ್ನು ತಪ್ಪು ಎಂದು ಕರೆದಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ 300 ಸಂಸದರಲ್ಲಿ ಅಧ್ಯಕ್ಷರ ಪೀಪಲ್ ಪವರ್ ಪಕ್ಷವು 108 ಸಂಸದರನ್ನು ಹೊಂದಿದೆ.

ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳಿಂದ ಎದುರಾಗಿರುವ ಬೆದರಿಕೆಯಿಂದ ಸ್ವತಂತ್ರ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ದೇಶ ವಿರೋಧಿ ಶಕ್ತಿಗಳನ್ನು ನಿವಾರಿಸಲು ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಜಾರಿಗೊಳಿಸಲಾಗುವುದು ಎಂದು ಘೋಷಿಸಲಾಗಿತ್ತು.

ಜನರ ಸ್ವಾತಂತ್ರ್ಯ ಮತ್ತು ಸುರಕ್ಷತೆಯನ್ನು ಖಾತರಿಪಡಿಸಲು ಇದು ಅನಿವಾರ್ಯ ಕ್ರಮವಾಗಿದೆ. ರಾಷ್ಟ್ರೀಯ ಸಂಸತ್ತು ಕೂಡಾ ಮಾದಕ ವಸ್ತು ಅಪರಾಧ ತಡೆಗಟ್ಟಲು, ನಾಗರಿಕರ ಸುರಕ್ಷತೆ ಕ್ರಮಗಳಿಗೆ ನಿಗದಿಯಾಗಿದ್ದ ಬಜೆಟ್ ಅನುದಾನವನ್ನು ಕಡಿತಗೊಳಿಸಲಾಗಿತ್ತು.

ದಕ್ಷಿಣ ಕೊರಿಯಾದಲ್ಲಿ 1980 ರ ನಂತರ ಮೊದಲ ಬಾರಿಗೆ ಮಿಲಿಟರಿ ಆಡಳಿತ ಜಾರಿಗೆ ಬಂದಿತ್ತು. ಮಿಲಿಟರಿ ಆಡಳಿತದ ಸಮಯದಲ್ಲಿ ಸಂಸತ್ತು ಮತ್ತು ರಾಜಕೀಯ ಪಕ್ಷಗಳ ಚಟುವಟಿಕೆಗಳನ್ನು ನಿಷೇಧಿಸಲಾಗಿತ್ತು. ಮಾಧ್ಯಮಗಳು ಮಿಲಿಟರಿ ನಿಯಂತ್ರಣದಲ್ಲಿರುತ್ತಾರೆ ಎಂದು ಹೇಳಲಾಗಿತ್ತು. ಆದರೆ ಆರೇ ಆರು ಗಂಟೆಗಳಲ್ಲಿ ನಿರ್ಣಯ ಬದಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ