AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪುಟ್ನಿಕ್​ ವಿ ಲಸಿಕೆ ತೆಗೆದುಕೊಂಡವರು ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ, ಸಾವಿಗೀಡಾಗಿಲ್ಲ: ಆರ್​ಡಿಐಎಫ್ ಅಧ್ಯಯನ

ಮೊದಲ ಮತ್ತು ಎರಡನೇ ಹಂತದ ವೈದ್ಯಕೀಯ ಪರೀಕ್ಷೆಯಲ್ಲೂ ಸ್ಪುಟ್ನಿಕ್ ವಿ ಉತ್ತಮ ಫಲಿತಾಂಶವನ್ನು ನೀಡಿದ್ದು, ಮೂರನೇ ಹಂತದ ಪರೀಕ್ಷೆ ವೇಳೆಗೂ ಸ್ಪುಟ್ನಿಕ್​ ವಿ ಪಡೆದವರಲ್ಲಿ ಯಾವುದೇ ಸಾವು ಸಂಭವಿಸದೇ ಇರುವುದು ಹಾಗೂ ಯಾರೂ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ನಿರ್ಮಾಣವಾಗದೇ ಇರುವುದು ಗೊತ್ತಾಗಿದೆ.

ಸ್ಪುಟ್ನಿಕ್​ ವಿ ಲಸಿಕೆ ತೆಗೆದುಕೊಂಡವರು ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ, ಸಾವಿಗೀಡಾಗಿಲ್ಲ: ಆರ್​ಡಿಐಎಫ್ ಅಧ್ಯಯನ
ಸ್ಪುಟ್ನಿಕ್​ ವಿ ಲಸಿಕೆ
TV9 Web
| Edited By: |

Updated on: Jul 12, 2021 | 12:10 PM

Share

ದೆಹಲಿ: ರಷ್ಯಾ ಮೂಲದ ಕೊರೊನಾ ಲಸಿಕೆ ಸ್ಪುಟ್ನಿಕ್​ ವಿ ಸಾಮರ್ಥ್ಯದ ಬಗ್ಗೆ ಅದರ ಹೂಡಿಕೆದಾರ ಸಂಸ್ಥೆ ದಿ ರಷ್ಯನ್ ಡೈರೆಕ್ಟ್​ ಇನ್​ವೆಸ್ಟ್​ಮೆಂಟ್ ಫಂಡ್ (ಆರ್​ಡಿಐಎಫ್) ಅತ್ಯಂತ ಆಶಾದಾಯಕ ಮಾತುಗಳನ್ನಾಡಿದೆ. ಸ್ಯಾನ್​ ಮೆರಿನೋ ಪ್ರದೇಶದಲ್ಲಿ ಮಾರ್ಚ್​ 4ರಿಂದ ಜೂನ್ 8ರ ತನಕ ನಡೆಸಲಾದ ಅಧ್ಯಯನದಲ್ಲಿ ಸ್ಪುಟ್ನಿಕ್​ ಲಸಿಕೆ ತೆಗೆದುಕೊಂಡವರಲ್ಲಿ ಯಾರೂ ಆಸ್ಪತ್ರೆಗೆ ದಾಖಲಾಗದೇ ಕೊರೊನಾ ವಿರುದ್ಧ ಸಶಕ್ತರಾಗಿ ಹೋರಾಡಿರುವುದು ಕಂಡುಬಂದಿದೆ. ಇದಕ್ಕೆ ಸಂಬಂಧಿಸಿದ ವರದಿಯನ್ನು ಲ್ಯಾನ್ಸೆಟ್ ವತಿಯಿಂದ ಪ್ರಕಟಿಸಲಾಗಿದ್ದು, 60 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಪರಿಣಾಮಕಾರಿಯಾಗಿದೆ ಎಂದು ತಿಳಿದುಬಂದಿದೆ.

ಸ್ಯಾನ್​ ಮೆರಿನೋದಲ್ಲಿ ನಡೆಸಲಾದ ಈ ಅಧ್ಯಯನದಲ್ಲಿ ಮಾರ್ಚ್ 4ರಿಂದ ಜೂನ್ 8ರ ತನಕ ಒಂದು ಅಥವಾ ಎರಡು ಡೋಸ್ ಸ್ಪುಟ್ನಿಕ್ ವಿ ಲಸಿಕೆ ಪಡೆದವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ಪ್ರಕಾರ ಬೇರೆ ಲಸಿಕೆಗಳಿಗೆ ಹೋಲಿಸಿದರೆ 60 ವರ್ಷ ಮೇಲ್ಪಟ್ಟವರಲ್ಲಿ ಸ್ಪುಟ್ನಿಕ್​ ವಿ ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು, ಎರಡು ಡೋಸ್​ಗಳನ್ನು ಪಡೆದವರಿಗೆ ಉತ್ತಮ ರಕ್ಷಣೆ ನೀಡುವ ಸಾಮರ್ಥ್ಯ ಹೊಂದಿದೆ ಎನ್ನುವುದು ತಿಳಿದುಬಂದಿದೆ.

ಮೊದಲ ಮತ್ತು ಎರಡನೇ ಹಂತದ ವೈದ್ಯಕೀಯ ಪರೀಕ್ಷೆಯಲ್ಲೂ ಸ್ಪುಟ್ನಿಕ್ ವಿ ಉತ್ತಮ ಫಲಿತಾಂಶವನ್ನು ನೀಡಿದ್ದು, ಮೂರನೇ ಹಂತದ ಪರೀಕ್ಷೆ ವೇಳೆಗೂ ಸ್ಪುಟ್ನಿಕ್​ ವಿ ಪಡೆದವರಲ್ಲಿ ಯಾವುದೇ ಸಾವು ಸಂಭವಿಸದೇ ಇರುವುದು ಹಾಗೂ ಯಾರೂ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ನಿರ್ಮಾಣವಾಗದೇ ಇರುವುದು ಗೊತ್ತಾಗಿದೆ.

ಈ ಹಿಂದೆ ಲ್ಯಾನ್ಸೆಟ್​ ಪ್ರಕಟಿಸಿದ ವರದಿ ಪ್ರಕಾರ ಸ್ಪುಟ್ನಿಕ್​ ವಿ ಲಸಿಕೆ ಶೇ.91.6ರಷ್ಟು ಪರಿಣಾಮಕಾರಿಯಾಗಿದ್ದು, ಡೆಲ್ಟಾ ವೈರಾಣುವಿನಿಂದಲೂ ರಕ್ಷಣೆ ಕೊಡುವ ಸಾಮರ್ಥ್ಯ ಹೊಂದಿದೆ ಎಂದು ಹೇಳಲಾಗಿತ್ತು. ಅದೇ ವಿಚಾರದ ಬಗ್ಗೆ ವರದಿ ನೀಡಿದ್ದ ಆರ್​ಡಿಐಎಫ್ ಸ್ಪುಟ್ನಿಕ್​ ವಿ ಲಸಿಕೆ ಶೇ.97.6ರಷ್ಟು ಪರಿಣಾಮಕಾರಿ ಎಂದು ತಿಳಿಸಿತ್ತು. ಸದ್ಯ ಬೇರೆಲ್ಲಾ ಲಸಿಕೆಗಳಿಗೆ ಹೋಲಿಸಿದಲ್ಲಿ ಸ್ಪುಟ್ನಿಕ್ ವಿ ಲಸಿಕೆಯ ಕಾರ್ಯಕ್ಷಮತೆಯ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Sputnik V: ಕೋವಿಶೀಲ್ಡ್​, ಕೋವಾಕ್ಸಿನ್​ ನಂತರ ಮತ್ತೊಂದು ಕೊರೊನಾ ಲಸಿಕೆ, ಸ್ಪುಟ್ನಿಕ್​ ವಿ ಬೆಂಗಳೂರಿ​ನಲ್ಲಿ ಲಭ್ಯ ಸ್ಪುಟ್ನಿಕ್​ ಲೈಟ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ಡಿಸಿಜಿಐ; ಸಿಂಗಲ್​ ಡೋಸ್​ ವ್ಯಾಕ್ಸಿನ್​ ಬಳಕೆ ಸದ್ಯಕ್ಕಿಲ್ಲ

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ